Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...