Homeಕರ್ನಾಟಕಶಿವಮೊಗ್ಗ: ಹೊಸ ವರ್ಷದ ಸಂಭ್ರಮಾಚರಣೆಗೆ ಗನ್‌ ಬಳಸುವ ವೇಳೆ ದುರಂತ; ಇಬ್ಬರ ದುರ್ಮರಣ

ಶಿವಮೊಗ್ಗ: ಹೊಸ ವರ್ಷದ ಸಂಭ್ರಮಾಚರಣೆಗೆ ಗನ್‌ ಬಳಸುವ ವೇಳೆ ದುರಂತ; ಇಬ್ಬರ ದುರ್ಮರಣ

- Advertisement -
- Advertisement -

ಹೊಸ ವರ್ಷದ ಆಚರಣೆಗಾಗಿ ಡಬ್ಬಲ್ ಬ್ಯಾರಲ್ ಗನ್‌ ಮೂಲಕ ಗುಂಡು ಹಾರಿಸಲು ಹೋಗಿ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ದುರಂತ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಇಲ್ಲಿನ ವಿದ್ಯಾನಗರದ 4ನೇ ಕ್ರಾಸ್‌ನಲ್ಲಿರುವ ಗೋಪಾಲ ಗ್ಲಾಸ್‌ಹೌಸ್ ಮಾಲೀಕ ಮಂಜುನಾಥ ಓಲೇಕಾರ ಅವರ ಮನೆಯಲ್ಲಿ ಈ ಅವಘಡ ನಡೆದಿದ್ದು ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.

ಮಂಜುನಾಥ ಅವರ ಮನೆಯ ಮಹಡಿಯ ಮೇಲೆ ಹೊಸ ವರ್ಷದ ಸ್ವಾಗತಕ್ಕೆ ಪಾರ್ಟಿ ಹಮ್ಮಿಕೊಳ್ಳಲಾಗಿತ್ತು. ರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಹೊಸ ವರ್ಷ ಸ್ವಾಗತಿಸಲು ಮಂಜುನಾಥ್ ಓಲೇಕಾರ (67) ಅವರು ಮನೆಯಲ್ಲಿದ್ದ ಡಬಲ್‌ ಬ್ಯಾರಲ್‌ ಗನ್‌ ಮೂಲಕ ಆಕಾಶದತ್ತ ಗುಂಡು ಹಾರಿಸಲು ಮುಂದಾಗಿದ್ದರು. ಇದೇ ಸಂದರ್ಭದಲ್ಲಿ ಗನ್‌ಗೆ ಬುಲೆಟ್‌ ತುಂಬಿಕೊಳ್ಳುವಾಗ ಅದು ಸಿಡಿದು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಪುತ್ರನ ಸ್ನೇಹಿತ ವಿನಯ್ (34) ಅವರಿಗೆ ತಗುಲಿದೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಗಾಯಗೊಂಡ ವಿನಯ್ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಯಿಂದ ಆಘಾತಕ್ಕೊಳಗಾದ ಮಂಜುನಾಥ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿನಯ್‌ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಟಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿದ್ದಾರೆ.

ರಾಜಸ್ಥಾನ: ಅಪಘಾತದಲ್ಲಿ ಐವರ ದುರ್ಮರಣ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಹೊಸ ವರ್ಷದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸರು ಮತ್ತು ದಾರಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಬಿಕಾನೇರ್‌ಗೆ ಕರೆದೊಯ್ಯಲಾಗಿದೆ. ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಸಂಬಂಧಿಕರು ಆಗಮಿಸಿದ ಬಳಿಕ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಹನುಮಾನ್‌ಗಢ ಜಿಲ್ಲೆಯ ಪಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಬಿಸ್ರಾಸರ್ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ತಡರಾತ್ರಿ ಇಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾರಿಹೋಕರ ಮಾಹಿತಿ ಮೇರೆಗೆ ಪಳ್ಳೂರು ಪೊಲೀಸರು ಸ್ಥಳಕ್ಕೆ ಧಾವಿಸಿದರು. ನಂತರ ದಾರಿಹೋಕರ ಸಹಾಯದಿಂದ ಪೊಲೀಸರು ಗಾಯಾಳುಗಳನ್ನು ಪಲ್ಲು ಆಸ್ಪತ್ರೆಗೆ ಕರೆದೊಯ್ದರು. ಗಾಯಗೊಂಡಿದ್ದ ಇಬ್ಬರು ಕೂಡ ಅಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಪ್ರಥಮ ಚಿಕಿತ್ಸೆ ನಂತರ ಬಿಕಾನೇರ್‌ಗೆ ರವಾನಿಸಲಾಗಿದೆ. ಅಪಘಾತದ ನಂತರ ಟ್ರಕ್ ಪಲ್ಟಿಯಾಗಿದ್ದು, ಅದರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ನ್ಯೂಯಾರ್ಕ್: ಅಧಿಕಾರಿಗಳಿಗೆ ಗಾಯ

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಹೊಸ ವರ್ಷದ ಮುನ್ನಾದಿನದ ಆಚರಣೆಯ ವೇಳೆ ಮಚ್ಚಿನಿಂದ ದಾಳಿ ಮಾಡಲಾಗಿದೆ. ಹೀಗಾಗಿ ನ್ಯೂಯಾರ್ಕ್ ನಗರದ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 10 ಗಂಟೆಯ ನಂತರ ಈ ಘಟನೆ ನಡೆದಿದೆ. ಶಂಕಿತ ವ್ಯಕ್ತಿಯು ಅಧಿಕಾರಿಯ ಬಳಿಗೆ ಬಂದು ಮಚ್ಚಿನಿಂದ ತಲೆಯ ಮೇಲೆ ಹೊಡೆಯಲು ಪ್ರಯತ್ನಿಸಿದನು ಎಂದು ಕಮಿಷನರ್ ಕೀಚಂಟ್ ಸೆವೆಲ್ ಹೇಳಿದ್ದಾರೆ. ಅಧಿಕಾರಿಗಳ ಭುಜಕ್ಕೆ ಆತ ಗುಂಡು ಹಾರಿಸುವ ಮೊದಲು ಇಬ್ಬರು ಅಧಿಕಾರಿಗಳ ತಲೆಗೆ ಬ್ಲೇಡ್‌ನಿಂದ ಹೊಡೆದಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಸೆವೆಲ್ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...