Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...