Homeಕರ್ನಾಟಕಶಿವಮೊಗ್ಗ: ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ ಹಾರಿಸಿದ ದುಷ್ಕರ್ಮಿಗಳು

ಶಿವಮೊಗ್ಗ: ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ ಹಾರಿಸಿದ ದುಷ್ಕರ್ಮಿಗಳು

ಇನ್ನೂ ಪ್ರಕರಣದ ದಾಖಲಿಸದ ಪೊಲೀಸರು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ

- Advertisement -
- Advertisement -

ರಾಷ್ಟ್ರ ಲಾಂಛನವಾದ ಅಶೋಕ ಸ್ಥಂಭದ ಮೇಲೆ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ಶಿವಮೊಗ್ಗದ ಅಶೋಕ ನಗರದಲ್ಲಿ ನಡೆದಿದೆ. ಧ್ವಜವನ್ನು ವಶಪಡಿಸಿಕೊಂಡಿದ್ದಾಗಿ ನಾನುಗೌರಿ.ಕಾಂಗೆ ಪೊಲೀಸರು ಹೇಳಿದ್ದಾರೆ. ಈವರೆಗೆ ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ಹೇಳಿದ್ದು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಗಣೇಶ ಚತುರ್ಥಿ ಮೆರವಣಿಗೆಯ ಅಂಗವಾಗಿ ಬಿಜೆಪಿ ಬೆಂಬಲಿತ ಸಂಘಟನೆಗಳು ಶಿವಮೊಗ್ಗದಾದ್ಯಂತ ಕೇಸರಿ ಧ್ವಜಗಳು, ಗಾಂಧಿ ಕೊಲೆ ಆರೋಪಿ ವಿ.ಡಿ. ಸಾವರ್ಕರ್‌ ಮತ್ತು ಈ ಹಿಂದೆ ಹತ್ಯೆಗೀಡಾಗಿದ್ದ ರೌಡಿ ಶೀಟರ್‌ ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದ ಕಾರ್ಯಕರ್ತ ಹರ್ಷ ಅವರ ಫ್ಲೆಕ್ಸ್‌-ಬ್ಯಾನರ್‌ಗಳನ್ನು ಕೂಡಾ ಹಾಕಲಾಗಿತ್ತು. ಇದೇ ವೇಳೆ ದುಷ್ಕರ್ಮಿಗಳು ರಾಷ್ಟ್ರ ಲಾಂಛನದ ಮೇಲೆ ಕೂಡಾ ಕೇಸರಿ ಧ್ವಜವನ್ನು ಕಟ್ಟಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಮೊಗ್ಗದಲ್ಲಿ ಇತ್ತಿಚೆಗಷ್ಟೆ ಬ್ಯಾನರ್‌ ವಿಚಾರವಾಗಿ ಚಾಕು ಇರಿತ ಘಟನೆ ನಡೆದಿತ್ತು. ಸರಣಿ ಕೋಮು ದುರ್ಘಟನೆಗಳಿಂದ ನಗರವೂ ಕೋಮು ಸೂಕ್ಷ್ಮ ಪ್ರದೇಶವಾಗಿ ಮಾರ್ಪಟ್ಟಿದೆ. ಗಣೇಶ ಚತುರ್ಥಿಯನ್ನು ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಸ್ಥಾಪಿಸಿದ್ದ ಪಕ್ಷವಾದ HMS ಪ್ರತಿಷ್ಠಾಪಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದು, ಕಟ್ಟೆಚ್ಚರ ವಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿವಮೊಗ್ಗ ಗ್ರಾಮಾಂತರ: ಅಭಿವೃದ್ಧಿ ಮರೀಚಿಕೆಯಾದ ಮೀಸಲು ಕ್ಷೇತ್ರದಲ್ಲಿ ಮೇಲ್ವರ್ಗದ ಜಾತಿಪ್ರತಿಷ್ಠೆ!

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಿವಮೊಗ್ಗೆ ಡಿಎಸ್‌ಪಿ ಬಾಲರಾಜ್,“ಧ್ವಜವನ್ನು ವಿಡಿಯೊಗ್ರಾಫ್ ಮಾಡಿ ಕಾರ್ಪೋರೇಷನ್ ಕಡೆಯಿಂದ ತೆಗೆಸಿ ಅವನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸುತ್ತೇವೆ. ಇದೀಗ ಕಾನೂನು ತಜ್ಞರ ಸಹಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು ಸಂಘಟಿಸಿದವರ ವಿರುದ್ಧ ಕ್ರಮಕೈಗೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅದನ್ನು ಯಾರು ಹಾಕಿದ್ದಾರೆ ಎಂದು ಇನ್ನೂ ಗೊತ್ತಿಲ್ಲ. ಅಲ್ಲಿನ ಸಿಸಿ ಕ್ಯಾಮರಾ ಎಲ್ಲವನ್ನೂ ಪರಿಶೀಲಿಸಬೇಕು” ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈ ಹಿಂದೆ ಶಿವಮೊಗ್ಗದ ಬಿಜೆಪಿ ಶಾಸಕ, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಕೆಂಪು ಕೋಟೆಯಲ್ಲಿ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಡಿ.ಎಸ್‌. ಪಿ. ಬಾಲರಾಜ್ ತಲೆಯಲ್ಲಿ ಮನುವಾದ ತುಂಬಿರುವಂತಿದೆ. ಅವಮಾನ ಆಗಿರುವುದು ರಾಷ್ಟ್ರಲಾಂಚನಕ್ಕೆ. ಯಾರೂ ದೂರು ಕೊಡದಿದ್ದರೂ, ಸ್ವಯಂ ಪ್ರೇರಿತ ದೂರನ್ನು ದಾಕಲಿಸಬೇಕು. ಇಲ್ಲದಿದ್ದರೆ ಈ ಬಾಲರಾಜ್ ವಿರುದ್ಧವೂ ಕರ್ತವ್ಯಲೋಪದ ದೂರನ್ನು ದಾಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...