Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಅಧಿಕಾರ ಹಗ್ಗ-ಜಗ್ಗಾಟ ಮಾತ್ರ ನಿಂತಿಲ್ಲ. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಒಳ ಬೇಗುದಿ, ಸಿಎಂ ಕುರ್ಚಿಗಾಗಿ ಇರುಸುಮುರಿಸು ನಡೆಯುತ್ತಲೇ ಇದೆ. ಜಪ್ಪಯ್ಯ ಅಂದ್ರೂ ಶಿವಸೇನೆಗೆ ಸಿಎಂ ಗಾದಿ ಬಿಟ್ಟು ಕೊಡುವುದಿಲ್ಲ ಎನ್ನುತ್ತಿದೆ ಬಿಜೆಪಿ. ಇತ್ತ ಶಿವಸೇನೆ ಕೂಡ ಚುನಾವಣಾ ಪೂರ್ವ ಮೈತ್ರಿಗೆ ಬಿಜೆಪಿ ಬದ್ಧವಾಗಿರಬೇಕು. 50:50 ಸೂತ್ರದ ಪ್ರಕಾರ, ಎರಡೂವರೆ ವರ್ಷ ಸಿಎಂ ಹುದ್ದೆಯನ್ನು ಶಿವಸೇನೆಗೆ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ.

ಈ ಮಧ್ಯೆ ಶಿವಸೇನೆಯನ್ನು ಬದಿಗಿರಿಸಿ, ಬಿಜೆಪಿ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಇತ್ತ ಸೂತ್ರವಿಲ್ಲದ ಪಟದಂತೆ ಶಿವಸೇನೆ, ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ರಣತಂತ್ರ ರೂಪಿಸುತ್ತಿದೆ.

ಯಾರು ಏನೇ ತಂತ್ರ ರೂಪಿಸಿದರೂ ಈಗ ಪಕ್ಷಗಳಿಗೆ ಇರುವ ಹಾದಿ ಒಂದೇ. ಅದು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು. ಇದರ ಹೊರತು ಬಿಜೆಪಿ ಮತ್ತು ಶಿವಸೇನೆಗೆ ಯಾವುದೇ ಹಾದಿಯಿಲ್ಲ. ಅದರಂತೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಲು ಮುಂದಾಗಿರುವ ಶಿವಸೇನೆ, ಎನ್ ಸಿ ಪಿ ಮನಸ್ಸು ಮಾಡಿದರೆ ಸರ್ಕಾರ ರಚನೆ ಮಾಡಬಹುದು ಎಂಬ ನಿರೀಕ್ಷಿತ ಹೇಳಿಕೆ ನೀಡಿದೆ. ಭಿನ್ನ ಸಿದ್ಧಾಂತ, ಭಿನ್ನ ನೈತಿಕ ನೆಲೆಗಟ್ಟು ಹೊಂದಿರುವ ಎರಡೂ ಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಮಣಿಸುತ್ತವಾ..? ಇದಕ್ಕೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಳ್ಳುತ್ತಾರಾ..? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಯಾಕಂದ್ರೆ ಈಗಾಗಲೇ ಶಿವಸೇನೆ ವಕ್ತಾರ ಸಂಜಯ್ ರಾವತ್, ಎನ್ ಸಿ ಪಿ ಜತೆಗಿನ ಮೈತ್ರಿ ಬಗ್ಗೆ ವಿಶ್ವಾಸದ ಮಾತನಾಡಿದ್ದಾರೆ. ಆದರೆ ಎನ್ ಸಿ ಪಿ ಕಡೆಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಸುತ್ತಿರುವ ಶೀತಲ ಸಮರವನ್ನು ಸುಮ್ಮನೇ ನೋಡುತ್ತಿದೆ. ಇನ್ನು ಈ ಮೈತ್ರಿಗೆ ಕಾಂಗ್ರೆಸ್ ಮನವೊಲಿಸಲು ಎನ್‌ಸಿಪಿ ಮುಂದಾಗಿದೆ. ಅದಕ್ಕಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿ, ಮೈತ್ರಿಯ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗೆ ಕರೆ ಬಂದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ನಾವು ಮನಸ್ಸು ಮಾಡಿದರೆ ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನು ಎನ್ ಸಿ ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆ ನೀಡುತ್ತಿರುವ ಆಹ್ವಾನವನ್ನು ತಳ್ಳಿ ಹಾಕದೇ, ಸರ್ಕಾರ ರಚಿಸುವ ಮನಸ್ಸು ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ಇದೊಂದು ಸೂತ್ರ ಅನುಸರಿಸುವುದು ಸೂಕ್ತ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರು ಶಿವಸೇನೆ ಜತೆಗೆ ಯಾವುದೇ ರೀತಿಯ ಸಂಬಂಧ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ಮಾಜಿ ಸಿಎಂ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಅವರು ಶಿವಸೇನೆ ತಾನಾಗೇ, ಮೈತ್ರಿಗೆ ಆಹ್ವಾನ ನೀಡಿದರೆ ಒಪ್ಪಿಕೊಳ್ಳುವುದು ಸೂಕ್ತ ಎಂದಿದ್ದಾರೆ. ಇತ್ತ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮಾ, ಶಿವಸೇನೆ ಜತೆಗಿನ ಮೈತ್ರಿ ಮಾತು ಮತ್ತು ಶಿವಸೇನೆಗೆ ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಾಟಕವಾಡುತ್ತಿವೆ. ಎರಡೂ ಪಕ್ಷಗಳ ನಾಟಕದಿಂದ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ಸೂಚಿಸುವುದು ಬೇಡ ಎಂದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಗುದ್ದಾಟ, ಇತರೆ ಪಕ್ಷಗಳಿಗೆ ಯಾವ ರೀತಿ ಅನುಕೂಲವಾಗಲಿದೆ. ಕಾಂಗ್ರೆಸ್ ಮತ್ತು ಎನ್ ಸಿ ಪಿ ಪಕ್ಷದೊಳಗಿನ ನಾಯಕರ ಪರ-ವಿರೋಧದ ಮಾತುಗಳ ನಡುವೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ..? ಎನ್ನುವುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...