Homeಮುಖಪುಟಮೈತ್ರಿ ಕಸರತ್ತು ಕೈ ಬಿಡದ ಶಿವಸೇನೆ: ಸಿಎಂ ಹುದ್ದೆ ಹಂಚಿಕೆಗೆ ಎನ್‌ಸಿಪಿ ಷರತ್ತು.

ಮೈತ್ರಿ ಕಸರತ್ತು ಕೈ ಬಿಡದ ಶಿವಸೇನೆ: ಸಿಎಂ ಹುದ್ದೆ ಹಂಚಿಕೆಗೆ ಎನ್‌ಸಿಪಿ ಷರತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮಧ್ಯೆ ಮುರಿದು ಬಿದ್ದ ಮೈತ್ರಿ, ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನಡುವೆ ಮೂಡದ ಹೊಂದಾಣಿಕೆಯಿಂದಾಗಿ, ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗೆ ಭಾರೀ ಕಸರತ್ತು ನಡೆಸಿದ ಶಿವಸೇನೆಗೆ ಭಾರಿ ಮುಖಭಂಗವಾಗಿದೆ. ಆದರೆ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಇನ್ನೂ ತಮ್ಮ ಪ್ರಯತ್ನವನ್ನು ಕೈಬಿಟ್ಟಿಲ್ಲ.

ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆ ಮತ್ತು ಸಿಎಂ ಗಾದಿ ಅಲಂಕರಿಸಲು ರಣತಂತ್ರ ರೂಪಿಸಿರುವ ಶಿವಸೇನೆ, ಎನ್‌ಸಿಪಿಯ ಶರದ್‌ ಪವಾರ್ ಅವರಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮತ್ತೆ ಮನವಿ ಮಾಡಿದ್ದಾರೆ. ಎನ್‌ಸಿಪಿ ಹಲವು ಷರತ್ತುಗಳನ್ನು ಮುಂದಿರಿಸಿದ್ದು, ತಲಾ ಎರಡೂವರೆ ವರ್ಷ ಸಿಎಂ ಸ್ಥಾನ ಹಂಚಿಕೆ ಬಗ್ಗೆಯೂ ಷರತ್ತು ವಿಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸುಪ್ರೀಂ ತೀರ್ಪು ಬೆನ್ನಲ್ಲೇ ಅನರ್ಹ ಶಾಸಕರ ಜೊತೆಗೆ ಸಭೆಗೆ ಮುಂದಾದ ಸಿಎಂ ಯಡಿಯೂರಪ್ಪ

ಶಿವಸೇನೆ 56 ಸ್ಥಾನಗಳನ್ನು ಎನ್‌ಸಿಪಿ 54 ಸ್ಥಾನಗಳನ್ನು ಗೆದ್ದಿದೆ. ಎರಡೂ ಪಕ್ಷಗಳ ಮಧ್ಯೆ ಕೇವಲ ಎರಡು ಸ್ಥಾನಗಳ ಅಂತರವಿದೆ. ಹೀಗಾಗಿ ಸಿಎಂ ಹುದ್ದೆಗೆ ಎನ್‌ಸಿಪಿ ಬೇಡಿಕೆಯಿಡಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಪಕ್ಷಗಳನ್‌ಉ ಸೇರಿಸಿದರೆ ಒಟ್ಟು 154 ಅಂಕಿ ಬರುತ್ತದೆ. ಸರ್ಕಾರ ರಚನೆಗೆ ಬೇಕಿರುವ ಸ್ಥಾನ 145.

ಇನ್ನು ಶಿವಸೇನೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿರುವ ಪಕ್ಷಗಳ ಜತೆ ಸರ್ಕಾರ ರಚಿಸಲು ಹೊರಟಿದೆ ಇದು ಅಸ್ಥಿರ ಒಕ್ಕೂಟಕ್ಕೆ ಕಾರಣವಾಗಬಹುದು ಎಂಬ ಪ್ರಶ್ನೆಗೆ ಉದ್ಧವ್‌ ಠಾಕ್ರೆ ಉತ್ತರಿಸಿದ್ದಾರೆ. ’ನಾವು ವಿಭಿನ್ನ ಸಿದ್ಧಾಂತಗಳಿಂದ ಬಂದಿದ್ದೇವೆ. ಆದರೆ ನಾವು ಒಟ್ಟಿಗೆ ಸರ್ಕಾರ ರಚಿಸಿ, ಮುನ್ನಡೆಯಲು ಯಾವುದೇ ಸಮಸ್ಯೆಯಿಲ್ಲ. ನಾವು ಒಂದಾಗಿ ಮುಂದುವರೆಯಬಹುದು. ಈಗ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜತೆ ಹೋಗುವ ಸಮಯ ಬಂದಿದೆ. ಅವರೊಂದಿಗೆ ನಾವು ಹೆಚ್ಚಿನ ಮಾತುಕತೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.

ಇನ್ನು ಶಿವಸೇನೆ ನೀಡಿದ ಆಫರ್‌ ಹಾಗೂ ಮನವಿ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಿರ್ಧಾರ ತೆಗೆದುಕೊಳ್ಳುವಲ್ಲಿ ತಡ ಮಾಡಿದ್ದಾರೆ. ಭಿನ್ನ ಸಿದ್ಧಾಂತ ಹೊಂದಿರುವ ಶಿವಸೇನೆಯೊಂದಿಗೆ ಕೈ ಜೋಡಿಸುವುದು ಅಷ್ಟು ಸುಲಭವಲ್ಲ ಎಂಬುದನ್ನು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...