Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...