Homeಕರ್ನಾಟಕಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಹೊರಗಿನಿಂದ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

ಹುಲಿಕುಂಟೆ ಹೋಬಳಿಯ ಜವಾಬ್ದಾರಿಯನ್ನು ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರಿಗೆ ವಹಿಸಲಾಗಿದ್ದು ಈ ಹೋಬಳಿಯಲ್ಲಿ ಬಿಜೆಪಿಯಿಂದ ಮತದಾರರಿಗೆ ಹಣದ ಆಮಿಷವೊಡ್ಡುವುದು ಹೆಚ್ಚಾಗಿದೆ ಎಂದು ಆರೋಪಿಸಲಾಗಿದೆ. ಉಗೇನಕಟ್ಟೆ ಗೇಟ್ ಬಳಿ ಅಕ್ಟೋಬರ್ 26 ರಂದು ರಾತ್ರಿ ವೇಳೆ ಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸನ ಮತ್ತು ಮಂಡ್ಯದಿಂದ ಬಂದವರು ರಾತ್ರಿ 10 ಗಂಟೆ ನಂತರವೂ ಗ್ರಾಮಗಳಲ್ಲಿ ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿದ್ದ ದೃಶ್ಯಗಳನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕೇಸರಿಶಾಲು ಹಾಕಿಕೊಂಡ ಮುಖಂಡರೊಬ್ಬರು ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಮಹಿಳೆಯರು ನನಗೆ ಕೊಟ್ಟಿಲ್ಲ ಎಂದು 200 ರೂಗಳನ್ನು ಪಡೆಯುವುದು ವಿಡಿಯೋಗಳಲ್ಲಿ ಕಂಡು ಬರುತ್ತದೆ. ಮುಖಂಡರೊಬ್ಬರು ಹಾಸನದ ಶಾಸಕ ಪ್ರೀತಂಗೌಡರು ಹಣ ಹಂಚುವಂತೆ ಹೇಳಿದ್ದಾರೆ. ಪ್ರತಿ ಬಾರಿಯೂ ಚುನಾವಣೆಯ ಸಮಯದಲ್ಲಿ ಮಹಿಳೆಯರನ್ನು ಮರೆಯುತ್ತಾರೆ. ಪುರುಷರಿಗೆ ಮಾತ್ರ ಹಣ ಕೊಡುತ್ತಾರೆ. ಮಹಿಳೆಯರನ್ನು ನಿರ್ಲಕ್ಷಿಸುತ್ತಾರೆ. ನಾವು ಹಾಗೆ ಮಾಡುವುದಿಲ್ಲ. ನಮಗೆ ಪ್ರೀತಂಗೌಡರು ಹೇಳಿದ್ದಾರೆ. ಅರಿಶಿನ ಕುಂಕುಮಕ್ಕಾಗಿ 200 ರೂ ಕೊಡಿ ಎಂದು. ಮತದಾನದ ಹಿಂದಿನ ದಿನದವರೆಗೂ ಪ್ರತಿ ದಿನ 200 ರೂ ಕೊಡುತ್ತೇವೆ. ಮತ ಯಾರಿಗೆ ಹಾಕಬೇಕು ಹೇಳಿ ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆಯರು ಜೆಡಿಎಸ್ ಎಂದು ಹೇಳುತ್ತಾರೆ. ನಂತರ ಆದ ತಪ್ಪನ್ನು ತಿದ್ದಿದಾಗ ಕಮಲಕ್ಕೆ ಹಾಕುತ್ತೇವೆ ಎನ್ನುತ್ತಾರೆ.

ಇಂತಹ ನಾಲ್ಕು ವಿಡಿಯೋಗಳು ವೈರಲ್ ಆಗಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಜೆಪಿಯವರು ಅಧಿಕೃತವಾಗಿ ಹಣ ಹಂಚುತ್ತಿದ್ದರೂ ಪೊಲೀಸರಾಗಲಿ ಮತ್ತು ಚುನಾವಣಾ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನ್ಯಾಯ ಸಮ್ಮತ ಚುನಾವಣೆ ಅಂದ್ರೆ ಇದೇನಾ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಿರಾದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ. ಮತದಾರರಿಗೆ ಆಮಿಷವೊಡ್ಡುತ್ತಿದೆ. ಚುನಾವಣಾ ಆಯೋಗ ಮೌನ ವಹಿಸಿದೆ ಎಂದು ಆರೋಪಿಸಿದ್ದರೆ, ಕಾಂಗ್ರೆಸ್ ಮುಖಂಡರು ಹಣ ಹಂಚಿಕೆ ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮತದಾನಕ್ಕೆ ಆರು ದಿನ ಮಾತ್ರ ಬಾಕಿ ಇದೆ. ಚುನಾವಣೆಯಲ್ಲಿ ಆಕ್ರಮ ನಡೆದಿರುವ ಬಗ್ಗೆ ಸಾಕಷ್ಟು ಬಾರಿ ಆರೋಪಗಳು ಕೇಳಿಬರುತ್ತಿದ್ದರೂ ಇದುವರೆಗೆ ಒಂದೇ ಒಂದು ಪ್ರಕರಣವನ್ನು ದಾಖಲಿಸಿದ ಉದಾಹರಣೆ ಇಲ್ಲ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...