Homeಮುಖಪುಟಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

- Advertisement -
- Advertisement -

ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದ್ದು ಈಗ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ಪಕ್ಷದ ಅಭ್ಯರ್ಥಿಗೆ ಆನೆಬಲ ಬಂದಂತಾಗಿದೆ. ಗೌಡಗೆರೆ-ಬರಗೂರು, ಕಳ್ಳಂಬೆಳ್ಳ ಭಾಗಗಳಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವಂತಹ ಕೆಲಸ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಇಡೀ ತಾಲೂಕಿನಾದ್ಯಂತ ತಂಡೋಪತಂಡವಾಗಿ ಪ್ರಚಾರ ನಡೆಸಿರುವುದು ಪ್ರಬಲ ಪೈಪೋಟಿಗೆ ಕಾರಣವಾಗಿದೆ.

ದೇವೇಗೌಡರು ಮಧುಗಿರಿ ತಾಲೂಕು ಬಡವನಹಳ್ಳಿ ಸಮೀಪದ ಕೈಮರದ ಶಾಸಕ ವೀರಭದ್ರಯ್ಯ ಅವರ ಮನೆಯಲ್ಲಿ ಬೀಡುಬಿಟ್ಟಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಗೌಡಗೆರೆ ಹೋಬಳಿಯಲ್ಲಿ ನೆಲೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಕೂಡ ಶಿರಾ ಕ್ಷೇತ್ರದಲ್ಲೇ ಉಳಿದು ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತದಾರರ ನಿರೀಕ್ಷೆಯಂತೆ ಜೆಡಿಎಸ್ ವರಿಷ್ಠರು ಕ್ಷೇತ್ರದಲ್ಲಿ ಕೊನೆಯ ಗಳಿಗೆಯಲ್ಲಿ ಪ್ರಚಾರವನ್ನು ತೀವ್ರಗೊಳಿಸಿದ್ದು ಮತದಾರರ ಮನ ಗೆಲ್ಲಲು ಹರಸಾಹಸಪಡುತ್ತಿದ್ದಾರೆ.

ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಮತ್ತು ಪುತ್ರ ಪ್ರಕಾಶ್ ವೇದಿಕೆಯಲ್ಲಿ ಕಣ್ಣೀರು ಸುರಿಸುತ್ತಾ ಮತದಾರರ ಅನುಕಂಪ ಗಿಟ್ಟಿಸುತ್ತಿದ್ದಾರೆ. ಅವರಿಬ್ಬರಿಗೆ ಭಾಷಣ ಕಲೆ ಗೊತ್ತಿಲ್ಲ. ಆದರೆ ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿಗಳು ತಮ್ಮ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದನ್ನು ಪ್ರಸ್ತಾಪಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತಿರುವುದು ಸಾಮಾನ್ಯವಾಗಿ ಕಂಡುಬಂದಿದೆ. ಪಕ್ಷದ ಪ್ರಮುಖ ಮುಖಂಡರ ಅಗಮನ ಜೆಡಿಎಸ್‌ಗೆ ಚೈತನ್ಯ ಬಂದಂತಾಗಿದೆ. ಕಾರ್ಯಕರ್ತರು ಹುರುಪಿನಿಂದ ಪ್ರಚಾರದಲ್ಲಿ ಭಾಗವಹಿಸುವುದು ಕಂಡುಬರುತ್ತಿದೆ. ಇದುವರೆಗೆ ಮಂಕಾಗಿದ್ದ ಮತದಾರರು ಮತ್ತು ಸ್ಥಳೀಯ ಮುಖಂಡರಲ್ಲಿ ಪಕ್ಷದ ಪ್ರಮುಖರ ಆಗಮನದಿಂದ ಅತ್ಯಂತ ಉತ್ಸಾಹದ ಬುಗ್ಗೆ ಚಿಮ್ಮುತ್ತಿದೆ.

ಕಾಂಗ್ರೆಸ್ ಮೊದಲಿನಿಂದಲೂ ಪ್ರಚಾರದಲ್ಲಿ ಮುಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸಂತೋಷ ಲಾಡ್, ಕಂಪ್ಲಿಯ ಗಣೇಶ್, ಪುಟ್ಟರಂಗಶೆಟ್ಟಿ, ಷಡಕ್ಷರಿ, ಎಂ.ಡಿ. ಲಕ್ಷ್ಮೀನಾರಾಯಣ, ಬಿ.ಎಲ್.ಶಂಕರ್, ಬಿ.ಕೆ.ಹರಿಪ್ರಸಾದ್ ಮತ್ತು ಜಿಲ್ಲೆಯ ಪ್ರಮುಖ ನಾಯಕರ ತಂಡ ಪ್ರತಿಯೊಂದು ಹೋಬಳಿಯಲ್ಲೂ ಪ್ರಚಾರ ನಡೆಸಿ ಹೋಗಿದೆ. ಜಾತಿ ಲೆಕ್ಕಾಚಾರವನ್ನೂ ಕಾಂಗ್ರೆಸ್ ಹಾಕಿದಂತೆ ಕಾಣುತ್ತಿದೆ. ಅದೇ ಕಾರಣಕ್ಕಾಗಿಯೇ ಪಕ್ಷದ ಎಲ್ಲಾ ವಿಭಾಗಗಳ ಮುಖಂಡರು ಕೂಡ ಪ್ರಚಾರದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್‌ಗೆ ಲಾಭವಾಗಲಿದೆ.

ಪ್ರಚಾರ ಸಂದರ್ಭದಲ್ಲಿ ಕಾಡುಗೊಲ್ಲರ ಮುಖಂಡರು ಸಿದ್ದರಾಮಯ್ಯ ಅವರಿಗೆ ಕಂಬಳಿ ಸನ್ಮಾನ ಮಾಡಿ ಕುರಿಯೊಂದನ್ನು ನೀಡಿರುವುದು ಕಾಂಗ್ರೆಸ್ ಅಭ್ಯರ್ಥಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಕಾಂಗ್ರೆಸ್ ಪಕ್ಷ ಒಕ್ಕಲಿಗರು, ದಲಿತರು, ಬಲಜಿಗರು, ಕಾಡುಗೊಲ್ಲರು, ಕುರುಬರು, ಅಲ್ಪಸಂಖ್ಯಾತರು, ನೇಕಾರರು ಹೀಗೆ ಎಲ್ಲಾ ಸಮುದಾಯಗಳ ಮುಖಂಡರನ್ನು ಕರೆಸಿ ಪ್ರಚಾರದಲ್ಲಿ ತೊಡಗುವಂತೆ ಮಾಡಿ ಆಯಾ ಸಮುದಾಯದ ಮತದಾರರಿಗೆ ಸಂದೇಶ ಹೋಗುವಂತೆ ಮಾಡಿದೆ. ಕುರುಬರು, ಕಾಡುಗೊಲ್ಲರು, ಅಲ್ಪಸಂಖ್ಯಾತರು, ನಾಯಕರು, ದಲಿತರು ಸೇರಿದಂತೆ ಅಹಿಂದ ವರ್ಗದ ಮತದಾರರನ್ನು ತನ್ನಡೆಗೆ ಸೆಳೆಯುವಂತಹ ಎಲ್ಲಾ ಪ್ರಯತ್ನಗಳಲ್ಲೂ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

ಶಿರಾ, ಮಡಕಶಿರಾ, ಪಾವಗಡ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿನ ಪ್ರಭಾವವನ್ನು ಹೊಂದಿರುವ ಆಂಧ್ರಪ್ರದೇಶದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಘುವೀರಾ ರೆಡ್ಡಿ ಅವರನ್ನು ಟಿ.ಬಿ.ಜಯಚಂದ್ರ ಭೇಟಿ ಮಾಡಿದ್ದಾರೆ. ಯುವ ಮುಖಂಡ ಕೆ.ಎನ್.ರಾಜಣ್ಣ ಪುತ್ರ ಆರ್.ರಾಜೇಂದ್ರ ಕೂಡ ಭೇಟಿ ಮಾಡಿ ಪಕ್ಷದ ಅಭ್ಯರ್ಥಿಗೆ ಗೆಲುವಿಗೆ ನೆರವಾಗುವಂತೆ ಮನವಿ ಮಾಡಿ ಬಂದಿದ್ದು ಬಿಜೆಪಿ ಎಲ್ಲಾ ಪಟ್ಟುಗಳನ್ನು ತಿರುವುಮುರುವಾಗುವಂತೆ ಮಾಡಿದೆ. ತಂಡತಂಡಗಳಲ್ಲಿ ಮಹಿಳಾ ಮುಖಂಡರು ಕೂಡ ಹೆಚ್ಚಿನ ಪ್ರಚಾರ ನಡೆಸಿದ್ದು ಮತದಾರರನ್ನು ಭೇಟಿ ಮಾಡುವಲ್ಲಿ ಸಫಲರಾಗಿದ್ದಾರೆ.

ಚುನಾವಣೆ ಘೋಷಣೆ ಆಗುವುದಕ್ಕೂ ಮೊದಲಿನಿಂದ ಇದುವರೆಗೆ ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ 5 ಸಾವಿರ ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ ಎನ್ನುತ್ತವೆ ಕಾಂಗ್ರೆಸ್ ಮೂಲಗಳು. ಬಿಜೆಪಿಯ ನಗರ ಘಟಕದ ಅಧ್ಯಕ್ಷ ಬಂಡಿ ರಮೇಶ್, ಗ್ರಾಮ ಪಂಚಾಯ್ತಿ ಮುಖಂಡ ರಾಜಕುಮಾರ್ ಹೀಗೆ ಅಕ್ಟೋಬರ್ ೨೪ರಂದೇ ೪೦ ಮಂದಿ ಬೇರೆ ಪಕ್ಷಗಳ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್‌ಗೆ ಚುನಾವಣಾ ಸಮಯದಲ್ಲಿ ಒಂದು ರೀತಿಯಲ್ಲಿ ಒಳ್ಳೆಯದೇ ಆದರೂ ಮುಂದಿನ ದಿನಗಳಲ್ಲಿ ಕಿರಿಕಿರಿಗೆ ಕಾರಣವಾಗಲೂಬಹುದು.
ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ನಾಯಕರು ಬಂದ ನಂತರ ಶಿರಾ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಮತ್ತು ಬಿಜೆಪಿಯಲ್ಲಿ ಮೊದಲು ಇದ್ದ ಉತ್ಸಾಹ ಕುಸಿದಿದೆ. ಹಾಗಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎನ್ನುತ್ತಾರೆ ಜನ.

ಬಿಜೆಪಿಯ ಆರಂಭ ಶೂರತ್ವ ನಂತರದ ದಿನಗಳಲ್ಲಿ ಕಾಣದಂತಾಗಿದೆ. ನಾಮಪತ್ರ ಸಲ್ಲಿಸುವ ಮುನ್ನ ಕೆಲ ಬಿಜೆಪಿ ನಾಯಕರು ಕ್ಷೇತ್ರಕ್ಕೆ ಬಂದು ಹೋದರು. ನಂತರ ವಿಜಯೇಂದ್ರ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ನೆಪ ಮಾತ್ರಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದಕಾರಜೋಳ, ಅಶ್ವತ್ಥನಾರಾಯಣ ಒಂದು ದಿನ ಬಂದು ಪ್ರಚಾರ ನಡೆಸಿ ಹೋದರು. ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಯುವ ಮುಖಂಡ-ಸಂಸದ ತೇಜಸ್ವಿ ಸೂರ್ಯ ಬಂದು ಜೆಡಿಎಸ್ ನಾಯಕರನ್ನು ಕೆಣಕಿ ಹೋದರು. ಮತ್ತೆ ಯಾವೊಬ್ಬ ನಾಯಕರು ಇತ್ತ ಸುಳಿದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದರೆ ಅದರ ಕ್ರೆಡಿಟ್ ವಿಜಯೇಂದ್ರ ಅವರಿಗೆ ಸಲ್ಲುತ್ತದೆ; ಆ ಕಾರಣಕ್ಕಾಗಿ ಬಿಜೆಪಿ ನಾಯಕರು ಪ್ರಚಾರದಲ್ಲಿ ಸಾಕಷ್ಟು ಭಾಗಿಯಾಗದೆ ಹಿಂದೆಸರಿದರು ಎಂದು ಹೇಳಲಾಗುತ್ತಿದೆ.

ಶಿರಾ ಕ್ಷೇತ್ರದ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ ಮೇಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತ ತಿರುಗಿಯೂ ನೋಡಿಲ್ಲ. ಆರ್.ಅಶೋಕ್, ಎಸ್.ಆರ್. ಬೊಮ್ಮಾಯಿ ಮತ್ತು ಆರ್.ಎಸ್.ಎಸ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಮುಖಂಡರು ಯಾರೂ ರಾಜೇಶ್ ಗೌಡ ಪರ ಪ್ರಚಾರಕ್ಕೆ ಬಂದಿಲ್ಲ. ಇದು ಬಿಜೆಪಿ ಕಾರ್ಯಕರ್ತರಲ್ಲಿ ನಿರುತ್ಸಾಹಕ್ಕೆ ಕಾರಣವಾಗಿದೆ. ಅಭ್ಯರ್ಥಿ ರಾಜೇಶ್ ಗೌಡ ಪರ ಬಿಜೆಪಿ ನಾಯಕರಲ್ಲಿ ಹೆಚ್ಚಿನ ಒಲವು ಇಲ್ಲದಿರುವುದು ಮತ್ತು ದುಡ್ಡು ಕೊಟ್ಟು ಟಿಕೆಟ್ ತಂದಿದ್ದಾರೆಂಬ ಆರೋಪಗಳು ಬಿಜೆಪಿ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಗುಸುಗುಸು ಸುದ್ದಿ:

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

  • ಕೆ.ಈ ಸಿದ್ದಯ್ಯ

ಇದನ್ನೂ ಓದಿ; RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....