Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...