Homeಮುಖಪುಟಎನ್‌ಡಿಎ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವತ್ತ ಶಿರೋಮಣಿ ಅಕಾಲಿದಳ!

ಎನ್‌ಡಿಎ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವತ್ತ ಶಿರೋಮಣಿ ಅಕಾಲಿದಳ!

’ದೇಶದ ರಾಜಕೀಯವನ್ನು "ಕೇಂದ್ರೀಕರಿಸುವ" ಪ್ರಯತ್ನಗಳ ವಿರುದ್ಧ ಪ್ರಾದೇಶಿಕ ಪಕ್ಷಗಳು ಒಂದಾಗುವ ಅವಶ್ಯಕತೆಯಿದೆ’- ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಶಿರೋಮಣಿ ಅಕಾಲಿದಳ ಪ್ರಾದೇಶಿಕ ಪಕ್ಷಗಳ ಮುಖಂಡರ ಭೇಟಿಯನ್ನು ಮುಂದುವರೆಸಿದೆ. ಎನ್‌ಡಿಎ ವಿರುದ್ಧ ರಾಜಕೀಯ ಮೈತ್ರಿಕೂಟ ರಚಿಸುವ ಉದ್ದೇಶದಿಂದ ಅಕಾಲಿದಳದ ನಿಯೋಗ ಹಲವು ಪಕ್ಷಗಳನ್ನು ಸಂಪರ್ಕಿಸುತ್ತಿದೆ.

ತೃಣಮೂಲ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆಗೆ ಮಾತುಕತೆ ನಡೆಸಿದ್ದಾರೆ.

ರಾಜ್ಯಗಳ ಆದಾಯವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ಶಿರೋಮಣಿ ಅಕಾಲಿ ದಳದ ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ, ದೇಶದ ರಾಜಕೀಯವನ್ನು “ಕೇಂದ್ರೀಕರಿಸುವ” ಪ್ರಯತ್ನಗಳ ವಿರುದ್ಧ ಪ್ರಾದೇಶಿಕ ಪಕ್ಷಗಳು ಒಂದಾಗುವ ಅವಶ್ಯಕತೆಯಿದೆ ಎಂದು ಹೇಳಿದರು.

ಶಿಕ್ಷಣ, ಕೃಷಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕ್ಷೇತ್ರಗಳಲ್ಲಿ “ರಾಜ್ಯ ಸರ್ಕಾರಗಳ ಹಕ್ಕುಗಳಲ್ಲಿ” ಕೇಂದ್ರವು ಹಸ್ತಕ್ಷೇಪ ಮಾಡಿದೆ. ಈ ವಿಷಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಒಪ್ಪುತ್ತಾರೆ ಎಂದು  ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ಸುದ್ದಿಗಾರರೊಂದಿಗೆ ಮಾತನಾಡಿದ ಚಂದುಮಾಜ್ರಾ,’ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರ ಪ್ರತಿಭಟನೆಯ ಬಗ್ಗೆ ಅಕಾಲಿ ದಳದ ನಿಲುವನ್ನು ಬೆಂಬಲಿಸಿದ್ದಾರೆ. ಎರಡು ವಾರಗಳ ನಂತರ ದೆಹಲಿಯಲ್ಲಿ ನಡೆಯಲಿರುವ ಸಭೆಗೂ ಬರುವುದಾಗಿ ಅವರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ತಂತ್ರಗಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಸಲುವಾಗಿ ಮುಂದಿನ ವಾರ ದೆಹಲಿಯಲ್ಲಿ ಸಭೆ ಸೇರಲಿದ್ದೇವೆ. ಭವಿಷ್ಯದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ರಾಜಕೀಯ ಪಕ್ಷಗಳು ಸಭೆ ಸೇರುತ್ತಿವೆ. ದೆಹಲಿಯಲ್ಲಿ ನಡೆಯುವ ರಾಜಕೀಯ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಠಾಕ್ರೆ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಎನ್‌ಡಿಎ ವಿರುದ್ಧ ಪೈಪೋಟಿ ನೀಡುವ ಸಲುವಾಗಿ ಅಕಾಲಿ ದಳ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟ ರಚಿಸಲು ಮುಂದಾಗಿದ್ದು, ಇದಕ್ಕಾಗಿ ಬಲ್ವಿಂದರ್ ಸಿಂಗ್ ಭುಂದುರ್, ಪ್ರೇಮ್ ಸಿಂಗ್ ಚಂದುಮಜ್ರಾ ಹಾಗೂ ಸಿಕಂದರ್ ಸಿಂಗ್ ಮಲುಕಾ ಇರುವ ಮೂವರು ಸದಸ್ಯರ ನಿಯೋಗ ರಚಿಸಲಾಗಿದೆ.

ಕೇಂದ್ರದ ಹೊಸ ಕೃಷಿ  ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ತೊರೆದಿದೆ. ನವೆಂಬರ್ 26 ರಿಂದ ಸಾವಿರಾರು ರೈತರು ನವದೆಹಲಿಯ ವಿವಿಧ ಗಡಿಗಳಲ್ಲಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.ಕೇಂದ್ರದ ವಿವಾದಿತ ಕಾನೂನುಗಳ ವಿರುದ್ಧ ಡಿಸೆಂಬರ್ 8 ರಂದು “ಭಾರತ್ ಬಂದ್” ಗೆ ಕರೆ ನೀಡಿದ್ದಾರೆ.

ರೈತರ ಭಾರತ್ ಬಂದ್‌ಗೆ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಡಿಎಂಕೆ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ಆಮ್ ಆದ್ಮಿ ಪಾರ್ಟಿ ಸೇರಿ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.


ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...