Homeಮುಖಪುಟಮೈತ್ರಿ ಕಸರತ್ತು ಕೈ ಬಿಡದ ಶಿವಸೇನೆ: ಸಿಎಂ ಹುದ್ದೆ ಹಂಚಿಕೆಗೆ ಎನ್‌ಸಿಪಿ ಷರತ್ತು.

ಮೈತ್ರಿ ಕಸರತ್ತು ಕೈ ಬಿಡದ ಶಿವಸೇನೆ: ಸಿಎಂ ಹುದ್ದೆ ಹಂಚಿಕೆಗೆ ಎನ್‌ಸಿಪಿ ಷರತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮಧ್ಯೆ ಮುರಿದು ಬಿದ್ದ ಮೈತ್ರಿ, ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನಡುವೆ ಮೂಡದ ಹೊಂದಾಣಿಕೆಯಿಂದಾಗಿ, ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗೆ ಭಾರೀ ಕಸರತ್ತು ನಡೆಸಿದ ಶಿವಸೇನೆಗೆ ಭಾರಿ ಮುಖಭಂಗವಾಗಿದೆ. ಆದರೆ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಇನ್ನೂ ತಮ್ಮ ಪ್ರಯತ್ನವನ್ನು ಕೈಬಿಟ್ಟಿಲ್ಲ.

ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆ ಮತ್ತು ಸಿಎಂ ಗಾದಿ ಅಲಂಕರಿಸಲು ರಣತಂತ್ರ ರೂಪಿಸಿರುವ ಶಿವಸೇನೆ, ಎನ್‌ಸಿಪಿಯ ಶರದ್‌ ಪವಾರ್ ಅವರಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮತ್ತೆ ಮನವಿ ಮಾಡಿದ್ದಾರೆ. ಎನ್‌ಸಿಪಿ ಹಲವು ಷರತ್ತುಗಳನ್ನು ಮುಂದಿರಿಸಿದ್ದು, ತಲಾ ಎರಡೂವರೆ ವರ್ಷ ಸಿಎಂ ಸ್ಥಾನ ಹಂಚಿಕೆ ಬಗ್ಗೆಯೂ ಷರತ್ತು ವಿಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸುಪ್ರೀಂ ತೀರ್ಪು ಬೆನ್ನಲ್ಲೇ ಅನರ್ಹ ಶಾಸಕರ ಜೊತೆಗೆ ಸಭೆಗೆ ಮುಂದಾದ ಸಿಎಂ ಯಡಿಯೂರಪ್ಪ

ಶಿವಸೇನೆ 56 ಸ್ಥಾನಗಳನ್ನು ಎನ್‌ಸಿಪಿ 54 ಸ್ಥಾನಗಳನ್ನು ಗೆದ್ದಿದೆ. ಎರಡೂ ಪಕ್ಷಗಳ ಮಧ್ಯೆ ಕೇವಲ ಎರಡು ಸ್ಥಾನಗಳ ಅಂತರವಿದೆ. ಹೀಗಾಗಿ ಸಿಎಂ ಹುದ್ದೆಗೆ ಎನ್‌ಸಿಪಿ ಬೇಡಿಕೆಯಿಡಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಪಕ್ಷಗಳನ್‌ಉ ಸೇರಿಸಿದರೆ ಒಟ್ಟು 154 ಅಂಕಿ ಬರುತ್ತದೆ. ಸರ್ಕಾರ ರಚನೆಗೆ ಬೇಕಿರುವ ಸ್ಥಾನ 145.

ಇನ್ನು ಶಿವಸೇನೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿರುವ ಪಕ್ಷಗಳ ಜತೆ ಸರ್ಕಾರ ರಚಿಸಲು ಹೊರಟಿದೆ ಇದು ಅಸ್ಥಿರ ಒಕ್ಕೂಟಕ್ಕೆ ಕಾರಣವಾಗಬಹುದು ಎಂಬ ಪ್ರಶ್ನೆಗೆ ಉದ್ಧವ್‌ ಠಾಕ್ರೆ ಉತ್ತರಿಸಿದ್ದಾರೆ. ’ನಾವು ವಿಭಿನ್ನ ಸಿದ್ಧಾಂತಗಳಿಂದ ಬಂದಿದ್ದೇವೆ. ಆದರೆ ನಾವು ಒಟ್ಟಿಗೆ ಸರ್ಕಾರ ರಚಿಸಿ, ಮುನ್ನಡೆಯಲು ಯಾವುದೇ ಸಮಸ್ಯೆಯಿಲ್ಲ. ನಾವು ಒಂದಾಗಿ ಮುಂದುವರೆಯಬಹುದು. ಈಗ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜತೆ ಹೋಗುವ ಸಮಯ ಬಂದಿದೆ. ಅವರೊಂದಿಗೆ ನಾವು ಹೆಚ್ಚಿನ ಮಾತುಕತೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.

ಇನ್ನು ಶಿವಸೇನೆ ನೀಡಿದ ಆಫರ್‌ ಹಾಗೂ ಮನವಿ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಿರ್ಧಾರ ತೆಗೆದುಕೊಳ್ಳುವಲ್ಲಿ ತಡ ಮಾಡಿದ್ದಾರೆ. ಭಿನ್ನ ಸಿದ್ಧಾಂತ ಹೊಂದಿರುವ ಶಿವಸೇನೆಯೊಂದಿಗೆ ಕೈ ಜೋಡಿಸುವುದು ಅಷ್ಟು ಸುಲಭವಲ್ಲ ಎಂಬುದನ್ನು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...