Homeಕರ್ನಾಟಕಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ- ಕೆ.ಎನ್.ರಾಜಣ್ಣ

- Advertisement -
- Advertisement -

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾದ ಬಳಿಕ, ಇದೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಉಭಯ ನಾಯಕರು ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂಬುದನ್ನು ಸ್ಪಷ್ಪಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, “ನನ್ನ ಮತ್ತು ಜಯಚಂದ್ರ ನಡುವೆ ಕೆಲವು ಅಸಮಾಧಾನ ಇದ್ದುದು ನಿಜ. ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿಕೆ, ಇನ್ನಿತರ ವಿಷಯಗಳಲ್ಲಿ ಗೊಂದಲಗಳು ಉಂಟಾಗಿದ್ದವು. ಪಕ್ಷದ ರಾಜ್ಯ ಮುಖಂಡರು ನಮ್ಮನ್ನು ಕರೆಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲಗಳು ಬಗೆಹರಿದಿವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

“ಹೈಕಮಾಂಡ್ ನಾಯಕರು ನಮ್ಮ ನಡುವಿನ ಗೊಂದಲಗಳನ್ನು ನಿವಾರಿಸಿರುವುದರಿಂದ ಸ್ವಾಭಿಮಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ. ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ” ಎಂದು ವ್ಯಾಖ್ಯಾನಿಸಿದರು.

“ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಬಿಪ್ರಾಯಗಳು ಇವೆ. ಅಸಮಾಧಾನವೂ ಇತ್ತು. ಇಂತಹ ಅಸಮಾಧಾನ, ಗೊಂದಲ ರಾಜಕಾರಣದಲ್ಲಿ ಸಹಜ. ಅವು ಬರುತ್ತವೆ ಹೋಗುತ್ತವೆ. ಪಕ್ಷ, ಜನರ ಹಿತದೃಷ್ಟಿ ಮತ್ತು ಮುಂದಿನ ಬೆಳವಣಿಗೆಗಳ ಹಿತದೃಷ್ಟಿಯಿಂದ ಒಂದಾಗಿ ಹೋಗಬೇಕೆಂದು ನಮ್ಮ ನಾಯಕರು ಹೇಳಿದ್ದಾರೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯ ವಿರೋಧಿ ಅಲೆ ಎದ್ದಿದೆ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಪ್ರಧಾನಿ ಮೋದಿ ಆಡಳಿತ ವಿರುದ್ಧ ಜನರ ತಿರುಗಿಬಿದ್ದಿದ್ದಾರೆ. ಮೋದಿ ಅಲೆ ಕೆಲಸ ಮಾಡುವುದಿಲ್ಲ. ಇತ್ತೀಚೆಗೆ ಮೋದಿ ವಿಡಿಯೋಗಳಿಗೆ ಜನ ಡಿಸ್ ಲೈಕ್ ಒತ್ತಿರುವುದು ಕಂಡುಬಂದಿದೆ. ಅಂದರೆ ಜನ, ಮೋದಿ ಅವರ ಆಡಳಿತವನ್ನು ಒಪ್ಪಿಕೊಂಡಿಲ್ಲ. ಹಾಗಾಗಿ ಶಿರಾದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಲಿದೆ. ಆಡಳಿತ ಪಕ್ಷ ಇದ್ದಾಗ ಶೇ.10ರಷ್ಟು ಮತಗಳು ಸರ್ಕಾರದ ಪರವಾಗಿ ಬೀಳುತ್ತವೆ. ಹಾಗಾಗಿ ಮೂರನೇ ಸ್ಥಾನ ಪಡೆಯಲಿದೆ ಎಂದು ಕೆ.ಎನ್‌.ರಾಜಣ್ಣ ವಿಶ್ಲೇಷಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಮಾಜಿ ಸಚಿವ ಹಾಗೂ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, “ಜನರು ಮತ್ತು ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಪರಮೇಶ್ವರ್, ಷಡಕ್ಷರಿ, ಕೆ.ಎನ್.ರಾಜಣ್ಣ ಮತ್ತು ನಮೆಗೆಲ್ಲ ವಯಸ್ಸಾಯಿತು. ಪಕ್ಷದ ಬೆಳವಣಿಗೆ ದೃಷ್ಟಿ ಮತ್ತು ಹೊಸ ನಾಯಕತ್ವದ ಹಿತದೃಷ್ಟಿಯಿಂದ ಹೊಂದಿಕೊಂಡು ಹೋಗಬೇಕು. ಇದು ಅನಿವಾರ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವ್ಯಕ್ತವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಕೆ.ಎನ್.ರಾಜಣ್ಣ ಮುಕ್ತವಾಗಿ ಮಾತನಾಡುತ್ತಾರೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡುತ್ತೀರಾ ಮತ್ತು ತಪ್ಪು ವ್ಯಾಖ್ಯಾನ ಮಾಡುತ್ತೀರ. ನಮ್ಮ ನಡುವೆ ಯಾವುದೇ ವ್ಯತ್ಯಾಸ ಇಲ್ಲ. ನಮ್ಮ ರಾಜಕೀಯ ಅನುಭವ ಬಳಸಿಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡಬೇಕು ಪಕ್ಷವನ್ನು ಬಲಪಡಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಶಾಂತಲ ರಾಜಣ್ಣ, ಪುತ್ರ ಆರ್. ರಾಜೇಂದ್ರ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...