Homeಕರ್ನಾಟಕಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ಸೂರಿಗಾಗಿ ಹೋರಾಟ - ಉಸ್ತುವಾರಿ ಸಚಿವರ ಭರವಸೆ

ಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ಸೂರಿಗಾಗಿ ಹೋರಾಟ – ಉಸ್ತುವಾರಿ ಸಚಿವರ ಭರವಸೆ

ಶಿವಮೊಗ್ಗದ ಅಂಬೇಡ್ಕರ್ ನಗರದ ಆದಿವಾಸಿಗಳಿಗೆ ಇದುವರೆಗೂ ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಲಭ್ಯ ಒದಿಗಿಸಿಲ್ಲ. ನೀರು, ರಸ್ತೆ, ಶೌಚಾಲಯ, ವಿದ್ಯುತ್ ವ್ಯವಸ್ಥೆ ಇಲ್ಲದೆ ಇಂದಿಗೂ ಪರಿತಪಿಸುತ್ತಿದ್ದಾರೆ.

- Advertisement -
- Advertisement -

ಹಲವು ದಶಕಗಳಿಂದ ಅಲೆಮಾರಿಗಳು ಅಲೆದು ಅಲೆದು ಸಾಕಾಗಿದ್ದಾರೆ. ಕೊರೊನಾ ಲಾಕ್‌ಡೌನ್ ಸಮಯವಂತೂ ಅವರನ್ನು ಇನ್ನಿಲ್ಲದ ಸಂಕಷ್ಟಕ್ಕೀಡುಮಾಡಿದೆ. ತುತ್ತು ಕೂಳಿಗಾಗಿ ಜೀವಮಾನವಿಡಿ ಅಲೆಯುತ್ತಲೇ ಇದ್ದ ಅವರಿಗೆ ಒಂದೆಡೆ ನೆಲೆನಿಂತು ತಮ್ಮ ಬದುಕು ಕಟ್ಟಿಕೊಳ್ಳುವ ಆಸೆಗೆ ಜಿಲ್ಲಾಡಳಿತವಾಗಲಿ, ಸರ್ಕಾರವಾಗಲಿ ಸ್ಪಂದಿಸುತ್ತಿಲ್ಲ. ಕೊನೆಗೆ ಅಲೆಮಾರಿಗಳು ಶಾಶ್ವತ ಸೂರಿಗಾಗಿ ಹೋರಾಟಕ್ಕಿಳಿದಿದ್ದು, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಕ.ರಾ.ರೈ.ಸಂಘ ಮತ್ತು ಕರ್ನಾಟಕ ಜನಶಕ್ತಿ ಅವರ ಬೆಂಬಲಕ್ಕೆ ನಿಂತಿವೆ.

ಶಿವಮೊಗ್ಗದ ಅಂಬೇಡ್ಕರ್ ನಗರದಲ್ಲಿ (ಹಕ್ಕಿಪಿಕ್ಕಿ ಕಾಲೋನಿ) 350ಕ್ಕೂ ಹೆಚ್ಚು ಕುಟುಂಬಗಳ ಸಾವಿರಾರು ಜನರು ಕಳೆದ 8-10 ವರ್ಷಗಳಿಂದ ನೆಲೆಸಿದ್ದಾರೆ. ಅದಕ್ಕೂ ಮೊದಲು ಅವರು ತಮಗೊಂದು ಶಾಶ್ವತ ನೆಲೆ ಒದಗಿಸುವಂತೆ ಹಲವು ಬಾರಿ ಸರ್ಕಾರಕ್ಕೆ, ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಆಗ ಸರ್ಕಾರ ಹಾಯನೂರು ಹೋಬಳಿಯ ವೀರಣ್ಣನ ಬೆಳ್ಳಹಳ್ಳಿಯಲ್ಲಿ ಅವರಿಗೆ 4 ಎಕರೆ ಜಾಗ ಮಂಜೂರು ಮಾಡಿತ್ತು. ಆದರೆ ಬೆಳ್ಳಹಳ್ಳಿಯ ನಿವಾಸಿಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿ ಅದು ಅರಣ್ಯ ಭೂಮಿಯೆಂದು ದಾವೆಯೂಡಿದ ಪರಿಣಾಮ ಅವರ ಶಾಶ್ವತ ನೆಲೆ ಆಸೆ ಕನಸಾಗಿಯೇ ಉಳಿಯಿತು.

ತದನಂತರ ಆ ಅಲೆಮಾರಿಗಳೆಲ್ಲರು ಶಿವಮೊಗ್ಗದ ಅಂಬೇಡ್ಕರ್ ನಗರಕ್ಕೆ ಬಂದು ನೆಲೆಸಿದರಾದರೂ ಅವರಿಗೆ ಇದುವರೆಗೂ ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಲಭ್ಯ ಒದಿಗಿಸಿಲ್ಲ. ನೀರು, ರಸ್ತೆ, ಶೌಚಾಲಯ, ವಿದ್ಯುತ್ ವ್ಯವಸ್ಥೆ ಇಲ್ಲದೆ ಇಂದಿಗೂ ಪರಿತಪಿಸುತ್ತಿದ್ದಾರೆ. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡರೆ ಅದಕ್ಕೂ ಬಿಡದೇ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅಲ್ಲಿನ ನಿವಾಸಿಗಳು ದೂರುತ್ತಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪನವರು, “ಭಾರತದ ಪ್ರಜೆಗಳೇ ಆದ, ಚಿಂದಿ ಆಯುತ್ತಾ ನೈರ್ಮಲ್ಯ ಕಾಪಾಡುವುದರೊಂದಿಗೆ ಕಠಿಣ ಶ್ರಮ ಹಾಕಿ ದುಡಿಯುವ ಈ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಬೇಕು, ಅವರಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಹಕ್ಕುಪತ್ರ ನೀಡಬೇಕೆನ್ನುವುದು ನಮ್ಮ ನಿರಂತರ ಆಗ್ರಹ. ಹಲವು ಹೋರಾಟಗಳ ಫಲವಾಗಿ ಡಿಸಿ, ಎಸಿ, ತಹಶೀಲ್ದಾರ್‌ರವರು ಸ್ಥಳಪರಿಶೀಲನೆ ನಡೆಸಿದ್ದಾರೆ. ಸ್ಲಂ ಬೋರ್ಡ್ ಅಧಿಕಾರಿಗಳು ಸಹ ಒಪ್ಪಿಗೆ ನೀಡಿದ್ದಾರೆ. ಸ್ಲಂ ಎಂದು ಘೋಷಿಸಲು ಎಲ್ಲರೂ ಅನಮತಿ ನೀಡಿದರೂ ಸಹ ನಗರ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಇಲ್ಲಿನ ಜನ ಕಷ್ಟ ಅನುಭವಿಸುವಂತಾಗಿದೆ” ಎನ್ನುತ್ತಾರೆ.

ಹಾಲೇಶಪ್ಪ

ಇಲ್ಲಿನ ಜನರ ಹಕ್ಕೊತ್ತಾಯಗಳಿಗೆ ವಿರುದ್ಧವಾಗಿ ನಗರ ಪಾಲಿಗೆ ನಡೆದುಕೊಳ್ಳುತ್ತಿದೆ. ಅವರು ಅನಧಿಕೃತವಾಗಿ ಹಾಕಿಕೊಂಡಿದ್ದ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಅಧಿಕಾರಿಗಳು ಕಿತ್ತುಹಾಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ಕಳೆದ 2 ತಿಂಗಳಿನಿಂದಲೂ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಅಂಬೇಡ್ಕರ್ ನಗರದ ಮೂಲನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಸ್ಲಂ ಎಂದು ಘೋಷಿಸುವಂತೆ ಒತ್ತಾಯಿಸಿ ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪನವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ. ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರು ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಲ್ ಅಶೋಕ್‌ರವರು ಉಸ್ತುವಾರಿ ಮಂತ್ರಿಗಳ ಬಳಿ ಒತ್ತಡ ತಂದಿದ್ದರೆ. ಒಂದು ವಾರದಲ್ಲಿ ತಮ್ಮ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಸಭೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಈಗಲಾದರೂ ಈ ಅಲೆಮಾರಿಗಳಿಗೆ ನೆತ್ತಿಗೊಂದು ಸೂರು ಸಿಕ್ಕಿ ನೆಮ್ಮದಿಯಿಂದ ಬದುಕುವಂತಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ ನಿರ್ಣಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...