Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...