Homeಕರ್ನಾಟಕಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಈ ಮಟ್ಟದ ಹಣದ ಹೊಳೆ ಹರಿದಿರುವುದು ಶಿರಾ ಚುನಾವಣೆಯ ಇತಿಹಾಸದಲ್ಲೇ ಇದೇ ಮೊದಲು ಎನ್ನಲಾಗುತ್ತಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಮತದಾನ ಅಂತ್ಯಗೊಂಡಿದೆ. ಮೂರು ಪಕ್ಷದ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ದಾಖಲಾಗಿದೆ. ಉಪಚುನಾವಣೆಯಲ್ಲಿ ಶೇ.84.31 ರಷ್ಟು ಮತದಾನವಾಗಿದ್ದು ಎರಡು ಹೋಬಳಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗಳ ನಡುವೆ ಮತ್ತು ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಧಿಕ ಮತ ಗಳು ಹಂಚಿಕೆಯಾಗಿರುವುದು ಆಯಾ ಪಕ್ಷಗಳು ನಡೆಸಿರುವ ಆಂತರಿಕ ಸಮೀಕ್ಷೆಗಳಿಂದ ತಿಳಿದುಬಂದಿದೆ. ಕ್ಷೇತ್ರದಲ್ಲಿ ಮೂರು ಅಭ್ಯರ್ಥಿಗಳಲ್ಲಿ ಯಾರನ್ನೂ ನಿರ್ಲಕ್ಷಿಸುವಂತಿಲ್ಲ ಎನ್ನುತ್ತಾರೆ ಮತದಾರರು.

ಕೆಲವೊಂದು ಹಟ್ಟಿಗಳಲ್ಲಿ ಬಹುತೇಕ ಮತದಾರರ ಮತಗಳು ಹಾಗೂ ಶಿರಾ ನಗರದ ನಾಲ್ಕು ವಾರ್ಡುಗಳಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಾಲಾಗಿವೆ. ಉಳಿದ ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಮತಗಳು ಹಂಚಿಹೋಗಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದರೂ ಫಲಿತಾಂಶ ಬೇರೆಯೇ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಕಂಡುಬಂದಿದ್ದರೆ, ಜೆಡಿಎಸ್ 3 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಚುನಾವಣಾ ಪ್ರಚಾರ ಅಂತ್ಯಗೊಂಡ ದಿನದಂದು ನಡೆದ ಘಟನೆ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡಲು ಕಾರಣ. ನವೆಂಬರ್ 1 ರಂದು ಶಿರಾ ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬಂದು ಗೌರಿಶಂಕರ್ ಅವರಿಗೆ ಭಾಷಣ ನಿಲ್ಲಿಸುವಂತೆ ತಾಕೀತು ಮಾಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಗೌರಿಶಂಕರ್ ಸಿಟ್ಟಾಗಿ ಮೈಕ್ ಎಸೆದು ವೇದಿಕೆಯಿಂದ ಇಳಿದು ಹೋಗಿದ್ದಾರೆ.

ಈ ಘಟನೆ ನಂತರ ಕಾರ್ಯಕರ್ತರು ಕೂಡ ಒಬ್ಬೊಬ್ಬರಾಗಿ ಹೊರಟು ಹೋದರೆಂದು, ಕೊನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡುವ ವೇಳೆಗೆ ಕೇವಲ 100 ಮಂದಿ ಕಾರ್ಯಕರ್ತರು ಮಾತ್ತ ಇದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಚಾರ ಮುಗಿದ ದಿನ ನಡೆದಿರುವ ಈ ಘಟನೆ ಮತದಾನದ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಜೆಡಿಎಸ್ ವರಿಷ್ಠರ ಶ್ರಮ ನೀರಿನಲ್ಲಿ ಹುಣಿಸೆಹಣ್ಣು ತೊಳೆದಂತೆ ವ್ಯರ್ಥವಾಗಿದೆ. ನಿಜವಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ ಮುಖಂಡರನ್ನು ಬಿಟ್ಟು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಿದ್ದು ಕೂಡ ಸ್ಥಳೀಯ ಮುಖಂಡರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣ ಎಂದು ತಿಳಿದುಬಂದಿದೆ.  ಜೆಡಿಎಸ್ ಬೆಂಬಲಿಗರು ಮತ್ತು ಮುಖಂಡರು ಈ ಆರೋಪವನ್ನು ನಿರಾಕರಿಸುತ್ತಿದ್ದರೂ ಗೌರಿಶಂಕರ್ ಮತ್ತು ಇತರರನ್ನು ನಿರ್ಲಕ್ಷಿಸಿದ್ದೇ ಮತದಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ಕಾರಣ ಎಂದು ತಿಳಿದು ಬಂದಿದೆ.

ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪತಿಯ ಹುಟ್ಟೂರು ಭುವನಹಳ್ಳಿ ಗ್ರಾಮದಲ್ಲೇ ಅವರಿಗೆ ಕಡಿಮೆ ಮತಗಳು ಬಿದ್ದಿವೆ. ಹೆಚ್ಚಿನ ಮತಗಳು ಅಮ್ಮಾಜಮ್ಮ ಅವರ ವಿರುದ್ಧದ ಅಭ್ಯರ್ಥಿಗಳಿಗೆ ಬಿದ್ದಿವೆ ಎಂದು ಹೇಳಲಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇರುವ ಬಗ್ಗೆ ಬೆಟ್ಟಿಂಗ್ ಕೂಡ ನಡೆಯುತ್ತಿದೆ. ಹಣದ ಹರಿವಿನ ಬಗ್ಗೆ ಪ್ರಜ್ಞಾವಂತ ಮತದಾರರು ಅಚ್ಚರಿ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಯಾರ ಪರವಾಗಿಯಾದರೂ ಆಗಲಿ ಈ ಮಟ್ಟದ ಹಣದ ಹೊಳೆ ಹರಿದಿರುವುದು ಶಿರಾ ಚುನಾವಣೆಯ ಇತಿಹಾಸದಲ್ಲೇ ಇದೇ ಮೊದಲು ಎನ್ನುತ್ತಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಇವಿಎಂ ದೋಷದ ಬಗ್ಗೆ ಗಮನ ಸೆಳೆದಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿಯೂ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಲ್ಲಿ ಮತ ಯಂತ್ರಗಳು ಕೈಕೊಟ್ಟಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನಾನು ಇವಿಎಂಗಳ ಕುರಿತು ಮುಂದಿನ ದಿನಗಳಲ್ಲಿ ಜೋರು ದನಿಯಲ್ಲಿ ಕೇಳುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ನವೆಂಬರ್ 3 ರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ನೂರಕ್ಕೆ ನೂರರಷ್ಟು ಖಚಿತ. 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅತೀವ ವಿಶ್ವಾಸದಿಂದ ಬೀಗುತ್ತಿದೆ. ಈ ಉತ್ಸಾಹ ಬೇರೆಯವರಲ್ಲಿ ಕಂಡು ಬರುತ್ತಿಲ್ಲ.

ಇಷ್ಟಾಗಿಯೂ ಗೆಲುವು ಯಾರದು ಎಂಬ ಪ್ರಶ್ನೆಗೆ ನವೆಂಬರ್ 10ರಂದು ಉತ್ತರ ಸಿಗಲಿದೆ.

ಇದನ್ನೂ ಒದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...