Homeಮುಖಪುಟಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ಡೀಲ್ ಮಾಡಿದ ಶಿಂಧೆ ಬಣ: ಸಂಜಯ್ ರಾವತ್ ಆರೋಪ

ಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ಡೀಲ್ ಮಾಡಿದ ಶಿಂಧೆ ಬಣ: ಸಂಜಯ್ ರಾವತ್ ಆರೋಪ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವು ಶಿವಸೇನೆಯ ಮೂಲ ಹೆಸರು ಮತ್ತು ಅದರ ಬಿಲ್ಲು-ಬಾಣದ ಚಿಹ್ನೆಯನ್ನು ಪಡೆಯಲು ಭಾರತದ ಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ವ್ಯವಹಾರ ಮಾಡಿಕೊಂಡಿದೆ ಎಂದು ಶಿವಸೇನೆಯ (ಯುಬಿಟಿ) ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್ ಅವರು, ”ಪಕ್ಷದ ಹೆಸರು ಮತ್ತು ಚಿಹ್ನೆ ಪಡೆಯಲು 2000 ಕೋಟಿ ರೂ.ನಷ್ಟು ಡೀಲ್‌ ನಡೆದಿದೆ ಎಂಬುದು ನನಗೆ ಖಚಿತವಾಗಿ ತಿಳಿದುಬಂದಿದೆ. ಇದು ಕೇವಲ ಪ್ರಾಥಮಿಕ ಡೇಟಾ ಮತ್ತೆ ಇದು ನೂರಕ್ಕೆ ನೂರರಷ್ಟು ಇದು ಸತ್ಯವಾಗಿದೆ. ಇನ್ನೂ ಇದರ ಬಗ್ಗೆ ಶೀಘ್ರದಲ್ಲೇ ಹಲವು ವಿಷಯಗಳು ಬಹಿರಂಗಗೊಳ್ಳಲಿವೆ. ದೇಶದ ಇತಿಹಾಸದಲ್ಲಿ ಈ ರೀತಿ ಆಗಿಲ್ಲ” ಎಂದು ರಾವತ್ ಟ್ವೀಟ್ ಮಾಡಿದ್ದಾರೆ.

”ಈ ವ್ಯವಹಾರ ನಡೆದಿರುವ ಬಗ್ಗೆ ನನ್ನ ಬಳಿ ಸಾಕ್ಷ್ಯಗಳಿವೆ. ಆದಷ್ಟು ಬೇಗ ಅವುಗಳನ್ನು ಬಹಿರಂಗಪಡಿಸುತ್ತೇನೆ. ಸರ್ಕಾರಕ್ಕೆ ಹತ್ತಿರವಿರುವ ಬಿಲ್ಡರ್‌ವೊಬ್ಬರು ನನ್ನೊಂದಿಗೆ ಎಲ್ಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿದ ರೀತಿ ನ್ಯಾಯವಲ್ಲ, ಅದು “ವ್ಯವಹಾರ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

”ಈ ಪ್ರಕರಣದಲ್ಲಿ ಇಲ್ಲಿಯವರೆಗೆ 2,000 ಕೋಟಿ ರೂ. ವ್ಯವಹಾರ ನಡೆದಿದೆ. ಇದು ನನ್ನ ಪ್ರಾಥಮಿಕ ಮಾಹಿತಿಯಾಗಿದೆ. ಅವರ ಪರವಾದ ಈ ನಿರ್ಧಾರವನ್ನು ಖರೀದಿಸಲಾಗಿದೆ” ಎಂದು ರಾಜ್ಯಸಭಾ ಸದಸ್ಯ ರಾವತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

”ಶಾಸಕರೊಬ್ಬರನ್ನು ₹ 50 ಕೋಟಿಗೆ, ಸಂಸದರನ್ನು ₹ 100 ಕೋಟಿಗೆ, ನಮ್ಮ ಕೌನ್ಸಿಲರ್‌ ಮತ್ತು ಶಾಖಾ ಪ್ರಮುಖರನ್ನು ₹ 1 ಕೋಟಿಗೆ ಬಿಡ್‌ ಮಾಡಿ ಕೊಂಡುಕೊಳ್ಳುವ ಈ ಸರ್ಕಾರ, ನಿರ್ಲಜ್ಜರ ಗುಂಪು ಎಂದು ಕಿಡಿಕಾರಿದ್ದಾರೆ. ಇನ್ನೂ ನೀವೇ ಊಹಿಸಿಕೊಳ್ಳಿ, ಪಕ್ಷದ ಚಿಹ್ನೆ ಮತ್ತು ಪಕ್ಷದ ಹೆಸರನ್ನು ಖರೀದಿಸಲು ಅವರು ಎಷ್ಟು ಬಿಡ್ ಮಾಡಬಹುದೆಂದು.. ನನಗೆ ತಿಳಿದ ಮಾಹಿತಿ ಪ್ರಕಾರ ₹ 2,000 ಕೋಟಿ” ಎಂದು ರಾವತ್ ಆರೋಪಿಸಿದ್ದಾರೆ.

ಏಕನಾಥ್ ಶಿಂಧೆ ಬಣದ ಶಾಸಕ ಸದಾ ಸರ್ವಂಕರ್ ಅವರು, ಈ ಆರೋಪವನ್ನು ತಳ್ಳಿಹಾಕಿದ್ದು, “ಸಂಜಯ್ ರಾವುತ್ ಏನು ಕ್ಯಾಷಿಯರ್?” ಎಂದು ಪ್ರಶ್ನೆ ಮಾಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ. ಉದ್ದವ್ ಠಾಕ್ರೆ ಬಣಕ್ಕೆ ‘ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ)’ ಎಂಬ ಹೆಸರು ಮತ್ತು ‘ಪಂಜು’ (ಉರಿಯುತ್ತಿರುವ ಟಾರ್ಚ್) ಚಿಹ್ನೆಯನ್ನು ಚುನಾವಣಾ ಆಯೋಗವು ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ”ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

”ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ” ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, ”ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ಬಣ್ಣಿಸಿದ್ದಾರೆ. ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...