Homeಕರ್ನಾಟಕಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

ಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

- Advertisement -
- Advertisement -

ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ  ಇಂದು (ಗುರುವಾರ) ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಿ ಗೌರವ ಸಲ್ಲಿಸಲಾಗುತ್ತಿತ್ತು. ಈ ವೇಳೆ ಶಾಸಕ ಕೆಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಕಾರಣಕ್ಕೆ ಮತ್ತು ಅಲ್ಲಿ ನೆರೆದಿರುವವರೆಲ್ಲರೂ ತಮಿಳರು ಆಗಿದ್ದರಿಂದ ಅವರ ಮತ ಸೆಳೆಯಲು ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಹಾಕಲಾಗಿತ್ತು. ಈ ಕಾರ್ಯಕ್ರಮದಲ್ಲಿ ಈಶ್ವರಪ್ಪ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ (ಚನ್ನಿ) ಕೂಡ ಪಾಲ್ಗೊಂಡಿದ್ದರು.

ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಎಲ್ಲರೂ ಎದ್ದು ನಿಂತು ತಮಿಳುನಾಡು ನಾಡಗೀತೆಗೆ ಗೌರವ ಸಲ್ಲಿಸುತ್ತಿದ್ದರು.

ಈ ವೇಳೆ ಇದ್ದಕ್ಕಿದ್ದಂತೆ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು. ನಂತರ ವೇದಿಕೆಯಲ್ಲಿದ್ದ ಗಣ್ಯರು ಕನ್ನಡದ ನಾಡಗೀತೆಗೆ ಗೌರವ ಸಲ್ಲಿಸಿದರು.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧದ ನಿಲುವು ಹೊಂದಿದ್ದ ಅಣ್ಣಾಮಲೈ ಅವರನ್ನು ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ನೇಮಿಸುವ ಮೂಲಕ ಬಿಜೆಪಿ ಕನ್ನಡಿಗರ ಸ್ವಾಭಿಮಾನವನ್ನು ಅಣಕವಾಡಿದೆ. ಈಗ ಅಣ್ಣಾಮಲೈ ಮೆಚ್ಚಿಸಲು ಕರ್ನಾಟಕದ ನಾಡಗೀತೆಯ ಬದಲು ತಮಿಳುನಾಡಿನ ನಾಡಗೀತೆ ಹಾಡಲಾಗಿದೆ. ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?” ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಪತ್ರಕರ್ತ ದಿನೇಶ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಣ್ಣಾಮಲೈ ಶಿವಮೊಗ್ಗದ ಬಿಜೆಪಿ ಪ್ರಚಾರ ಸಭೆಯಲ್ಲಿ ತಮಿಳು ನಾಡಗೀತೆ ಹಾಡಿಸಿ ಸುದ್ದಿಯಾಗಿದ್ದಾನೆ. ಮೊದಲೇ ಏಟಿನ ಮೇಲೆ ಏಟು ತಿಂದಿರುವ ರಾಜ್ಯ ಬಿಜೆಪಿ‌ ತಲೆ ಮೇಲೆ ಸುತ್ತಿಗೆಯಲ್ಲಿ ಬಾರಿಸಿದ್ದಾನೆ. ಇಷ್ಟೇ ಅಲ್ಲ, ಈತ ಕರ್ನಾಟಕದಲ್ಲಿ ಇರುವವರೆಗೆ ಒಂದಲ್ಲ ಒಂದು ತರಲೆ ಮಾಡುತ್ತಲೇ ಇರುತ್ತಾನೆ. ಅದಂತೂ ನಿಜ” ಎಂದು ಬರೆದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ… ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ…” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...