Homeಕರ್ನಾಟಕಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ- ಕೆ.ಎನ್.ರಾಜಣ್ಣ

- Advertisement -
- Advertisement -

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾದ ಬಳಿಕ, ಇದೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಉಭಯ ನಾಯಕರು ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂಬುದನ್ನು ಸ್ಪಷ್ಪಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, “ನನ್ನ ಮತ್ತು ಜಯಚಂದ್ರ ನಡುವೆ ಕೆಲವು ಅಸಮಾಧಾನ ಇದ್ದುದು ನಿಜ. ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿಕೆ, ಇನ್ನಿತರ ವಿಷಯಗಳಲ್ಲಿ ಗೊಂದಲಗಳು ಉಂಟಾಗಿದ್ದವು. ಪಕ್ಷದ ರಾಜ್ಯ ಮುಖಂಡರು ನಮ್ಮನ್ನು ಕರೆಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲಗಳು ಬಗೆಹರಿದಿವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

“ಹೈಕಮಾಂಡ್ ನಾಯಕರು ನಮ್ಮ ನಡುವಿನ ಗೊಂದಲಗಳನ್ನು ನಿವಾರಿಸಿರುವುದರಿಂದ ಸ್ವಾಭಿಮಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ. ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ” ಎಂದು ವ್ಯಾಖ್ಯಾನಿಸಿದರು.

“ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಬಿಪ್ರಾಯಗಳು ಇವೆ. ಅಸಮಾಧಾನವೂ ಇತ್ತು. ಇಂತಹ ಅಸಮಾಧಾನ, ಗೊಂದಲ ರಾಜಕಾರಣದಲ್ಲಿ ಸಹಜ. ಅವು ಬರುತ್ತವೆ ಹೋಗುತ್ತವೆ. ಪಕ್ಷ, ಜನರ ಹಿತದೃಷ್ಟಿ ಮತ್ತು ಮುಂದಿನ ಬೆಳವಣಿಗೆಗಳ ಹಿತದೃಷ್ಟಿಯಿಂದ ಒಂದಾಗಿ ಹೋಗಬೇಕೆಂದು ನಮ್ಮ ನಾಯಕರು ಹೇಳಿದ್ದಾರೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯ ವಿರೋಧಿ ಅಲೆ ಎದ್ದಿದೆ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಪ್ರಧಾನಿ ಮೋದಿ ಆಡಳಿತ ವಿರುದ್ಧ ಜನರ ತಿರುಗಿಬಿದ್ದಿದ್ದಾರೆ. ಮೋದಿ ಅಲೆ ಕೆಲಸ ಮಾಡುವುದಿಲ್ಲ. ಇತ್ತೀಚೆಗೆ ಮೋದಿ ವಿಡಿಯೋಗಳಿಗೆ ಜನ ಡಿಸ್ ಲೈಕ್ ಒತ್ತಿರುವುದು ಕಂಡುಬಂದಿದೆ. ಅಂದರೆ ಜನ, ಮೋದಿ ಅವರ ಆಡಳಿತವನ್ನು ಒಪ್ಪಿಕೊಂಡಿಲ್ಲ. ಹಾಗಾಗಿ ಶಿರಾದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಲಿದೆ. ಆಡಳಿತ ಪಕ್ಷ ಇದ್ದಾಗ ಶೇ.10ರಷ್ಟು ಮತಗಳು ಸರ್ಕಾರದ ಪರವಾಗಿ ಬೀಳುತ್ತವೆ. ಹಾಗಾಗಿ ಮೂರನೇ ಸ್ಥಾನ ಪಡೆಯಲಿದೆ ಎಂದು ಕೆ.ಎನ್‌.ರಾಜಣ್ಣ ವಿಶ್ಲೇಷಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಮಾಜಿ ಸಚಿವ ಹಾಗೂ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, “ಜನರು ಮತ್ತು ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಪರಮೇಶ್ವರ್, ಷಡಕ್ಷರಿ, ಕೆ.ಎನ್.ರಾಜಣ್ಣ ಮತ್ತು ನಮೆಗೆಲ್ಲ ವಯಸ್ಸಾಯಿತು. ಪಕ್ಷದ ಬೆಳವಣಿಗೆ ದೃಷ್ಟಿ ಮತ್ತು ಹೊಸ ನಾಯಕತ್ವದ ಹಿತದೃಷ್ಟಿಯಿಂದ ಹೊಂದಿಕೊಂಡು ಹೋಗಬೇಕು. ಇದು ಅನಿವಾರ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವ್ಯಕ್ತವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಕೆ.ಎನ್.ರಾಜಣ್ಣ ಮುಕ್ತವಾಗಿ ಮಾತನಾಡುತ್ತಾರೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡುತ್ತೀರಾ ಮತ್ತು ತಪ್ಪು ವ್ಯಾಖ್ಯಾನ ಮಾಡುತ್ತೀರ. ನಮ್ಮ ನಡುವೆ ಯಾವುದೇ ವ್ಯತ್ಯಾಸ ಇಲ್ಲ. ನಮ್ಮ ರಾಜಕೀಯ ಅನುಭವ ಬಳಸಿಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡಬೇಕು ಪಕ್ಷವನ್ನು ಬಲಪಡಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಶಾಂತಲ ರಾಜಣ್ಣ, ಪುತ್ರ ಆರ್. ರಾಜೇಂದ್ರ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...