Homeಮುಖಪುಟ‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

ಶಿಂಧೆ ಬಣದ ಶಿವಸೇನೆ ನೀಡಿರುವ ಜಾಹೀರಾತಿನಲ್ಲಿ ಬಾಳಾಸಾಹೇಬ್ ಠಾಕ್ರೆ ಚಿತ್ರವನ್ನು ಕೈಬಿಡಲಾಗಿದೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಂಗಳವಾರ ಹಲವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಕಾರಣವಾಗಿದೆ.

‘ಮೋದಿ ಫಾರ್ ಇಂಡಿಯಾ, ಶಿಂಧೆ ಫಾರ್ ಮಹಾರಾಷ್ಟ್ರ’ ಎಂಬ ಶೀರ್ಷಿಕೆಯ ಪೂರ್ಣ ಪುಟದ ಜಾಹೀರಾತನ್ನು ನೀಡಲಾಗಿದ್ದು, ಸಮೀಕ್ಷೆಯೊಂದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಉನ್ನತ ಹುದ್ದೆಯಲ್ಲಿ ಫಡ್ನಾವೀಸ್‌ಗಿಂತ ಏಕನಾಥ್‌ ಶಿಂಧೆಯವರು ಇರಬೇಕೆಂದು ಹೆಚ್ಚಿನ ಜನರು ಇಚ್ಛಿಸುತ್ತಾರೆಂದು ಜಾಹೀರಾತು ಪ್ರತಿಪಾದಿಸಿದೆ.

ಸೇನೆಯ ಬಿಲ್ಲು-ಬಾಣದ ಚಿಹ್ನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಏಕನಾಥ್‌ ಶಿಂಧೆ ಅವರ ಚಿತ್ರಗಳನ್ನು ಜಾಹೀರಾತು ಹೊಂದಿದೆ. ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಯಾವುದೇ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿಲ್ಲ.

ಉದ್ದವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ಇದು ಮೋದಿ-ಶಾ ಅವರ ಶಿವಸೇನೆ” ಎಂದು ಟೀಕಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆಯವರ ಫೋಟೋ ಬಳಸದಿರುವುದು ಚರ್ಚೆಗೆ ಆಸ್ಪದ ನೀಡಿದೆ.

“ಮಹಾರಾಷ್ಟ್ರದಲ್ಲಿ ಶೇ. 26. 1 ಜನರು ಏಕನಾಥ್ ಶಿಂಧೆ ಅವರನ್ನು, ಶೇ. 23. 2 ರಷ್ಟು ಜನರು ದೇವೇಂದ್ರ ಫಡ್ನಾವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ” ಎಂದು ಜಾಹೀರಾತು ಹೇಳಿದೆ. ಝೀ ಟಿವಿ- ಮ್ಯಾಟ್ರಿಜ್‌ ನಡೆಸಿದೆ ಎನ್ನಲಾದ ಸಮೀಕ್ಷೆಯ ಅಂಕಿ-ಅಂಶಗಳನ್ನು ಜಾಹೀರಾತು ಆಧಾರಿಸಿದೆ.

“ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಮಹಾರಾಷ್ಟ್ರದ ಶೇಕಡಾ 30.2 ರಷ್ಟು ಜನತೆ ಭಾರತೀಯ ಜನತಾ ಪಕ್ಷವನ್ನು ಬಯಸುತ್ತಾರೆ, ಶೇ. 16.2 ರಷ್ಟು ನಾಗರಿಕರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಾರೆ. ಮಹಾರಾಷ್ಟ್ರದಲ್ಲಿನ ಶೇ. 46.4ರಷ್ಟು ಜನರ ಪ್ರತಿಕ್ರಿಯೆ ಇದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯನ್ನು ನಂಬಿರಿ” ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಈ ಜಾಹೀರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಜಯ್ ರಾವುತ್, “ಇದು ಮೊದಲು ಬಾಳಾಸಾಹೇಬ್ ಅವರ ಶಿವಸೇನೆಯಾಗಿತ್ತು. ಆದರೆ ಇದು ಮೋದಿ-ಶಾ ಅವರ ಶಿವಸೇನೆ ಎಂಬುದನ್ನು ಜಾಹೀರಾತು ಸ್ಪಷ್ಟಪಡಿಸಿದೆ. ದಿವಂಗತ ಬಾಳಾಸಾಹೇಬ್ ಠಾಕ್ರೆಯವರ ಫೋಟೋ ಜಾಹೀರಾತಿನಲ್ಲಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರು ಜಾಹೀರಾತಿಗೆ ಕಡಿಮೆ ಪ್ರಾಶಸ್ತ್ಯ ನೀಡಲು ಪ್ರಯತ್ನಿಸಿದ್ದಾರೆಂದು ವರದಿಯಾಗಿದೆ.

“ಮತದಾರರಿಗೆ ಯಾವ ಪಕ್ಷ ಅಥವಾ ನಾಯಕ ಹೆಚ್ಚು ಸ್ವೀಕಾರಾರ್ಹ ಎಂಬುದನ್ನು ಯಾವಾಗಲೂ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ. ಶಿಂಧೆ ಕ್ಯಾಬಿನೆಟ್ ಸಚಿವರಾಗಿ ಹಿಂದೆ ಜನಪ್ರಿಯರಾಗಿದ್ದರು ಮತ್ತು ಈಗ ಮುಖ್ಯಮಂತ್ರಿಯಾಗಿ ಸ್ವೀಕೃತವಾಗಿದ್ದಾರೆ. ರಾಜ್ಯದ ಜನರು ಫಡ್ನಾವೀಸ್‌, ಶಿಂಧೆ, ಮೋದಿ ಅವರಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಬಾವನಕುಳೆ ತಿಳಿಸಿದ್ದಾರೆ.

“ರಾಜ್ಯ ಮಟ್ಟದ ನಾಯಕರಾಗಲು ಮಹಾರಾಷ್ಟ್ರದ ಜನತೆ ಫಡ್ನಾವೀಸ್ ಅವರಿಗೆ ಎರಡು ಬಾರಿ ಆದ್ಯತೆ ನೀಡಿದ್ದಾರೆ. ಯಾರು ದೊಡ್ಡವರು ಅಥವಾ ಚಿಕ್ಕವರು ಎಂಬುದರ ಬಗ್ಗೆ ಶಿವಸೇನೆ ಮತ್ತು ಬಿಜೆಪಿ ನಡುವೆ ಯಾವುದೇ  ಹೋಲಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯ ವಕ್ತಾರ ಅತುಲ್ ಲೋಂಧೆ ಪ್ರತಿಕ್ರಿಯಿಸಿ, “ಇದು ನಕಲಿ ಸಮೀಕ್ಷೆಯಾಗಿದ್ದು, ಶಿಂಧೆ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳಲು ಇದನ್ನು ಬಳಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 42ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮಹಾರಾಷ್ಟ್ರದಲ್ಲಿ ಗೆಲ್ಲಲಿದೆ. ಹಾಗೆಯೇ ರಾಜ್ಯ ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ಖಚಿತ. ‘ಒಂದಾನೊಂದು ಕಾಲದಲ್ಲಿ ಶಿಂಧೆ’ ಎಂಬ ಹೊಸ ಕಥೆಯನ್ನು ಶಿಂಧೆಯವರೇ ಬರೆಯಲಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಮತ್ತು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಉದ್ಧವ್ ಬಣದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿದ್ದು, ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವುದಾಗಿ ಪ್ರತಿಪಾದಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಪ್ರತಿಕ್ರಿಯಿಸಿ, “ಅನುಕೂಲಕರ ಸಮೀಕ್ಷೆಗಾಗಿ ನಾವು ಯಾರನ್ನೂ ನೇಮಿಸಿಲ್ಲ. ಶಿಂಧೆಯವರನ್ನು ಜನರು ಸ್ವೀಕರಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ನಮಗಾಗಿ ಸಮೀಕ್ಷೆ ನಡೆಸಿರೆಂದು ನಾವು ಯಾವುದೇ ಮಾಧ್ಯಮ ಸಂಸ್ಥೆಯಲ್ಲಿ ಕೇಳಿಕೊಂಡಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...