Homeಕರ್ನಾಟಕಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ- ಕೆ.ಎನ್.ರಾಜಣ್ಣ

- Advertisement -
- Advertisement -

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾದ ಬಳಿಕ, ಇದೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಉಭಯ ನಾಯಕರು ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂಬುದನ್ನು ಸ್ಪಷ್ಪಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, “ನನ್ನ ಮತ್ತು ಜಯಚಂದ್ರ ನಡುವೆ ಕೆಲವು ಅಸಮಾಧಾನ ಇದ್ದುದು ನಿಜ. ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿಕೆ, ಇನ್ನಿತರ ವಿಷಯಗಳಲ್ಲಿ ಗೊಂದಲಗಳು ಉಂಟಾಗಿದ್ದವು. ಪಕ್ಷದ ರಾಜ್ಯ ಮುಖಂಡರು ನಮ್ಮನ್ನು ಕರೆಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲಗಳು ಬಗೆಹರಿದಿವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

“ಹೈಕಮಾಂಡ್ ನಾಯಕರು ನಮ್ಮ ನಡುವಿನ ಗೊಂದಲಗಳನ್ನು ನಿವಾರಿಸಿರುವುದರಿಂದ ಸ್ವಾಭಿಮಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ. ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ” ಎಂದು ವ್ಯಾಖ್ಯಾನಿಸಿದರು.

“ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಬಿಪ್ರಾಯಗಳು ಇವೆ. ಅಸಮಾಧಾನವೂ ಇತ್ತು. ಇಂತಹ ಅಸಮಾಧಾನ, ಗೊಂದಲ ರಾಜಕಾರಣದಲ್ಲಿ ಸಹಜ. ಅವು ಬರುತ್ತವೆ ಹೋಗುತ್ತವೆ. ಪಕ್ಷ, ಜನರ ಹಿತದೃಷ್ಟಿ ಮತ್ತು ಮುಂದಿನ ಬೆಳವಣಿಗೆಗಳ ಹಿತದೃಷ್ಟಿಯಿಂದ ಒಂದಾಗಿ ಹೋಗಬೇಕೆಂದು ನಮ್ಮ ನಾಯಕರು ಹೇಳಿದ್ದಾರೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯ ವಿರೋಧಿ ಅಲೆ ಎದ್ದಿದೆ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಪ್ರಧಾನಿ ಮೋದಿ ಆಡಳಿತ ವಿರುದ್ಧ ಜನರ ತಿರುಗಿಬಿದ್ದಿದ್ದಾರೆ. ಮೋದಿ ಅಲೆ ಕೆಲಸ ಮಾಡುವುದಿಲ್ಲ. ಇತ್ತೀಚೆಗೆ ಮೋದಿ ವಿಡಿಯೋಗಳಿಗೆ ಜನ ಡಿಸ್ ಲೈಕ್ ಒತ್ತಿರುವುದು ಕಂಡುಬಂದಿದೆ. ಅಂದರೆ ಜನ, ಮೋದಿ ಅವರ ಆಡಳಿತವನ್ನು ಒಪ್ಪಿಕೊಂಡಿಲ್ಲ. ಹಾಗಾಗಿ ಶಿರಾದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಲಿದೆ. ಆಡಳಿತ ಪಕ್ಷ ಇದ್ದಾಗ ಶೇ.10ರಷ್ಟು ಮತಗಳು ಸರ್ಕಾರದ ಪರವಾಗಿ ಬೀಳುತ್ತವೆ. ಹಾಗಾಗಿ ಮೂರನೇ ಸ್ಥಾನ ಪಡೆಯಲಿದೆ ಎಂದು ಕೆ.ಎನ್‌.ರಾಜಣ್ಣ ವಿಶ್ಲೇಷಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಮಾಜಿ ಸಚಿವ ಹಾಗೂ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, “ಜನರು ಮತ್ತು ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಪರಮೇಶ್ವರ್, ಷಡಕ್ಷರಿ, ಕೆ.ಎನ್.ರಾಜಣ್ಣ ಮತ್ತು ನಮೆಗೆಲ್ಲ ವಯಸ್ಸಾಯಿತು. ಪಕ್ಷದ ಬೆಳವಣಿಗೆ ದೃಷ್ಟಿ ಮತ್ತು ಹೊಸ ನಾಯಕತ್ವದ ಹಿತದೃಷ್ಟಿಯಿಂದ ಹೊಂದಿಕೊಂಡು ಹೋಗಬೇಕು. ಇದು ಅನಿವಾರ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವ್ಯಕ್ತವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಕೆ.ಎನ್.ರಾಜಣ್ಣ ಮುಕ್ತವಾಗಿ ಮಾತನಾಡುತ್ತಾರೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡುತ್ತೀರಾ ಮತ್ತು ತಪ್ಪು ವ್ಯಾಖ್ಯಾನ ಮಾಡುತ್ತೀರ. ನಮ್ಮ ನಡುವೆ ಯಾವುದೇ ವ್ಯತ್ಯಾಸ ಇಲ್ಲ. ನಮ್ಮ ರಾಜಕೀಯ ಅನುಭವ ಬಳಸಿಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡಬೇಕು ಪಕ್ಷವನ್ನು ಬಲಪಡಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಶಾಂತಲ ರಾಜಣ್ಣ, ಪುತ್ರ ಆರ್. ರಾಜೇಂದ್ರ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....