Homeಕರ್ನಾಟಕಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ- ಕೆ.ಎನ್.ರಾಜಣ್ಣ

- Advertisement -
- Advertisement -

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾದ ಬಳಿಕ, ಇದೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಉಭಯ ನಾಯಕರು ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂಬುದನ್ನು ಸ್ಪಷ್ಪಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, “ನನ್ನ ಮತ್ತು ಜಯಚಂದ್ರ ನಡುವೆ ಕೆಲವು ಅಸಮಾಧಾನ ಇದ್ದುದು ನಿಜ. ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿಕೆ, ಇನ್ನಿತರ ವಿಷಯಗಳಲ್ಲಿ ಗೊಂದಲಗಳು ಉಂಟಾಗಿದ್ದವು. ಪಕ್ಷದ ರಾಜ್ಯ ಮುಖಂಡರು ನಮ್ಮನ್ನು ಕರೆಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲಗಳು ಬಗೆಹರಿದಿವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

“ಹೈಕಮಾಂಡ್ ನಾಯಕರು ನಮ್ಮ ನಡುವಿನ ಗೊಂದಲಗಳನ್ನು ನಿವಾರಿಸಿರುವುದರಿಂದ ಸ್ವಾಭಿಮಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ. ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ” ಎಂದು ವ್ಯಾಖ್ಯಾನಿಸಿದರು.

“ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಬಿಪ್ರಾಯಗಳು ಇವೆ. ಅಸಮಾಧಾನವೂ ಇತ್ತು. ಇಂತಹ ಅಸಮಾಧಾನ, ಗೊಂದಲ ರಾಜಕಾರಣದಲ್ಲಿ ಸಹಜ. ಅವು ಬರುತ್ತವೆ ಹೋಗುತ್ತವೆ. ಪಕ್ಷ, ಜನರ ಹಿತದೃಷ್ಟಿ ಮತ್ತು ಮುಂದಿನ ಬೆಳವಣಿಗೆಗಳ ಹಿತದೃಷ್ಟಿಯಿಂದ ಒಂದಾಗಿ ಹೋಗಬೇಕೆಂದು ನಮ್ಮ ನಾಯಕರು ಹೇಳಿದ್ದಾರೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯ ವಿರೋಧಿ ಅಲೆ ಎದ್ದಿದೆ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಪ್ರಧಾನಿ ಮೋದಿ ಆಡಳಿತ ವಿರುದ್ಧ ಜನರ ತಿರುಗಿಬಿದ್ದಿದ್ದಾರೆ. ಮೋದಿ ಅಲೆ ಕೆಲಸ ಮಾಡುವುದಿಲ್ಲ. ಇತ್ತೀಚೆಗೆ ಮೋದಿ ವಿಡಿಯೋಗಳಿಗೆ ಜನ ಡಿಸ್ ಲೈಕ್ ಒತ್ತಿರುವುದು ಕಂಡುಬಂದಿದೆ. ಅಂದರೆ ಜನ, ಮೋದಿ ಅವರ ಆಡಳಿತವನ್ನು ಒಪ್ಪಿಕೊಂಡಿಲ್ಲ. ಹಾಗಾಗಿ ಶಿರಾದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಲಿದೆ. ಆಡಳಿತ ಪಕ್ಷ ಇದ್ದಾಗ ಶೇ.10ರಷ್ಟು ಮತಗಳು ಸರ್ಕಾರದ ಪರವಾಗಿ ಬೀಳುತ್ತವೆ. ಹಾಗಾಗಿ ಮೂರನೇ ಸ್ಥಾನ ಪಡೆಯಲಿದೆ ಎಂದು ಕೆ.ಎನ್‌.ರಾಜಣ್ಣ ವಿಶ್ಲೇಷಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಮಾಜಿ ಸಚಿವ ಹಾಗೂ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, “ಜನರು ಮತ್ತು ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಪರಮೇಶ್ವರ್, ಷಡಕ್ಷರಿ, ಕೆ.ಎನ್.ರಾಜಣ್ಣ ಮತ್ತು ನಮೆಗೆಲ್ಲ ವಯಸ್ಸಾಯಿತು. ಪಕ್ಷದ ಬೆಳವಣಿಗೆ ದೃಷ್ಟಿ ಮತ್ತು ಹೊಸ ನಾಯಕತ್ವದ ಹಿತದೃಷ್ಟಿಯಿಂದ ಹೊಂದಿಕೊಂಡು ಹೋಗಬೇಕು. ಇದು ಅನಿವಾರ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವ್ಯಕ್ತವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಕೆ.ಎನ್.ರಾಜಣ್ಣ ಮುಕ್ತವಾಗಿ ಮಾತನಾಡುತ್ತಾರೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡುತ್ತೀರಾ ಮತ್ತು ತಪ್ಪು ವ್ಯಾಖ್ಯಾನ ಮಾಡುತ್ತೀರ. ನಮ್ಮ ನಡುವೆ ಯಾವುದೇ ವ್ಯತ್ಯಾಸ ಇಲ್ಲ. ನಮ್ಮ ರಾಜಕೀಯ ಅನುಭವ ಬಳಸಿಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡಬೇಕು ಪಕ್ಷವನ್ನು ಬಲಪಡಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಶಾಂತಲ ರಾಜಣ್ಣ, ಪುತ್ರ ಆರ್. ರಾಜೇಂದ್ರ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...