Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಅಧಿಕಾರ ಹಗ್ಗ-ಜಗ್ಗಾಟ ಮಾತ್ರ ನಿಂತಿಲ್ಲ. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಒಳ ಬೇಗುದಿ, ಸಿಎಂ ಕುರ್ಚಿಗಾಗಿ ಇರುಸುಮುರಿಸು ನಡೆಯುತ್ತಲೇ ಇದೆ. ಜಪ್ಪಯ್ಯ ಅಂದ್ರೂ ಶಿವಸೇನೆಗೆ ಸಿಎಂ ಗಾದಿ ಬಿಟ್ಟು ಕೊಡುವುದಿಲ್ಲ ಎನ್ನುತ್ತಿದೆ ಬಿಜೆಪಿ. ಇತ್ತ ಶಿವಸೇನೆ ಕೂಡ ಚುನಾವಣಾ ಪೂರ್ವ ಮೈತ್ರಿಗೆ ಬಿಜೆಪಿ ಬದ್ಧವಾಗಿರಬೇಕು. 50:50 ಸೂತ್ರದ ಪ್ರಕಾರ, ಎರಡೂವರೆ ವರ್ಷ ಸಿಎಂ ಹುದ್ದೆಯನ್ನು ಶಿವಸೇನೆಗೆ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ.

ಈ ಮಧ್ಯೆ ಶಿವಸೇನೆಯನ್ನು ಬದಿಗಿರಿಸಿ, ಬಿಜೆಪಿ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಇತ್ತ ಸೂತ್ರವಿಲ್ಲದ ಪಟದಂತೆ ಶಿವಸೇನೆ, ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ರಣತಂತ್ರ ರೂಪಿಸುತ್ತಿದೆ.

ಯಾರು ಏನೇ ತಂತ್ರ ರೂಪಿಸಿದರೂ ಈಗ ಪಕ್ಷಗಳಿಗೆ ಇರುವ ಹಾದಿ ಒಂದೇ. ಅದು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು. ಇದರ ಹೊರತು ಬಿಜೆಪಿ ಮತ್ತು ಶಿವಸೇನೆಗೆ ಯಾವುದೇ ಹಾದಿಯಿಲ್ಲ. ಅದರಂತೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಲು ಮುಂದಾಗಿರುವ ಶಿವಸೇನೆ, ಎನ್ ಸಿ ಪಿ ಮನಸ್ಸು ಮಾಡಿದರೆ ಸರ್ಕಾರ ರಚನೆ ಮಾಡಬಹುದು ಎಂಬ ನಿರೀಕ್ಷಿತ ಹೇಳಿಕೆ ನೀಡಿದೆ. ಭಿನ್ನ ಸಿದ್ಧಾಂತ, ಭಿನ್ನ ನೈತಿಕ ನೆಲೆಗಟ್ಟು ಹೊಂದಿರುವ ಎರಡೂ ಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಮಣಿಸುತ್ತವಾ..? ಇದಕ್ಕೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಳ್ಳುತ್ತಾರಾ..? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಯಾಕಂದ್ರೆ ಈಗಾಗಲೇ ಶಿವಸೇನೆ ವಕ್ತಾರ ಸಂಜಯ್ ರಾವತ್, ಎನ್ ಸಿ ಪಿ ಜತೆಗಿನ ಮೈತ್ರಿ ಬಗ್ಗೆ ವಿಶ್ವಾಸದ ಮಾತನಾಡಿದ್ದಾರೆ. ಆದರೆ ಎನ್ ಸಿ ಪಿ ಕಡೆಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಸುತ್ತಿರುವ ಶೀತಲ ಸಮರವನ್ನು ಸುಮ್ಮನೇ ನೋಡುತ್ತಿದೆ. ಇನ್ನು ಈ ಮೈತ್ರಿಗೆ ಕಾಂಗ್ರೆಸ್ ಮನವೊಲಿಸಲು ಎನ್‌ಸಿಪಿ ಮುಂದಾಗಿದೆ. ಅದಕ್ಕಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿ, ಮೈತ್ರಿಯ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗೆ ಕರೆ ಬಂದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ನಾವು ಮನಸ್ಸು ಮಾಡಿದರೆ ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನು ಎನ್ ಸಿ ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆ ನೀಡುತ್ತಿರುವ ಆಹ್ವಾನವನ್ನು ತಳ್ಳಿ ಹಾಕದೇ, ಸರ್ಕಾರ ರಚಿಸುವ ಮನಸ್ಸು ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ಇದೊಂದು ಸೂತ್ರ ಅನುಸರಿಸುವುದು ಸೂಕ್ತ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರು ಶಿವಸೇನೆ ಜತೆಗೆ ಯಾವುದೇ ರೀತಿಯ ಸಂಬಂಧ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ಮಾಜಿ ಸಿಎಂ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಅವರು ಶಿವಸೇನೆ ತಾನಾಗೇ, ಮೈತ್ರಿಗೆ ಆಹ್ವಾನ ನೀಡಿದರೆ ಒಪ್ಪಿಕೊಳ್ಳುವುದು ಸೂಕ್ತ ಎಂದಿದ್ದಾರೆ. ಇತ್ತ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮಾ, ಶಿವಸೇನೆ ಜತೆಗಿನ ಮೈತ್ರಿ ಮಾತು ಮತ್ತು ಶಿವಸೇನೆಗೆ ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಾಟಕವಾಡುತ್ತಿವೆ. ಎರಡೂ ಪಕ್ಷಗಳ ನಾಟಕದಿಂದ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ಸೂಚಿಸುವುದು ಬೇಡ ಎಂದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಗುದ್ದಾಟ, ಇತರೆ ಪಕ್ಷಗಳಿಗೆ ಯಾವ ರೀತಿ ಅನುಕೂಲವಾಗಲಿದೆ. ಕಾಂಗ್ರೆಸ್ ಮತ್ತು ಎನ್ ಸಿ ಪಿ ಪಕ್ಷದೊಳಗಿನ ನಾಯಕರ ಪರ-ವಿರೋಧದ ಮಾತುಗಳ ನಡುವೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ..? ಎನ್ನುವುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...