Homeಮುಖಪುಟಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಕೊಲೆ; ಶಾಲಾ ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಕೊಲೆ; ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಕಾಮತ್ ಪೆಟ್ರೋಲ್‌ ಬಂಕ್‌ ಸಮೀಪದ ಭಾರತಿ ಕಾಲೋನಿಯಲ್ಲಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆಯಾದ ಯುವಕನನ್ನು ಬಜರಂಗ ದಳದ ಕಾರ್ಯಕರ್ತ ಹರ್ಷ ಎಂದು ಗುರುತಿಸಲಾಗಿದ್ದು, ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆಗೆ ಕ್ರಮ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಜರುಗಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾನುವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ಕೊಲೆಯಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆಯ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಹರ್ಷ ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರವನ್ನು ಪೋಸ್ಟ್‌ ಮಾಡಿದ್ದರು. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೊತೆಗೆ ಗಡಿಪಾರಾಗಿದ್ದ ಎಂದೂ ತಿಳಿದುಬಂದಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಅವರು, “ಮುಸ್ಲಿಂ ಗುಂಪಿನಿಂದ ಹರ್ಷ ಅವರ ಕೊಲೆಯಾಗಿದೆ” ಎಂದು ಆರೋಪಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇವೆ. ಹರ್ಷ ಸಾವಿಗೆ ನ್ಯಾಯ ದೊರಕಿಸಿಕೊಡಬೇಕಾಗಿ ಕುಟುಂಬ ಮನವಿ ಮಾಡಿದೆ. ಸರ್ಕಾರ ನಿಮ್ಮ ಪರವಾಗಿದೆ ಎಂದು ಅವರಿಗೆ ತಿಳಿಸಿದ್ದೇವೆ. ಜನರು ಶಾಂತಿ ಕಾಪಾಡಿಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

“ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಈಗಾಗಲೇ ಸಾಕ್ಷಿ ಕೂಡ ಸಿಕ್ಕಿದೆ. ಪ್ರಕರಣ ತನಿಖೆಯಾಗುತ್ತಿರುವುದರಿಂದ ಆರೋಪಿಗಳ ಹೆಸರನ್ನು ಹೇಳಬಾರದು. ಸಮಾಧಾನಕರ ಸಂಗತಿ ಏನೆಂದರೆ ಯಾರು ಕೊಲೆ ಮಾಡಿದ್ದಾರೆಂದು ಗೊತ್ತಾಗಿದೆ. ಅವರನ್ನು ಹಿಡಿಯುತ್ತಾರೆ. ಬಹುಬೇಗ ಆರೋಪಿಗಳನ್ನು ಬಂಧಿಸಲಾಗುತ್ತದೆ. ನಾಲ್ಕರಿಂದ ಐದು ಜನರು ಕೊಲೆಯಲ್ಲಿ ಭಾಗಿಯಾಗಿರಬಹುದು ಎಂಬ ಮಾಹಿತಿ ಇದೆ. ಇನ್ನಷ್ಟು ಖಚಿತ ಆಗಬೇಕಾಗಿದೆ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಶಿವಮೊಗ್ಗದಲ್ಲಿ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ ಸಂಗತಿ. ಈ ರೀತಿಯ ವಿಕೃತಿಯನ್ನು ಯಾರೂ ಏನೇ ಮಾಡಿದರೂ ಬಜಾವ್ ಮಾಡಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಕೊಡುತ್ತೇವೆ” ಎಂದಿದ್ದಾರೆ.

“ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಾಗಲಿದೆ. ಕೊಲೆಯಾದ ಕಾರ್ಯಕರ್ತನ ಮೇಲೂ ಒಂದೆರಡು ಪ್ರಕರಣ ಇದೆ ಎಂಬ ಮಾಹಿತಿಯನ್ನು ಕೊಡುತ್ತಿದ್ದಾರೆ. ಆಮೇಲೆ ನಾನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಗಾಗಿ ಕೊಲೆಯಾಗಿದೆಯೇ ಎಂಬ ಆಯಾಮದಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ‘ಮಲೆನಾಡು ವಿರರ್‌’ ವರದಿ ಮಾಡಿದೆ.


ಇದನ್ನೂ ಓದಿರಿ: ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...