Homeಮುಖಪುಟಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

- Advertisement -
- Advertisement -

ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದ್ದು ಈಗ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ಪಕ್ಷದ ಅಭ್ಯರ್ಥಿಗೆ ಆನೆಬಲ ಬಂದಂತಾಗಿದೆ. ಗೌಡಗೆರೆ-ಬರಗೂರು, ಕಳ್ಳಂಬೆಳ್ಳ ಭಾಗಗಳಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವಂತಹ ಕೆಲಸ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಇಡೀ ತಾಲೂಕಿನಾದ್ಯಂತ ತಂಡೋಪತಂಡವಾಗಿ ಪ್ರಚಾರ ನಡೆಸಿರುವುದು ಪ್ರಬಲ ಪೈಪೋಟಿಗೆ ಕಾರಣವಾಗಿದೆ.

ದೇವೇಗೌಡರು ಮಧುಗಿರಿ ತಾಲೂಕು ಬಡವನಹಳ್ಳಿ ಸಮೀಪದ ಕೈಮರದ ಶಾಸಕ ವೀರಭದ್ರಯ್ಯ ಅವರ ಮನೆಯಲ್ಲಿ ಬೀಡುಬಿಟ್ಟಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಗೌಡಗೆರೆ ಹೋಬಳಿಯಲ್ಲಿ ನೆಲೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಕೂಡ ಶಿರಾ ಕ್ಷೇತ್ರದಲ್ಲೇ ಉಳಿದು ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತದಾರರ ನಿರೀಕ್ಷೆಯಂತೆ ಜೆಡಿಎಸ್ ವರಿಷ್ಠರು ಕ್ಷೇತ್ರದಲ್ಲಿ ಕೊನೆಯ ಗಳಿಗೆಯಲ್ಲಿ ಪ್ರಚಾರವನ್ನು ತೀವ್ರಗೊಳಿಸಿದ್ದು ಮತದಾರರ ಮನ ಗೆಲ್ಲಲು ಹರಸಾಹಸಪಡುತ್ತಿದ್ದಾರೆ.

ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಮತ್ತು ಪುತ್ರ ಪ್ರಕಾಶ್ ವೇದಿಕೆಯಲ್ಲಿ ಕಣ್ಣೀರು ಸುರಿಸುತ್ತಾ ಮತದಾರರ ಅನುಕಂಪ ಗಿಟ್ಟಿಸುತ್ತಿದ್ದಾರೆ. ಅವರಿಬ್ಬರಿಗೆ ಭಾಷಣ ಕಲೆ ಗೊತ್ತಿಲ್ಲ. ಆದರೆ ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿಗಳು ತಮ್ಮ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದನ್ನು ಪ್ರಸ್ತಾಪಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತಿರುವುದು ಸಾಮಾನ್ಯವಾಗಿ ಕಂಡುಬಂದಿದೆ. ಪಕ್ಷದ ಪ್ರಮುಖ ಮುಖಂಡರ ಅಗಮನ ಜೆಡಿಎಸ್‌ಗೆ ಚೈತನ್ಯ ಬಂದಂತಾಗಿದೆ. ಕಾರ್ಯಕರ್ತರು ಹುರುಪಿನಿಂದ ಪ್ರಚಾರದಲ್ಲಿ ಭಾಗವಹಿಸುವುದು ಕಂಡುಬರುತ್ತಿದೆ. ಇದುವರೆಗೆ ಮಂಕಾಗಿದ್ದ ಮತದಾರರು ಮತ್ತು ಸ್ಥಳೀಯ ಮುಖಂಡರಲ್ಲಿ ಪಕ್ಷದ ಪ್ರಮುಖರ ಆಗಮನದಿಂದ ಅತ್ಯಂತ ಉತ್ಸಾಹದ ಬುಗ್ಗೆ ಚಿಮ್ಮುತ್ತಿದೆ.

ಕಾಂಗ್ರೆಸ್ ಮೊದಲಿನಿಂದಲೂ ಪ್ರಚಾರದಲ್ಲಿ ಮುಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸಂತೋಷ ಲಾಡ್, ಕಂಪ್ಲಿಯ ಗಣೇಶ್, ಪುಟ್ಟರಂಗಶೆಟ್ಟಿ, ಷಡಕ್ಷರಿ, ಎಂ.ಡಿ. ಲಕ್ಷ್ಮೀನಾರಾಯಣ, ಬಿ.ಎಲ್.ಶಂಕರ್, ಬಿ.ಕೆ.ಹರಿಪ್ರಸಾದ್ ಮತ್ತು ಜಿಲ್ಲೆಯ ಪ್ರಮುಖ ನಾಯಕರ ತಂಡ ಪ್ರತಿಯೊಂದು ಹೋಬಳಿಯಲ್ಲೂ ಪ್ರಚಾರ ನಡೆಸಿ ಹೋಗಿದೆ. ಜಾತಿ ಲೆಕ್ಕಾಚಾರವನ್ನೂ ಕಾಂಗ್ರೆಸ್ ಹಾಕಿದಂತೆ ಕಾಣುತ್ತಿದೆ. ಅದೇ ಕಾರಣಕ್ಕಾಗಿಯೇ ಪಕ್ಷದ ಎಲ್ಲಾ ವಿಭಾಗಗಳ ಮುಖಂಡರು ಕೂಡ ಪ್ರಚಾರದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್‌ಗೆ ಲಾಭವಾಗಲಿದೆ.

ಪ್ರಚಾರ ಸಂದರ್ಭದಲ್ಲಿ ಕಾಡುಗೊಲ್ಲರ ಮುಖಂಡರು ಸಿದ್ದರಾಮಯ್ಯ ಅವರಿಗೆ ಕಂಬಳಿ ಸನ್ಮಾನ ಮಾಡಿ ಕುರಿಯೊಂದನ್ನು ನೀಡಿರುವುದು ಕಾಂಗ್ರೆಸ್ ಅಭ್ಯರ್ಥಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಕಾಂಗ್ರೆಸ್ ಪಕ್ಷ ಒಕ್ಕಲಿಗರು, ದಲಿತರು, ಬಲಜಿಗರು, ಕಾಡುಗೊಲ್ಲರು, ಕುರುಬರು, ಅಲ್ಪಸಂಖ್ಯಾತರು, ನೇಕಾರರು ಹೀಗೆ ಎಲ್ಲಾ ಸಮುದಾಯಗಳ ಮುಖಂಡರನ್ನು ಕರೆಸಿ ಪ್ರಚಾರದಲ್ಲಿ ತೊಡಗುವಂತೆ ಮಾಡಿ ಆಯಾ ಸಮುದಾಯದ ಮತದಾರರಿಗೆ ಸಂದೇಶ ಹೋಗುವಂತೆ ಮಾಡಿದೆ. ಕುರುಬರು, ಕಾಡುಗೊಲ್ಲರು, ಅಲ್ಪಸಂಖ್ಯಾತರು, ನಾಯಕರು, ದಲಿತರು ಸೇರಿದಂತೆ ಅಹಿಂದ ವರ್ಗದ ಮತದಾರರನ್ನು ತನ್ನಡೆಗೆ ಸೆಳೆಯುವಂತಹ ಎಲ್ಲಾ ಪ್ರಯತ್ನಗಳಲ್ಲೂ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

ಶಿರಾ, ಮಡಕಶಿರಾ, ಪಾವಗಡ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿನ ಪ್ರಭಾವವನ್ನು ಹೊಂದಿರುವ ಆಂಧ್ರಪ್ರದೇಶದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಘುವೀರಾ ರೆಡ್ಡಿ ಅವರನ್ನು ಟಿ.ಬಿ.ಜಯಚಂದ್ರ ಭೇಟಿ ಮಾಡಿದ್ದಾರೆ. ಯುವ ಮುಖಂಡ ಕೆ.ಎನ್.ರಾಜಣ್ಣ ಪುತ್ರ ಆರ್.ರಾಜೇಂದ್ರ ಕೂಡ ಭೇಟಿ ಮಾಡಿ ಪಕ್ಷದ ಅಭ್ಯರ್ಥಿಗೆ ಗೆಲುವಿಗೆ ನೆರವಾಗುವಂತೆ ಮನವಿ ಮಾಡಿ ಬಂದಿದ್ದು ಬಿಜೆಪಿ ಎಲ್ಲಾ ಪಟ್ಟುಗಳನ್ನು ತಿರುವುಮುರುವಾಗುವಂತೆ ಮಾಡಿದೆ. ತಂಡತಂಡಗಳಲ್ಲಿ ಮಹಿಳಾ ಮುಖಂಡರು ಕೂಡ ಹೆಚ್ಚಿನ ಪ್ರಚಾರ ನಡೆಸಿದ್ದು ಮತದಾರರನ್ನು ಭೇಟಿ ಮಾಡುವಲ್ಲಿ ಸಫಲರಾಗಿದ್ದಾರೆ.

ಚುನಾವಣೆ ಘೋಷಣೆ ಆಗುವುದಕ್ಕೂ ಮೊದಲಿನಿಂದ ಇದುವರೆಗೆ ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ 5 ಸಾವಿರ ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ ಎನ್ನುತ್ತವೆ ಕಾಂಗ್ರೆಸ್ ಮೂಲಗಳು. ಬಿಜೆಪಿಯ ನಗರ ಘಟಕದ ಅಧ್ಯಕ್ಷ ಬಂಡಿ ರಮೇಶ್, ಗ್ರಾಮ ಪಂಚಾಯ್ತಿ ಮುಖಂಡ ರಾಜಕುಮಾರ್ ಹೀಗೆ ಅಕ್ಟೋಬರ್ ೨೪ರಂದೇ ೪೦ ಮಂದಿ ಬೇರೆ ಪಕ್ಷಗಳ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್‌ಗೆ ಚುನಾವಣಾ ಸಮಯದಲ್ಲಿ ಒಂದು ರೀತಿಯಲ್ಲಿ ಒಳ್ಳೆಯದೇ ಆದರೂ ಮುಂದಿನ ದಿನಗಳಲ್ಲಿ ಕಿರಿಕಿರಿಗೆ ಕಾರಣವಾಗಲೂಬಹುದು.
ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ನಾಯಕರು ಬಂದ ನಂತರ ಶಿರಾ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಮತ್ತು ಬಿಜೆಪಿಯಲ್ಲಿ ಮೊದಲು ಇದ್ದ ಉತ್ಸಾಹ ಕುಸಿದಿದೆ. ಹಾಗಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎನ್ನುತ್ತಾರೆ ಜನ.

ಬಿಜೆಪಿಯ ಆರಂಭ ಶೂರತ್ವ ನಂತರದ ದಿನಗಳಲ್ಲಿ ಕಾಣದಂತಾಗಿದೆ. ನಾಮಪತ್ರ ಸಲ್ಲಿಸುವ ಮುನ್ನ ಕೆಲ ಬಿಜೆಪಿ ನಾಯಕರು ಕ್ಷೇತ್ರಕ್ಕೆ ಬಂದು ಹೋದರು. ನಂತರ ವಿಜಯೇಂದ್ರ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ನೆಪ ಮಾತ್ರಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದಕಾರಜೋಳ, ಅಶ್ವತ್ಥನಾರಾಯಣ ಒಂದು ದಿನ ಬಂದು ಪ್ರಚಾರ ನಡೆಸಿ ಹೋದರು. ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಯುವ ಮುಖಂಡ-ಸಂಸದ ತೇಜಸ್ವಿ ಸೂರ್ಯ ಬಂದು ಜೆಡಿಎಸ್ ನಾಯಕರನ್ನು ಕೆಣಕಿ ಹೋದರು. ಮತ್ತೆ ಯಾವೊಬ್ಬ ನಾಯಕರು ಇತ್ತ ಸುಳಿದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದರೆ ಅದರ ಕ್ರೆಡಿಟ್ ವಿಜಯೇಂದ್ರ ಅವರಿಗೆ ಸಲ್ಲುತ್ತದೆ; ಆ ಕಾರಣಕ್ಕಾಗಿ ಬಿಜೆಪಿ ನಾಯಕರು ಪ್ರಚಾರದಲ್ಲಿ ಸಾಕಷ್ಟು ಭಾಗಿಯಾಗದೆ ಹಿಂದೆಸರಿದರು ಎಂದು ಹೇಳಲಾಗುತ್ತಿದೆ.

ಶಿರಾ ಕ್ಷೇತ್ರದ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ ಮೇಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತ ತಿರುಗಿಯೂ ನೋಡಿಲ್ಲ. ಆರ್.ಅಶೋಕ್, ಎಸ್.ಆರ್. ಬೊಮ್ಮಾಯಿ ಮತ್ತು ಆರ್.ಎಸ್.ಎಸ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಮುಖಂಡರು ಯಾರೂ ರಾಜೇಶ್ ಗೌಡ ಪರ ಪ್ರಚಾರಕ್ಕೆ ಬಂದಿಲ್ಲ. ಇದು ಬಿಜೆಪಿ ಕಾರ್ಯಕರ್ತರಲ್ಲಿ ನಿರುತ್ಸಾಹಕ್ಕೆ ಕಾರಣವಾಗಿದೆ. ಅಭ್ಯರ್ಥಿ ರಾಜೇಶ್ ಗೌಡ ಪರ ಬಿಜೆಪಿ ನಾಯಕರಲ್ಲಿ ಹೆಚ್ಚಿನ ಒಲವು ಇಲ್ಲದಿರುವುದು ಮತ್ತು ದುಡ್ಡು ಕೊಟ್ಟು ಟಿಕೆಟ್ ತಂದಿದ್ದಾರೆಂಬ ಆರೋಪಗಳು ಬಿಜೆಪಿ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಗುಸುಗುಸು ಸುದ್ದಿ:

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

  • ಕೆ.ಈ ಸಿದ್ದಯ್ಯ

ಇದನ್ನೂ ಓದಿ; RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...