Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....