Homeಮುಖಪುಟ‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

ಶಿಂಧೆ ಬಣದ ಶಿವಸೇನೆ ನೀಡಿರುವ ಜಾಹೀರಾತಿನಲ್ಲಿ ಬಾಳಾಸಾಹೇಬ್ ಠಾಕ್ರೆ ಚಿತ್ರವನ್ನು ಕೈಬಿಡಲಾಗಿದೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಂಗಳವಾರ ಹಲವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಕಾರಣವಾಗಿದೆ.

‘ಮೋದಿ ಫಾರ್ ಇಂಡಿಯಾ, ಶಿಂಧೆ ಫಾರ್ ಮಹಾರಾಷ್ಟ್ರ’ ಎಂಬ ಶೀರ್ಷಿಕೆಯ ಪೂರ್ಣ ಪುಟದ ಜಾಹೀರಾತನ್ನು ನೀಡಲಾಗಿದ್ದು, ಸಮೀಕ್ಷೆಯೊಂದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಉನ್ನತ ಹುದ್ದೆಯಲ್ಲಿ ಫಡ್ನಾವೀಸ್‌ಗಿಂತ ಏಕನಾಥ್‌ ಶಿಂಧೆಯವರು ಇರಬೇಕೆಂದು ಹೆಚ್ಚಿನ ಜನರು ಇಚ್ಛಿಸುತ್ತಾರೆಂದು ಜಾಹೀರಾತು ಪ್ರತಿಪಾದಿಸಿದೆ.

ಸೇನೆಯ ಬಿಲ್ಲು-ಬಾಣದ ಚಿಹ್ನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಏಕನಾಥ್‌ ಶಿಂಧೆ ಅವರ ಚಿತ್ರಗಳನ್ನು ಜಾಹೀರಾತು ಹೊಂದಿದೆ. ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಯಾವುದೇ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿಲ್ಲ.

ಉದ್ದವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ಇದು ಮೋದಿ-ಶಾ ಅವರ ಶಿವಸೇನೆ” ಎಂದು ಟೀಕಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆಯವರ ಫೋಟೋ ಬಳಸದಿರುವುದು ಚರ್ಚೆಗೆ ಆಸ್ಪದ ನೀಡಿದೆ.

“ಮಹಾರಾಷ್ಟ್ರದಲ್ಲಿ ಶೇ. 26. 1 ಜನರು ಏಕನಾಥ್ ಶಿಂಧೆ ಅವರನ್ನು, ಶೇ. 23. 2 ರಷ್ಟು ಜನರು ದೇವೇಂದ್ರ ಫಡ್ನಾವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ” ಎಂದು ಜಾಹೀರಾತು ಹೇಳಿದೆ. ಝೀ ಟಿವಿ- ಮ್ಯಾಟ್ರಿಜ್‌ ನಡೆಸಿದೆ ಎನ್ನಲಾದ ಸಮೀಕ್ಷೆಯ ಅಂಕಿ-ಅಂಶಗಳನ್ನು ಜಾಹೀರಾತು ಆಧಾರಿಸಿದೆ.

“ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಮಹಾರಾಷ್ಟ್ರದ ಶೇಕಡಾ 30.2 ರಷ್ಟು ಜನತೆ ಭಾರತೀಯ ಜನತಾ ಪಕ್ಷವನ್ನು ಬಯಸುತ್ತಾರೆ, ಶೇ. 16.2 ರಷ್ಟು ನಾಗರಿಕರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಾರೆ. ಮಹಾರಾಷ್ಟ್ರದಲ್ಲಿನ ಶೇ. 46.4ರಷ್ಟು ಜನರ ಪ್ರತಿಕ್ರಿಯೆ ಇದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯನ್ನು ನಂಬಿರಿ” ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಈ ಜಾಹೀರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಜಯ್ ರಾವುತ್, “ಇದು ಮೊದಲು ಬಾಳಾಸಾಹೇಬ್ ಅವರ ಶಿವಸೇನೆಯಾಗಿತ್ತು. ಆದರೆ ಇದು ಮೋದಿ-ಶಾ ಅವರ ಶಿವಸೇನೆ ಎಂಬುದನ್ನು ಜಾಹೀರಾತು ಸ್ಪಷ್ಟಪಡಿಸಿದೆ. ದಿವಂಗತ ಬಾಳಾಸಾಹೇಬ್ ಠಾಕ್ರೆಯವರ ಫೋಟೋ ಜಾಹೀರಾತಿನಲ್ಲಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರು ಜಾಹೀರಾತಿಗೆ ಕಡಿಮೆ ಪ್ರಾಶಸ್ತ್ಯ ನೀಡಲು ಪ್ರಯತ್ನಿಸಿದ್ದಾರೆಂದು ವರದಿಯಾಗಿದೆ.

“ಮತದಾರರಿಗೆ ಯಾವ ಪಕ್ಷ ಅಥವಾ ನಾಯಕ ಹೆಚ್ಚು ಸ್ವೀಕಾರಾರ್ಹ ಎಂಬುದನ್ನು ಯಾವಾಗಲೂ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ. ಶಿಂಧೆ ಕ್ಯಾಬಿನೆಟ್ ಸಚಿವರಾಗಿ ಹಿಂದೆ ಜನಪ್ರಿಯರಾಗಿದ್ದರು ಮತ್ತು ಈಗ ಮುಖ್ಯಮಂತ್ರಿಯಾಗಿ ಸ್ವೀಕೃತವಾಗಿದ್ದಾರೆ. ರಾಜ್ಯದ ಜನರು ಫಡ್ನಾವೀಸ್‌, ಶಿಂಧೆ, ಮೋದಿ ಅವರಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಬಾವನಕುಳೆ ತಿಳಿಸಿದ್ದಾರೆ.

“ರಾಜ್ಯ ಮಟ್ಟದ ನಾಯಕರಾಗಲು ಮಹಾರಾಷ್ಟ್ರದ ಜನತೆ ಫಡ್ನಾವೀಸ್ ಅವರಿಗೆ ಎರಡು ಬಾರಿ ಆದ್ಯತೆ ನೀಡಿದ್ದಾರೆ. ಯಾರು ದೊಡ್ಡವರು ಅಥವಾ ಚಿಕ್ಕವರು ಎಂಬುದರ ಬಗ್ಗೆ ಶಿವಸೇನೆ ಮತ್ತು ಬಿಜೆಪಿ ನಡುವೆ ಯಾವುದೇ  ಹೋಲಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯ ವಕ್ತಾರ ಅತುಲ್ ಲೋಂಧೆ ಪ್ರತಿಕ್ರಿಯಿಸಿ, “ಇದು ನಕಲಿ ಸಮೀಕ್ಷೆಯಾಗಿದ್ದು, ಶಿಂಧೆ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳಲು ಇದನ್ನು ಬಳಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 42ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮಹಾರಾಷ್ಟ್ರದಲ್ಲಿ ಗೆಲ್ಲಲಿದೆ. ಹಾಗೆಯೇ ರಾಜ್ಯ ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ಖಚಿತ. ‘ಒಂದಾನೊಂದು ಕಾಲದಲ್ಲಿ ಶಿಂಧೆ’ ಎಂಬ ಹೊಸ ಕಥೆಯನ್ನು ಶಿಂಧೆಯವರೇ ಬರೆಯಲಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಮತ್ತು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಉದ್ಧವ್ ಬಣದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿದ್ದು, ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವುದಾಗಿ ಪ್ರತಿಪಾದಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಪ್ರತಿಕ್ರಿಯಿಸಿ, “ಅನುಕೂಲಕರ ಸಮೀಕ್ಷೆಗಾಗಿ ನಾವು ಯಾರನ್ನೂ ನೇಮಿಸಿಲ್ಲ. ಶಿಂಧೆಯವರನ್ನು ಜನರು ಸ್ವೀಕರಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ನಮಗಾಗಿ ಸಮೀಕ್ಷೆ ನಡೆಸಿರೆಂದು ನಾವು ಯಾವುದೇ ಮಾಧ್ಯಮ ಸಂಸ್ಥೆಯಲ್ಲಿ ಕೇಳಿಕೊಂಡಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...