Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...