Homeಮುಖಪುಟ‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

ಶಿಂಧೆ ಬಣದ ಶಿವಸೇನೆ ನೀಡಿರುವ ಜಾಹೀರಾತಿನಲ್ಲಿ ಬಾಳಾಸಾಹೇಬ್ ಠಾಕ್ರೆ ಚಿತ್ರವನ್ನು ಕೈಬಿಡಲಾಗಿದೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಂಗಳವಾರ ಹಲವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಕಾರಣವಾಗಿದೆ.

‘ಮೋದಿ ಫಾರ್ ಇಂಡಿಯಾ, ಶಿಂಧೆ ಫಾರ್ ಮಹಾರಾಷ್ಟ್ರ’ ಎಂಬ ಶೀರ್ಷಿಕೆಯ ಪೂರ್ಣ ಪುಟದ ಜಾಹೀರಾತನ್ನು ನೀಡಲಾಗಿದ್ದು, ಸಮೀಕ್ಷೆಯೊಂದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಉನ್ನತ ಹುದ್ದೆಯಲ್ಲಿ ಫಡ್ನಾವೀಸ್‌ಗಿಂತ ಏಕನಾಥ್‌ ಶಿಂಧೆಯವರು ಇರಬೇಕೆಂದು ಹೆಚ್ಚಿನ ಜನರು ಇಚ್ಛಿಸುತ್ತಾರೆಂದು ಜಾಹೀರಾತು ಪ್ರತಿಪಾದಿಸಿದೆ.

ಸೇನೆಯ ಬಿಲ್ಲು-ಬಾಣದ ಚಿಹ್ನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಏಕನಾಥ್‌ ಶಿಂಧೆ ಅವರ ಚಿತ್ರಗಳನ್ನು ಜಾಹೀರಾತು ಹೊಂದಿದೆ. ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಯಾವುದೇ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿಲ್ಲ.

ಉದ್ದವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ಇದು ಮೋದಿ-ಶಾ ಅವರ ಶಿವಸೇನೆ” ಎಂದು ಟೀಕಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆಯವರ ಫೋಟೋ ಬಳಸದಿರುವುದು ಚರ್ಚೆಗೆ ಆಸ್ಪದ ನೀಡಿದೆ.

“ಮಹಾರಾಷ್ಟ್ರದಲ್ಲಿ ಶೇ. 26. 1 ಜನರು ಏಕನಾಥ್ ಶಿಂಧೆ ಅವರನ್ನು, ಶೇ. 23. 2 ರಷ್ಟು ಜನರು ದೇವೇಂದ್ರ ಫಡ್ನಾವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ” ಎಂದು ಜಾಹೀರಾತು ಹೇಳಿದೆ. ಝೀ ಟಿವಿ- ಮ್ಯಾಟ್ರಿಜ್‌ ನಡೆಸಿದೆ ಎನ್ನಲಾದ ಸಮೀಕ್ಷೆಯ ಅಂಕಿ-ಅಂಶಗಳನ್ನು ಜಾಹೀರಾತು ಆಧಾರಿಸಿದೆ.

“ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಮಹಾರಾಷ್ಟ್ರದ ಶೇಕಡಾ 30.2 ರಷ್ಟು ಜನತೆ ಭಾರತೀಯ ಜನತಾ ಪಕ್ಷವನ್ನು ಬಯಸುತ್ತಾರೆ, ಶೇ. 16.2 ರಷ್ಟು ನಾಗರಿಕರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಾರೆ. ಮಹಾರಾಷ್ಟ್ರದಲ್ಲಿನ ಶೇ. 46.4ರಷ್ಟು ಜನರ ಪ್ರತಿಕ್ರಿಯೆ ಇದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯನ್ನು ನಂಬಿರಿ” ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಈ ಜಾಹೀರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಜಯ್ ರಾವುತ್, “ಇದು ಮೊದಲು ಬಾಳಾಸಾಹೇಬ್ ಅವರ ಶಿವಸೇನೆಯಾಗಿತ್ತು. ಆದರೆ ಇದು ಮೋದಿ-ಶಾ ಅವರ ಶಿವಸೇನೆ ಎಂಬುದನ್ನು ಜಾಹೀರಾತು ಸ್ಪಷ್ಟಪಡಿಸಿದೆ. ದಿವಂಗತ ಬಾಳಾಸಾಹೇಬ್ ಠಾಕ್ರೆಯವರ ಫೋಟೋ ಜಾಹೀರಾತಿನಲ್ಲಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರು ಜಾಹೀರಾತಿಗೆ ಕಡಿಮೆ ಪ್ರಾಶಸ್ತ್ಯ ನೀಡಲು ಪ್ರಯತ್ನಿಸಿದ್ದಾರೆಂದು ವರದಿಯಾಗಿದೆ.

“ಮತದಾರರಿಗೆ ಯಾವ ಪಕ್ಷ ಅಥವಾ ನಾಯಕ ಹೆಚ್ಚು ಸ್ವೀಕಾರಾರ್ಹ ಎಂಬುದನ್ನು ಯಾವಾಗಲೂ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ. ಶಿಂಧೆ ಕ್ಯಾಬಿನೆಟ್ ಸಚಿವರಾಗಿ ಹಿಂದೆ ಜನಪ್ರಿಯರಾಗಿದ್ದರು ಮತ್ತು ಈಗ ಮುಖ್ಯಮಂತ್ರಿಯಾಗಿ ಸ್ವೀಕೃತವಾಗಿದ್ದಾರೆ. ರಾಜ್ಯದ ಜನರು ಫಡ್ನಾವೀಸ್‌, ಶಿಂಧೆ, ಮೋದಿ ಅವರಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಬಾವನಕುಳೆ ತಿಳಿಸಿದ್ದಾರೆ.

“ರಾಜ್ಯ ಮಟ್ಟದ ನಾಯಕರಾಗಲು ಮಹಾರಾಷ್ಟ್ರದ ಜನತೆ ಫಡ್ನಾವೀಸ್ ಅವರಿಗೆ ಎರಡು ಬಾರಿ ಆದ್ಯತೆ ನೀಡಿದ್ದಾರೆ. ಯಾರು ದೊಡ್ಡವರು ಅಥವಾ ಚಿಕ್ಕವರು ಎಂಬುದರ ಬಗ್ಗೆ ಶಿವಸೇನೆ ಮತ್ತು ಬಿಜೆಪಿ ನಡುವೆ ಯಾವುದೇ  ಹೋಲಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯ ವಕ್ತಾರ ಅತುಲ್ ಲೋಂಧೆ ಪ್ರತಿಕ್ರಿಯಿಸಿ, “ಇದು ನಕಲಿ ಸಮೀಕ್ಷೆಯಾಗಿದ್ದು, ಶಿಂಧೆ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳಲು ಇದನ್ನು ಬಳಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 42ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮಹಾರಾಷ್ಟ್ರದಲ್ಲಿ ಗೆಲ್ಲಲಿದೆ. ಹಾಗೆಯೇ ರಾಜ್ಯ ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ಖಚಿತ. ‘ಒಂದಾನೊಂದು ಕಾಲದಲ್ಲಿ ಶಿಂಧೆ’ ಎಂಬ ಹೊಸ ಕಥೆಯನ್ನು ಶಿಂಧೆಯವರೇ ಬರೆಯಲಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಮತ್ತು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಉದ್ಧವ್ ಬಣದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿದ್ದು, ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವುದಾಗಿ ಪ್ರತಿಪಾದಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಪ್ರತಿಕ್ರಿಯಿಸಿ, “ಅನುಕೂಲಕರ ಸಮೀಕ್ಷೆಗಾಗಿ ನಾವು ಯಾರನ್ನೂ ನೇಮಿಸಿಲ್ಲ. ಶಿಂಧೆಯವರನ್ನು ಜನರು ಸ್ವೀಕರಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ನಮಗಾಗಿ ಸಮೀಕ್ಷೆ ನಡೆಸಿರೆಂದು ನಾವು ಯಾವುದೇ ಮಾಧ್ಯಮ ಸಂಸ್ಥೆಯಲ್ಲಿ ಕೇಳಿಕೊಂಡಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...