Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...