Homeಕರ್ನಾಟಕಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದ ಸಾವರ್ಕರ್‌ ಫೋಟೋವನ್ನು ತನ್ನ ಜಾಹೀರಾತುಗಳಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದೆ.

- Advertisement -
- Advertisement -

ಶಿವಮೊಗ್ಗ ಸಿಟಿ ಸೆಂಟರ್ ಮಾಲ್‌‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮಧ್ಯದಲ್ಲಿ ಒಳ ನುಸುಳಿದ್ದ ವಿ.ಡಿ.ಸಾವರ್ಕರ್‌ ಫೋಟೋವನ್ನು ಜನರೇ ತೆರವು ಮಾಡಿಸಿರುವ ವಿಡಿಯೊ ವೈರಲ್ ಆಗಿದೆ.

“ಬ್ರಿಟಿಷರ ಬೂಟು ನೆಕ್ಕಿ, ಕ್ಷಮಾಪಣೆ ಭಿಕ್ಷೆ ಕೇಳಿದ್ದ ಸಾವರ್ಕರ್ ಭಾವಚಿತ್ರವನ್ನು ತೆಗೆದು ಹಾಕಬೇಕು” ಎಂದು ಆಗ್ರಹಿಸುತ್ತಿರುವ ಯುವಕನಿಗೆ ಇನ್ನಿತರರು ಸಾಥ್ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಮೌಲಾನ ಅಬ್ದುಲ್ ಕಲಾಂ ಆಜಾದ್ ಅವರ ಫೋಟೋವನ್ನು ಹಾಕಬೇಕೆಂದು ಆಗ್ರಹಿಸಲಾಗಿದೆ. ಅಲ್ಲದೇ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಫೋಟೋವನ್ನು ಸಾವರ್ಕರ್‌ ಫೋಟೋಕ್ಕಿಂತ ಚಿಕ್ಕದ್ದಾಗಿ ಹಾಕಿದ್ದನ್ನು ಪ್ರಶ್ನಿಸಲಾಗಿದೆ. ಸಿಟಿ ಸೆಂಟರ್‌ ಮಾಲ್‌ನವರು ಸಾವರ್ಕರ್‌ ಫೋಟೋವನ್ನು ತೆರವು ಮಾಡಿ ಮಾದರಿಯಾಗಿದ್ದಾರೆ.

ಬಿಜೆಪಿ ಆಕ್ರೋಶ

ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ಸಾವರ್ಕರ್‌ ಫೋಟೋವನ್ನು ತೆಗೆಸಿಹಾಕಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಎಸ್‌ಡಿಪಿಐ ಕಾರ್ಯಕರ್ತರು ಫೋಟೋವನ್ನು ತೆಗೆಸಿದ್ದು, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು” ಎಂದು ಪ್ರತಿಭಟನೆ ನಡೆಸಲಾಗಿದೆ.

ಸರ್ಕಾರದ ಜಾಹೀರಾತಿನಲ್ಲಿ ಸಾವರ್ಕರ್‌

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರ ಕನ್ನಡದ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿಯೂ ಸಾವರ್ಕರ್ ಫೋಟೋ ನುಸುಳಿದೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಸಾವರ್ಕರ್‌ ಫೋಟೋವನ್ನು ಮುದ್ರಿಸಲಾಗಿದೆ. ‘ಕ್ರಾಂತಿಕಾರಿ’ ಎಂಬ ಬಿರುದನ್ನು ಸಾವರ್ಕರ್‌ಗೆ ನೀಡಲಾಗಿದೆ.

ನೆಹರೂ ಪರಿಚಯವಿಲ್ಲ: ಜನಾಕ್ರೋಶ

ಸರ್ಕಾರ ನೀಡಿರುವ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯವನ್ನು ನೀಡಲಾಗಿಲ್ಲ. ಜಾಹೀರಾತಿನಲ್ಲಿ ರೇಖಾಚಿತ್ರದ ಮಾದರಿಯಲ್ಲಿ ರಾಷ್ಟ್ರನಾಯಕರ ಫೋಟೋಗಳನ್ನು ಬಳಸಲಾಗಿದ್ದು, ಅಲ್ಲಿ ನೆಹರೂ ಚಿತ್ರವನ್ನು ನೀಡಲಾಗಿದೆ. ಸಾವರ್ಕರ್‌ ಚಿತ್ರವನ್ನು ಅಲ್ಲಿಯೂ ಹಾಕಲಾಗಿದೆ. ನೆಹರೂ ಫೋಟೋ ಹಾಗೂ ವಿವರಣೆ ಇಲ್ಲದಿರುವುದಕ್ಕೆ ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡದ್ದಕ್ಕಾಗಿ ಜವಾಹರಲಾಲ್ ನೆಹರೂ ಅವರನ್ನು ಬ್ರಿಟಿಷ್ ಸರಕಾರ 9 ಬಾರಿ ಬಂಧಿಸಿತ್ತು. ಒಟ್ಟು 3259 ದಿನ (ಸುಮಾರು 9 ವರ್ಷ) ಜೈಲಿನಲ್ಲಿ ಇರಿಸಿತ್ತು”  ಎಂದು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿರುವ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಚಿಂತಕ ರಾಜಾರಾಮ್‌ ತಲ್ಲೂರು ಪ್ರತಿಕ್ರಿಯೆ ನೀಡಿದ್ದು, “ಇಂದು ರಾಜ್ಯ ಸರ್ಕಾರದ ವತಿಯಿಂದ ಪ್ರಕಟಗೊಂಡಿರುವ (ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಡಿ ಬರುವ ಕರ್ನಾಟಕವಾರ್ತೆ ಈ ಜಾಹೀರಾತು ಪ್ರಕಟಿಸಿದೆ) ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯು ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರೂ, ಸ್ವತಂತ್ರ ಭಾರತದ ಪ್ರಥಮ ಪ್ರಧಾನಮಂತ್ರಿಗಳೂ ಆದ ಪಂಡಿತ್ ಜವಹರಲಾಲ್ ನೆಹರೂ ಅವರ (ಮತ್ತು ಅಲ್ಲಿ ಕಾಣಿಸಿಕೊಳ್ಳಲೇ ಬೇಕಾಗಿದ್ದ ಹಲವು ಮಂದಿ ಪ್ರಮುಖ ಹೋರಾಟಗಾರರ) ಚಿತ್ರವನ್ನು ಕೈಬಿಟ್ಟಿದೆ. ಇದು ಅಕಸ್ಮಾತ್ ಸಂಭವಿಸಿರುವ ಪ್ರಮಾದವೇ? ತಳಮಟ್ಟದಲ್ಲಿ ಸಂಭವಿಸಿರುವ ಕರ್ತವ್ಯ ಲೋಪವೇ? ಉದ್ದೇಶಪೂರ್ವಕ ಕೃತ್ಯವೇ? ಸೈದ್ಧಾಂತಿಕವಾದ ಕುತರ್ಕವೆ? ಅಥವಾ ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡದ್ದೇ “ಫೇಕ್ ಸುದ್ದಿಯೆ?” ಕರ್ನಾಟಕ ಸರ್ಕಾರ ಈ ಬಗ್ಗೆ ಸ್ಪಷ್ಟೀಕರಣವನ್ನು ನೀಡುವುದು ತನ್ನ ನೈತಿಕ, ಸಾಮಾಜಿಕ, ರಾಷ್ಟ್ರೀಯ ಮತ್ತು ಸಾಂವಿಧಾನಿಕ ಜವಾಬ್ದಾರಿ ಎಂದು ಭಾವಿಸಬೇಕು. ದೇಶದ ಒಬ್ಬ ನಾಗರಿಕನಾಗಿ ನಾನು ಈ ಲೋಪಕ್ಕಾಗಿ ತಲೆತಗ್ಗಿಸುತ್ತೇನೆ” ಎಂದಿದ್ದಾರೆ.

ಬರಹಗಾರ್ತಿ ಪಲ್ಲವಿ ಇಡೂರು ಅವರು ಪ್ರತಿಕ್ರಿಯೆ ನೀಡಿ, “ಬಿಜೆಪಿ ಸರ್ಕಾರ ತನ್ನ ಪ್ರೊಪಗಂಡಾ ವಿಚಾರ ಬಂದಾಗ ಗಟಾರಕ್ಕಾದದೂ ಇಳಿಯಬಲ್ಲದು ಅನ್ನುವುದಕ್ಕೆ ನೆಹರೂ ಅವರನ್ನು ಹೊರತುಪಡಿಸಿ ಕೊಟ್ಟ ಈ ಜಾಹೀರಾತೇ ಸಾಕ್ಷಿ! ಕೀಲಿ ಬೊಂಬೆ ಬೊಮ್ಮಾಯಿಯವರೇ, ನೀವು ನಿಮ್ಮ ಗಟಾರದ ಪಕ್ಷ ತಿಪ್ಪರಲಾಗ ಹಾಕಿದರೂ ಇತಿಹಾಸ ಬದಲಿಸಲಾರಿರಿ. ಸ್ವಾತಂತ್ರ್ಯ ಹೋರಾಟ ಮಾಡಿದ ಪಕ್ಷ ಎನ್ನಿಸಿಕೊಳ್ಳಲಾರಿರಿ! ಅಂದಹಾಗೆ ಇಷ್ಟೊಂದು ಸುಳ್ಳು ಹೇಳಿ ಯಾವ ಘನಕಾರ್ಯ ಮಾಡಲಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರಿ ಈ ನಡೆ ಖಂಡನೀಯ…..ಹೇಡಿಯನ್ನು ವೀರನನ್ನಾಗಿಸುವ ಹೇಡಿಗಳ ಸಾಮ್ರಾಜ್ಯವಿದು….

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...