Homeಮುಖಪುಟಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

- Advertisement -
- Advertisement -

ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದ್ದು ಈಗ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ಪಕ್ಷದ ಅಭ್ಯರ್ಥಿಗೆ ಆನೆಬಲ ಬಂದಂತಾಗಿದೆ. ಗೌಡಗೆರೆ-ಬರಗೂರು, ಕಳ್ಳಂಬೆಳ್ಳ ಭಾಗಗಳಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವಂತಹ ಕೆಲಸ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಇಡೀ ತಾಲೂಕಿನಾದ್ಯಂತ ತಂಡೋಪತಂಡವಾಗಿ ಪ್ರಚಾರ ನಡೆಸಿರುವುದು ಪ್ರಬಲ ಪೈಪೋಟಿಗೆ ಕಾರಣವಾಗಿದೆ.

ದೇವೇಗೌಡರು ಮಧುಗಿರಿ ತಾಲೂಕು ಬಡವನಹಳ್ಳಿ ಸಮೀಪದ ಕೈಮರದ ಶಾಸಕ ವೀರಭದ್ರಯ್ಯ ಅವರ ಮನೆಯಲ್ಲಿ ಬೀಡುಬಿಟ್ಟಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಗೌಡಗೆರೆ ಹೋಬಳಿಯಲ್ಲಿ ನೆಲೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಕೂಡ ಶಿರಾ ಕ್ಷೇತ್ರದಲ್ಲೇ ಉಳಿದು ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತದಾರರ ನಿರೀಕ್ಷೆಯಂತೆ ಜೆಡಿಎಸ್ ವರಿಷ್ಠರು ಕ್ಷೇತ್ರದಲ್ಲಿ ಕೊನೆಯ ಗಳಿಗೆಯಲ್ಲಿ ಪ್ರಚಾರವನ್ನು ತೀವ್ರಗೊಳಿಸಿದ್ದು ಮತದಾರರ ಮನ ಗೆಲ್ಲಲು ಹರಸಾಹಸಪಡುತ್ತಿದ್ದಾರೆ.

ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಮತ್ತು ಪುತ್ರ ಪ್ರಕಾಶ್ ವೇದಿಕೆಯಲ್ಲಿ ಕಣ್ಣೀರು ಸುರಿಸುತ್ತಾ ಮತದಾರರ ಅನುಕಂಪ ಗಿಟ್ಟಿಸುತ್ತಿದ್ದಾರೆ. ಅವರಿಬ್ಬರಿಗೆ ಭಾಷಣ ಕಲೆ ಗೊತ್ತಿಲ್ಲ. ಆದರೆ ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿಗಳು ತಮ್ಮ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದನ್ನು ಪ್ರಸ್ತಾಪಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತಿರುವುದು ಸಾಮಾನ್ಯವಾಗಿ ಕಂಡುಬಂದಿದೆ. ಪಕ್ಷದ ಪ್ರಮುಖ ಮುಖಂಡರ ಅಗಮನ ಜೆಡಿಎಸ್‌ಗೆ ಚೈತನ್ಯ ಬಂದಂತಾಗಿದೆ. ಕಾರ್ಯಕರ್ತರು ಹುರುಪಿನಿಂದ ಪ್ರಚಾರದಲ್ಲಿ ಭಾಗವಹಿಸುವುದು ಕಂಡುಬರುತ್ತಿದೆ. ಇದುವರೆಗೆ ಮಂಕಾಗಿದ್ದ ಮತದಾರರು ಮತ್ತು ಸ್ಥಳೀಯ ಮುಖಂಡರಲ್ಲಿ ಪಕ್ಷದ ಪ್ರಮುಖರ ಆಗಮನದಿಂದ ಅತ್ಯಂತ ಉತ್ಸಾಹದ ಬುಗ್ಗೆ ಚಿಮ್ಮುತ್ತಿದೆ.

ಕಾಂಗ್ರೆಸ್ ಮೊದಲಿನಿಂದಲೂ ಪ್ರಚಾರದಲ್ಲಿ ಮುಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸಂತೋಷ ಲಾಡ್, ಕಂಪ್ಲಿಯ ಗಣೇಶ್, ಪುಟ್ಟರಂಗಶೆಟ್ಟಿ, ಷಡಕ್ಷರಿ, ಎಂ.ಡಿ. ಲಕ್ಷ್ಮೀನಾರಾಯಣ, ಬಿ.ಎಲ್.ಶಂಕರ್, ಬಿ.ಕೆ.ಹರಿಪ್ರಸಾದ್ ಮತ್ತು ಜಿಲ್ಲೆಯ ಪ್ರಮುಖ ನಾಯಕರ ತಂಡ ಪ್ರತಿಯೊಂದು ಹೋಬಳಿಯಲ್ಲೂ ಪ್ರಚಾರ ನಡೆಸಿ ಹೋಗಿದೆ. ಜಾತಿ ಲೆಕ್ಕಾಚಾರವನ್ನೂ ಕಾಂಗ್ರೆಸ್ ಹಾಕಿದಂತೆ ಕಾಣುತ್ತಿದೆ. ಅದೇ ಕಾರಣಕ್ಕಾಗಿಯೇ ಪಕ್ಷದ ಎಲ್ಲಾ ವಿಭಾಗಗಳ ಮುಖಂಡರು ಕೂಡ ಪ್ರಚಾರದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್‌ಗೆ ಲಾಭವಾಗಲಿದೆ.

ಪ್ರಚಾರ ಸಂದರ್ಭದಲ್ಲಿ ಕಾಡುಗೊಲ್ಲರ ಮುಖಂಡರು ಸಿದ್ದರಾಮಯ್ಯ ಅವರಿಗೆ ಕಂಬಳಿ ಸನ್ಮಾನ ಮಾಡಿ ಕುರಿಯೊಂದನ್ನು ನೀಡಿರುವುದು ಕಾಂಗ್ರೆಸ್ ಅಭ್ಯರ್ಥಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಕಾಂಗ್ರೆಸ್ ಪಕ್ಷ ಒಕ್ಕಲಿಗರು, ದಲಿತರು, ಬಲಜಿಗರು, ಕಾಡುಗೊಲ್ಲರು, ಕುರುಬರು, ಅಲ್ಪಸಂಖ್ಯಾತರು, ನೇಕಾರರು ಹೀಗೆ ಎಲ್ಲಾ ಸಮುದಾಯಗಳ ಮುಖಂಡರನ್ನು ಕರೆಸಿ ಪ್ರಚಾರದಲ್ಲಿ ತೊಡಗುವಂತೆ ಮಾಡಿ ಆಯಾ ಸಮುದಾಯದ ಮತದಾರರಿಗೆ ಸಂದೇಶ ಹೋಗುವಂತೆ ಮಾಡಿದೆ. ಕುರುಬರು, ಕಾಡುಗೊಲ್ಲರು, ಅಲ್ಪಸಂಖ್ಯಾತರು, ನಾಯಕರು, ದಲಿತರು ಸೇರಿದಂತೆ ಅಹಿಂದ ವರ್ಗದ ಮತದಾರರನ್ನು ತನ್ನಡೆಗೆ ಸೆಳೆಯುವಂತಹ ಎಲ್ಲಾ ಪ್ರಯತ್ನಗಳಲ್ಲೂ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

ಶಿರಾ, ಮಡಕಶಿರಾ, ಪಾವಗಡ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿನ ಪ್ರಭಾವವನ್ನು ಹೊಂದಿರುವ ಆಂಧ್ರಪ್ರದೇಶದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಘುವೀರಾ ರೆಡ್ಡಿ ಅವರನ್ನು ಟಿ.ಬಿ.ಜಯಚಂದ್ರ ಭೇಟಿ ಮಾಡಿದ್ದಾರೆ. ಯುವ ಮುಖಂಡ ಕೆ.ಎನ್.ರಾಜಣ್ಣ ಪುತ್ರ ಆರ್.ರಾಜೇಂದ್ರ ಕೂಡ ಭೇಟಿ ಮಾಡಿ ಪಕ್ಷದ ಅಭ್ಯರ್ಥಿಗೆ ಗೆಲುವಿಗೆ ನೆರವಾಗುವಂತೆ ಮನವಿ ಮಾಡಿ ಬಂದಿದ್ದು ಬಿಜೆಪಿ ಎಲ್ಲಾ ಪಟ್ಟುಗಳನ್ನು ತಿರುವುಮುರುವಾಗುವಂತೆ ಮಾಡಿದೆ. ತಂಡತಂಡಗಳಲ್ಲಿ ಮಹಿಳಾ ಮುಖಂಡರು ಕೂಡ ಹೆಚ್ಚಿನ ಪ್ರಚಾರ ನಡೆಸಿದ್ದು ಮತದಾರರನ್ನು ಭೇಟಿ ಮಾಡುವಲ್ಲಿ ಸಫಲರಾಗಿದ್ದಾರೆ.

ಚುನಾವಣೆ ಘೋಷಣೆ ಆಗುವುದಕ್ಕೂ ಮೊದಲಿನಿಂದ ಇದುವರೆಗೆ ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ 5 ಸಾವಿರ ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ ಎನ್ನುತ್ತವೆ ಕಾಂಗ್ರೆಸ್ ಮೂಲಗಳು. ಬಿಜೆಪಿಯ ನಗರ ಘಟಕದ ಅಧ್ಯಕ್ಷ ಬಂಡಿ ರಮೇಶ್, ಗ್ರಾಮ ಪಂಚಾಯ್ತಿ ಮುಖಂಡ ರಾಜಕುಮಾರ್ ಹೀಗೆ ಅಕ್ಟೋಬರ್ ೨೪ರಂದೇ ೪೦ ಮಂದಿ ಬೇರೆ ಪಕ್ಷಗಳ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್‌ಗೆ ಚುನಾವಣಾ ಸಮಯದಲ್ಲಿ ಒಂದು ರೀತಿಯಲ್ಲಿ ಒಳ್ಳೆಯದೇ ಆದರೂ ಮುಂದಿನ ದಿನಗಳಲ್ಲಿ ಕಿರಿಕಿರಿಗೆ ಕಾರಣವಾಗಲೂಬಹುದು.
ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ನಾಯಕರು ಬಂದ ನಂತರ ಶಿರಾ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಮತ್ತು ಬಿಜೆಪಿಯಲ್ಲಿ ಮೊದಲು ಇದ್ದ ಉತ್ಸಾಹ ಕುಸಿದಿದೆ. ಹಾಗಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎನ್ನುತ್ತಾರೆ ಜನ.

ಬಿಜೆಪಿಯ ಆರಂಭ ಶೂರತ್ವ ನಂತರದ ದಿನಗಳಲ್ಲಿ ಕಾಣದಂತಾಗಿದೆ. ನಾಮಪತ್ರ ಸಲ್ಲಿಸುವ ಮುನ್ನ ಕೆಲ ಬಿಜೆಪಿ ನಾಯಕರು ಕ್ಷೇತ್ರಕ್ಕೆ ಬಂದು ಹೋದರು. ನಂತರ ವಿಜಯೇಂದ್ರ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ನೆಪ ಮಾತ್ರಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದಕಾರಜೋಳ, ಅಶ್ವತ್ಥನಾರಾಯಣ ಒಂದು ದಿನ ಬಂದು ಪ್ರಚಾರ ನಡೆಸಿ ಹೋದರು. ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಯುವ ಮುಖಂಡ-ಸಂಸದ ತೇಜಸ್ವಿ ಸೂರ್ಯ ಬಂದು ಜೆಡಿಎಸ್ ನಾಯಕರನ್ನು ಕೆಣಕಿ ಹೋದರು. ಮತ್ತೆ ಯಾವೊಬ್ಬ ನಾಯಕರು ಇತ್ತ ಸುಳಿದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದರೆ ಅದರ ಕ್ರೆಡಿಟ್ ವಿಜಯೇಂದ್ರ ಅವರಿಗೆ ಸಲ್ಲುತ್ತದೆ; ಆ ಕಾರಣಕ್ಕಾಗಿ ಬಿಜೆಪಿ ನಾಯಕರು ಪ್ರಚಾರದಲ್ಲಿ ಸಾಕಷ್ಟು ಭಾಗಿಯಾಗದೆ ಹಿಂದೆಸರಿದರು ಎಂದು ಹೇಳಲಾಗುತ್ತಿದೆ.

ಶಿರಾ ಕ್ಷೇತ್ರದ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ ಮೇಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತ ತಿರುಗಿಯೂ ನೋಡಿಲ್ಲ. ಆರ್.ಅಶೋಕ್, ಎಸ್.ಆರ್. ಬೊಮ್ಮಾಯಿ ಮತ್ತು ಆರ್.ಎಸ್.ಎಸ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಮುಖಂಡರು ಯಾರೂ ರಾಜೇಶ್ ಗೌಡ ಪರ ಪ್ರಚಾರಕ್ಕೆ ಬಂದಿಲ್ಲ. ಇದು ಬಿಜೆಪಿ ಕಾರ್ಯಕರ್ತರಲ್ಲಿ ನಿರುತ್ಸಾಹಕ್ಕೆ ಕಾರಣವಾಗಿದೆ. ಅಭ್ಯರ್ಥಿ ರಾಜೇಶ್ ಗೌಡ ಪರ ಬಿಜೆಪಿ ನಾಯಕರಲ್ಲಿ ಹೆಚ್ಚಿನ ಒಲವು ಇಲ್ಲದಿರುವುದು ಮತ್ತು ದುಡ್ಡು ಕೊಟ್ಟು ಟಿಕೆಟ್ ತಂದಿದ್ದಾರೆಂಬ ಆರೋಪಗಳು ಬಿಜೆಪಿ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಗುಸುಗುಸು ಸುದ್ದಿ:

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

  • ಕೆ.ಈ ಸಿದ್ದಯ್ಯ

ಇದನ್ನೂ ಓದಿ; RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...