Homeಕರ್ನಾಟಕಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಹೊರಗಿನಿಂದ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

ಹುಲಿಕುಂಟೆ ಹೋಬಳಿಯ ಜವಾಬ್ದಾರಿಯನ್ನು ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರಿಗೆ ವಹಿಸಲಾಗಿದ್ದು ಈ ಹೋಬಳಿಯಲ್ಲಿ ಬಿಜೆಪಿಯಿಂದ ಮತದಾರರಿಗೆ ಹಣದ ಆಮಿಷವೊಡ್ಡುವುದು ಹೆಚ್ಚಾಗಿದೆ ಎಂದು ಆರೋಪಿಸಲಾಗಿದೆ. ಉಗೇನಕಟ್ಟೆ ಗೇಟ್ ಬಳಿ ಅಕ್ಟೋಬರ್ 26 ರಂದು ರಾತ್ರಿ ವೇಳೆ ಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸನ ಮತ್ತು ಮಂಡ್ಯದಿಂದ ಬಂದವರು ರಾತ್ರಿ 10 ಗಂಟೆ ನಂತರವೂ ಗ್ರಾಮಗಳಲ್ಲಿ ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿದ್ದ ದೃಶ್ಯಗಳನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕೇಸರಿಶಾಲು ಹಾಕಿಕೊಂಡ ಮುಖಂಡರೊಬ್ಬರು ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಮಹಿಳೆಯರು ನನಗೆ ಕೊಟ್ಟಿಲ್ಲ ಎಂದು 200 ರೂಗಳನ್ನು ಪಡೆಯುವುದು ವಿಡಿಯೋಗಳಲ್ಲಿ ಕಂಡು ಬರುತ್ತದೆ. ಮುಖಂಡರೊಬ್ಬರು ಹಾಸನದ ಶಾಸಕ ಪ್ರೀತಂಗೌಡರು ಹಣ ಹಂಚುವಂತೆ ಹೇಳಿದ್ದಾರೆ. ಪ್ರತಿ ಬಾರಿಯೂ ಚುನಾವಣೆಯ ಸಮಯದಲ್ಲಿ ಮಹಿಳೆಯರನ್ನು ಮರೆಯುತ್ತಾರೆ. ಪುರುಷರಿಗೆ ಮಾತ್ರ ಹಣ ಕೊಡುತ್ತಾರೆ. ಮಹಿಳೆಯರನ್ನು ನಿರ್ಲಕ್ಷಿಸುತ್ತಾರೆ. ನಾವು ಹಾಗೆ ಮಾಡುವುದಿಲ್ಲ. ನಮಗೆ ಪ್ರೀತಂಗೌಡರು ಹೇಳಿದ್ದಾರೆ. ಅರಿಶಿನ ಕುಂಕುಮಕ್ಕಾಗಿ 200 ರೂ ಕೊಡಿ ಎಂದು. ಮತದಾನದ ಹಿಂದಿನ ದಿನದವರೆಗೂ ಪ್ರತಿ ದಿನ 200 ರೂ ಕೊಡುತ್ತೇವೆ. ಮತ ಯಾರಿಗೆ ಹಾಕಬೇಕು ಹೇಳಿ ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆಯರು ಜೆಡಿಎಸ್ ಎಂದು ಹೇಳುತ್ತಾರೆ. ನಂತರ ಆದ ತಪ್ಪನ್ನು ತಿದ್ದಿದಾಗ ಕಮಲಕ್ಕೆ ಹಾಕುತ್ತೇವೆ ಎನ್ನುತ್ತಾರೆ.

ಇಂತಹ ನಾಲ್ಕು ವಿಡಿಯೋಗಳು ವೈರಲ್ ಆಗಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಜೆಪಿಯವರು ಅಧಿಕೃತವಾಗಿ ಹಣ ಹಂಚುತ್ತಿದ್ದರೂ ಪೊಲೀಸರಾಗಲಿ ಮತ್ತು ಚುನಾವಣಾ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನ್ಯಾಯ ಸಮ್ಮತ ಚುನಾವಣೆ ಅಂದ್ರೆ ಇದೇನಾ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಿರಾದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ. ಮತದಾರರಿಗೆ ಆಮಿಷವೊಡ್ಡುತ್ತಿದೆ. ಚುನಾವಣಾ ಆಯೋಗ ಮೌನ ವಹಿಸಿದೆ ಎಂದು ಆರೋಪಿಸಿದ್ದರೆ, ಕಾಂಗ್ರೆಸ್ ಮುಖಂಡರು ಹಣ ಹಂಚಿಕೆ ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮತದಾನಕ್ಕೆ ಆರು ದಿನ ಮಾತ್ರ ಬಾಕಿ ಇದೆ. ಚುನಾವಣೆಯಲ್ಲಿ ಆಕ್ರಮ ನಡೆದಿರುವ ಬಗ್ಗೆ ಸಾಕಷ್ಟು ಬಾರಿ ಆರೋಪಗಳು ಕೇಳಿಬರುತ್ತಿದ್ದರೂ ಇದುವರೆಗೆ ಒಂದೇ ಒಂದು ಪ್ರಕರಣವನ್ನು ದಾಖಲಿಸಿದ ಉದಾಹರಣೆ ಇಲ್ಲ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...