Homeಕರ್ನಾಟಕಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಹೊರಗಿನಿಂದ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

ಹುಲಿಕುಂಟೆ ಹೋಬಳಿಯ ಜವಾಬ್ದಾರಿಯನ್ನು ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರಿಗೆ ವಹಿಸಲಾಗಿದ್ದು ಈ ಹೋಬಳಿಯಲ್ಲಿ ಬಿಜೆಪಿಯಿಂದ ಮತದಾರರಿಗೆ ಹಣದ ಆಮಿಷವೊಡ್ಡುವುದು ಹೆಚ್ಚಾಗಿದೆ ಎಂದು ಆರೋಪಿಸಲಾಗಿದೆ. ಉಗೇನಕಟ್ಟೆ ಗೇಟ್ ಬಳಿ ಅಕ್ಟೋಬರ್ 26 ರಂದು ರಾತ್ರಿ ವೇಳೆ ಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸನ ಮತ್ತು ಮಂಡ್ಯದಿಂದ ಬಂದವರು ರಾತ್ರಿ 10 ಗಂಟೆ ನಂತರವೂ ಗ್ರಾಮಗಳಲ್ಲಿ ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿದ್ದ ದೃಶ್ಯಗಳನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕೇಸರಿಶಾಲು ಹಾಕಿಕೊಂಡ ಮುಖಂಡರೊಬ್ಬರು ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಮಹಿಳೆಯರು ನನಗೆ ಕೊಟ್ಟಿಲ್ಲ ಎಂದು 200 ರೂಗಳನ್ನು ಪಡೆಯುವುದು ವಿಡಿಯೋಗಳಲ್ಲಿ ಕಂಡು ಬರುತ್ತದೆ. ಮುಖಂಡರೊಬ್ಬರು ಹಾಸನದ ಶಾಸಕ ಪ್ರೀತಂಗೌಡರು ಹಣ ಹಂಚುವಂತೆ ಹೇಳಿದ್ದಾರೆ. ಪ್ರತಿ ಬಾರಿಯೂ ಚುನಾವಣೆಯ ಸಮಯದಲ್ಲಿ ಮಹಿಳೆಯರನ್ನು ಮರೆಯುತ್ತಾರೆ. ಪುರುಷರಿಗೆ ಮಾತ್ರ ಹಣ ಕೊಡುತ್ತಾರೆ. ಮಹಿಳೆಯರನ್ನು ನಿರ್ಲಕ್ಷಿಸುತ್ತಾರೆ. ನಾವು ಹಾಗೆ ಮಾಡುವುದಿಲ್ಲ. ನಮಗೆ ಪ್ರೀತಂಗೌಡರು ಹೇಳಿದ್ದಾರೆ. ಅರಿಶಿನ ಕುಂಕುಮಕ್ಕಾಗಿ 200 ರೂ ಕೊಡಿ ಎಂದು. ಮತದಾನದ ಹಿಂದಿನ ದಿನದವರೆಗೂ ಪ್ರತಿ ದಿನ 200 ರೂ ಕೊಡುತ್ತೇವೆ. ಮತ ಯಾರಿಗೆ ಹಾಕಬೇಕು ಹೇಳಿ ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆಯರು ಜೆಡಿಎಸ್ ಎಂದು ಹೇಳುತ್ತಾರೆ. ನಂತರ ಆದ ತಪ್ಪನ್ನು ತಿದ್ದಿದಾಗ ಕಮಲಕ್ಕೆ ಹಾಕುತ್ತೇವೆ ಎನ್ನುತ್ತಾರೆ.

ಇಂತಹ ನಾಲ್ಕು ವಿಡಿಯೋಗಳು ವೈರಲ್ ಆಗಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಜೆಪಿಯವರು ಅಧಿಕೃತವಾಗಿ ಹಣ ಹಂಚುತ್ತಿದ್ದರೂ ಪೊಲೀಸರಾಗಲಿ ಮತ್ತು ಚುನಾವಣಾ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನ್ಯಾಯ ಸಮ್ಮತ ಚುನಾವಣೆ ಅಂದ್ರೆ ಇದೇನಾ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಿರಾದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ. ಮತದಾರರಿಗೆ ಆಮಿಷವೊಡ್ಡುತ್ತಿದೆ. ಚುನಾವಣಾ ಆಯೋಗ ಮೌನ ವಹಿಸಿದೆ ಎಂದು ಆರೋಪಿಸಿದ್ದರೆ, ಕಾಂಗ್ರೆಸ್ ಮುಖಂಡರು ಹಣ ಹಂಚಿಕೆ ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮತದಾನಕ್ಕೆ ಆರು ದಿನ ಮಾತ್ರ ಬಾಕಿ ಇದೆ. ಚುನಾವಣೆಯಲ್ಲಿ ಆಕ್ರಮ ನಡೆದಿರುವ ಬಗ್ಗೆ ಸಾಕಷ್ಟು ಬಾರಿ ಆರೋಪಗಳು ಕೇಳಿಬರುತ್ತಿದ್ದರೂ ಇದುವರೆಗೆ ಒಂದೇ ಒಂದು ಪ್ರಕರಣವನ್ನು ದಾಖಲಿಸಿದ ಉದಾಹರಣೆ ಇಲ್ಲ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...