Homeಮುಖಪುಟ‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

ಶಿಂಧೆ ಬಣದ ಶಿವಸೇನೆ ನೀಡಿರುವ ಜಾಹೀರಾತಿನಲ್ಲಿ ಬಾಳಾಸಾಹೇಬ್ ಠಾಕ್ರೆ ಚಿತ್ರವನ್ನು ಕೈಬಿಡಲಾಗಿದೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಂಗಳವಾರ ಹಲವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಕಾರಣವಾಗಿದೆ.

‘ಮೋದಿ ಫಾರ್ ಇಂಡಿಯಾ, ಶಿಂಧೆ ಫಾರ್ ಮಹಾರಾಷ್ಟ್ರ’ ಎಂಬ ಶೀರ್ಷಿಕೆಯ ಪೂರ್ಣ ಪುಟದ ಜಾಹೀರಾತನ್ನು ನೀಡಲಾಗಿದ್ದು, ಸಮೀಕ್ಷೆಯೊಂದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಉನ್ನತ ಹುದ್ದೆಯಲ್ಲಿ ಫಡ್ನಾವೀಸ್‌ಗಿಂತ ಏಕನಾಥ್‌ ಶಿಂಧೆಯವರು ಇರಬೇಕೆಂದು ಹೆಚ್ಚಿನ ಜನರು ಇಚ್ಛಿಸುತ್ತಾರೆಂದು ಜಾಹೀರಾತು ಪ್ರತಿಪಾದಿಸಿದೆ.

ಸೇನೆಯ ಬಿಲ್ಲು-ಬಾಣದ ಚಿಹ್ನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಏಕನಾಥ್‌ ಶಿಂಧೆ ಅವರ ಚಿತ್ರಗಳನ್ನು ಜಾಹೀರಾತು ಹೊಂದಿದೆ. ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಯಾವುದೇ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿಲ್ಲ.

ಉದ್ದವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ಇದು ಮೋದಿ-ಶಾ ಅವರ ಶಿವಸೇನೆ” ಎಂದು ಟೀಕಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆಯವರ ಫೋಟೋ ಬಳಸದಿರುವುದು ಚರ್ಚೆಗೆ ಆಸ್ಪದ ನೀಡಿದೆ.

“ಮಹಾರಾಷ್ಟ್ರದಲ್ಲಿ ಶೇ. 26. 1 ಜನರು ಏಕನಾಥ್ ಶಿಂಧೆ ಅವರನ್ನು, ಶೇ. 23. 2 ರಷ್ಟು ಜನರು ದೇವೇಂದ್ರ ಫಡ್ನಾವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ” ಎಂದು ಜಾಹೀರಾತು ಹೇಳಿದೆ. ಝೀ ಟಿವಿ- ಮ್ಯಾಟ್ರಿಜ್‌ ನಡೆಸಿದೆ ಎನ್ನಲಾದ ಸಮೀಕ್ಷೆಯ ಅಂಕಿ-ಅಂಶಗಳನ್ನು ಜಾಹೀರಾತು ಆಧಾರಿಸಿದೆ.

“ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಮಹಾರಾಷ್ಟ್ರದ ಶೇಕಡಾ 30.2 ರಷ್ಟು ಜನತೆ ಭಾರತೀಯ ಜನತಾ ಪಕ್ಷವನ್ನು ಬಯಸುತ್ತಾರೆ, ಶೇ. 16.2 ರಷ್ಟು ನಾಗರಿಕರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಾರೆ. ಮಹಾರಾಷ್ಟ್ರದಲ್ಲಿನ ಶೇ. 46.4ರಷ್ಟು ಜನರ ಪ್ರತಿಕ್ರಿಯೆ ಇದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯನ್ನು ನಂಬಿರಿ” ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಈ ಜಾಹೀರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಜಯ್ ರಾವುತ್, “ಇದು ಮೊದಲು ಬಾಳಾಸಾಹೇಬ್ ಅವರ ಶಿವಸೇನೆಯಾಗಿತ್ತು. ಆದರೆ ಇದು ಮೋದಿ-ಶಾ ಅವರ ಶಿವಸೇನೆ ಎಂಬುದನ್ನು ಜಾಹೀರಾತು ಸ್ಪಷ್ಟಪಡಿಸಿದೆ. ದಿವಂಗತ ಬಾಳಾಸಾಹೇಬ್ ಠಾಕ್ರೆಯವರ ಫೋಟೋ ಜಾಹೀರಾತಿನಲ್ಲಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರು ಜಾಹೀರಾತಿಗೆ ಕಡಿಮೆ ಪ್ರಾಶಸ್ತ್ಯ ನೀಡಲು ಪ್ರಯತ್ನಿಸಿದ್ದಾರೆಂದು ವರದಿಯಾಗಿದೆ.

“ಮತದಾರರಿಗೆ ಯಾವ ಪಕ್ಷ ಅಥವಾ ನಾಯಕ ಹೆಚ್ಚು ಸ್ವೀಕಾರಾರ್ಹ ಎಂಬುದನ್ನು ಯಾವಾಗಲೂ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ. ಶಿಂಧೆ ಕ್ಯಾಬಿನೆಟ್ ಸಚಿವರಾಗಿ ಹಿಂದೆ ಜನಪ್ರಿಯರಾಗಿದ್ದರು ಮತ್ತು ಈಗ ಮುಖ್ಯಮಂತ್ರಿಯಾಗಿ ಸ್ವೀಕೃತವಾಗಿದ್ದಾರೆ. ರಾಜ್ಯದ ಜನರು ಫಡ್ನಾವೀಸ್‌, ಶಿಂಧೆ, ಮೋದಿ ಅವರಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಬಾವನಕುಳೆ ತಿಳಿಸಿದ್ದಾರೆ.

“ರಾಜ್ಯ ಮಟ್ಟದ ನಾಯಕರಾಗಲು ಮಹಾರಾಷ್ಟ್ರದ ಜನತೆ ಫಡ್ನಾವೀಸ್ ಅವರಿಗೆ ಎರಡು ಬಾರಿ ಆದ್ಯತೆ ನೀಡಿದ್ದಾರೆ. ಯಾರು ದೊಡ್ಡವರು ಅಥವಾ ಚಿಕ್ಕವರು ಎಂಬುದರ ಬಗ್ಗೆ ಶಿವಸೇನೆ ಮತ್ತು ಬಿಜೆಪಿ ನಡುವೆ ಯಾವುದೇ  ಹೋಲಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯ ವಕ್ತಾರ ಅತುಲ್ ಲೋಂಧೆ ಪ್ರತಿಕ್ರಿಯಿಸಿ, “ಇದು ನಕಲಿ ಸಮೀಕ್ಷೆಯಾಗಿದ್ದು, ಶಿಂಧೆ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳಲು ಇದನ್ನು ಬಳಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 42ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮಹಾರಾಷ್ಟ್ರದಲ್ಲಿ ಗೆಲ್ಲಲಿದೆ. ಹಾಗೆಯೇ ರಾಜ್ಯ ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ಖಚಿತ. ‘ಒಂದಾನೊಂದು ಕಾಲದಲ್ಲಿ ಶಿಂಧೆ’ ಎಂಬ ಹೊಸ ಕಥೆಯನ್ನು ಶಿಂಧೆಯವರೇ ಬರೆಯಲಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಮತ್ತು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಉದ್ಧವ್ ಬಣದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿದ್ದು, ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವುದಾಗಿ ಪ್ರತಿಪಾದಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಪ್ರತಿಕ್ರಿಯಿಸಿ, “ಅನುಕೂಲಕರ ಸಮೀಕ್ಷೆಗಾಗಿ ನಾವು ಯಾರನ್ನೂ ನೇಮಿಸಿಲ್ಲ. ಶಿಂಧೆಯವರನ್ನು ಜನರು ಸ್ವೀಕರಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ನಮಗಾಗಿ ಸಮೀಕ್ಷೆ ನಡೆಸಿರೆಂದು ನಾವು ಯಾವುದೇ ಮಾಧ್ಯಮ ಸಂಸ್ಥೆಯಲ್ಲಿ ಕೇಳಿಕೊಂಡಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...