Homeಕರ್ನಾಟಕಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

ಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

- Advertisement -
- Advertisement -

ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ  ಇಂದು (ಗುರುವಾರ) ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಿ ಗೌರವ ಸಲ್ಲಿಸಲಾಗುತ್ತಿತ್ತು. ಈ ವೇಳೆ ಶಾಸಕ ಕೆಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಕಾರಣಕ್ಕೆ ಮತ್ತು ಅಲ್ಲಿ ನೆರೆದಿರುವವರೆಲ್ಲರೂ ತಮಿಳರು ಆಗಿದ್ದರಿಂದ ಅವರ ಮತ ಸೆಳೆಯಲು ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಹಾಕಲಾಗಿತ್ತು. ಈ ಕಾರ್ಯಕ್ರಮದಲ್ಲಿ ಈಶ್ವರಪ್ಪ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ (ಚನ್ನಿ) ಕೂಡ ಪಾಲ್ಗೊಂಡಿದ್ದರು.

ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಎಲ್ಲರೂ ಎದ್ದು ನಿಂತು ತಮಿಳುನಾಡು ನಾಡಗೀತೆಗೆ ಗೌರವ ಸಲ್ಲಿಸುತ್ತಿದ್ದರು.

ಈ ವೇಳೆ ಇದ್ದಕ್ಕಿದ್ದಂತೆ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು. ನಂತರ ವೇದಿಕೆಯಲ್ಲಿದ್ದ ಗಣ್ಯರು ಕನ್ನಡದ ನಾಡಗೀತೆಗೆ ಗೌರವ ಸಲ್ಲಿಸಿದರು.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧದ ನಿಲುವು ಹೊಂದಿದ್ದ ಅಣ್ಣಾಮಲೈ ಅವರನ್ನು ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ನೇಮಿಸುವ ಮೂಲಕ ಬಿಜೆಪಿ ಕನ್ನಡಿಗರ ಸ್ವಾಭಿಮಾನವನ್ನು ಅಣಕವಾಡಿದೆ. ಈಗ ಅಣ್ಣಾಮಲೈ ಮೆಚ್ಚಿಸಲು ಕರ್ನಾಟಕದ ನಾಡಗೀತೆಯ ಬದಲು ತಮಿಳುನಾಡಿನ ನಾಡಗೀತೆ ಹಾಡಲಾಗಿದೆ. ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?” ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಪತ್ರಕರ್ತ ದಿನೇಶ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಣ್ಣಾಮಲೈ ಶಿವಮೊಗ್ಗದ ಬಿಜೆಪಿ ಪ್ರಚಾರ ಸಭೆಯಲ್ಲಿ ತಮಿಳು ನಾಡಗೀತೆ ಹಾಡಿಸಿ ಸುದ್ದಿಯಾಗಿದ್ದಾನೆ. ಮೊದಲೇ ಏಟಿನ ಮೇಲೆ ಏಟು ತಿಂದಿರುವ ರಾಜ್ಯ ಬಿಜೆಪಿ‌ ತಲೆ ಮೇಲೆ ಸುತ್ತಿಗೆಯಲ್ಲಿ ಬಾರಿಸಿದ್ದಾನೆ. ಇಷ್ಟೇ ಅಲ್ಲ, ಈತ ಕರ್ನಾಟಕದಲ್ಲಿ ಇರುವವರೆಗೆ ಒಂದಲ್ಲ ಒಂದು ತರಲೆ ಮಾಡುತ್ತಲೇ ಇರುತ್ತಾನೆ. ಅದಂತೂ ನಿಜ” ಎಂದು ಬರೆದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ… ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ…” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...