Homeಕರ್ನಾಟಕಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

ಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

- Advertisement -
- Advertisement -

ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ  ಇಂದು (ಗುರುವಾರ) ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಿ ಗೌರವ ಸಲ್ಲಿಸಲಾಗುತ್ತಿತ್ತು. ಈ ವೇಳೆ ಶಾಸಕ ಕೆಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಕಾರಣಕ್ಕೆ ಮತ್ತು ಅಲ್ಲಿ ನೆರೆದಿರುವವರೆಲ್ಲರೂ ತಮಿಳರು ಆಗಿದ್ದರಿಂದ ಅವರ ಮತ ಸೆಳೆಯಲು ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಹಾಕಲಾಗಿತ್ತು. ಈ ಕಾರ್ಯಕ್ರಮದಲ್ಲಿ ಈಶ್ವರಪ್ಪ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ (ಚನ್ನಿ) ಕೂಡ ಪಾಲ್ಗೊಂಡಿದ್ದರು.

ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಎಲ್ಲರೂ ಎದ್ದು ನಿಂತು ತಮಿಳುನಾಡು ನಾಡಗೀತೆಗೆ ಗೌರವ ಸಲ್ಲಿಸುತ್ತಿದ್ದರು.

ಈ ವೇಳೆ ಇದ್ದಕ್ಕಿದ್ದಂತೆ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು. ನಂತರ ವೇದಿಕೆಯಲ್ಲಿದ್ದ ಗಣ್ಯರು ಕನ್ನಡದ ನಾಡಗೀತೆಗೆ ಗೌರವ ಸಲ್ಲಿಸಿದರು.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧದ ನಿಲುವು ಹೊಂದಿದ್ದ ಅಣ್ಣಾಮಲೈ ಅವರನ್ನು ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ನೇಮಿಸುವ ಮೂಲಕ ಬಿಜೆಪಿ ಕನ್ನಡಿಗರ ಸ್ವಾಭಿಮಾನವನ್ನು ಅಣಕವಾಡಿದೆ. ಈಗ ಅಣ್ಣಾಮಲೈ ಮೆಚ್ಚಿಸಲು ಕರ್ನಾಟಕದ ನಾಡಗೀತೆಯ ಬದಲು ತಮಿಳುನಾಡಿನ ನಾಡಗೀತೆ ಹಾಡಲಾಗಿದೆ. ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?” ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಪತ್ರಕರ್ತ ದಿನೇಶ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಣ್ಣಾಮಲೈ ಶಿವಮೊಗ್ಗದ ಬಿಜೆಪಿ ಪ್ರಚಾರ ಸಭೆಯಲ್ಲಿ ತಮಿಳು ನಾಡಗೀತೆ ಹಾಡಿಸಿ ಸುದ್ದಿಯಾಗಿದ್ದಾನೆ. ಮೊದಲೇ ಏಟಿನ ಮೇಲೆ ಏಟು ತಿಂದಿರುವ ರಾಜ್ಯ ಬಿಜೆಪಿ‌ ತಲೆ ಮೇಲೆ ಸುತ್ತಿಗೆಯಲ್ಲಿ ಬಾರಿಸಿದ್ದಾನೆ. ಇಷ್ಟೇ ಅಲ್ಲ, ಈತ ಕರ್ನಾಟಕದಲ್ಲಿ ಇರುವವರೆಗೆ ಒಂದಲ್ಲ ಒಂದು ತರಲೆ ಮಾಡುತ್ತಲೇ ಇರುತ್ತಾನೆ. ಅದಂತೂ ನಿಜ” ಎಂದು ಬರೆದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ… ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ…” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...