Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...