Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಅಧಿಕಾರ ಹಗ್ಗ-ಜಗ್ಗಾಟ ಮಾತ್ರ ನಿಂತಿಲ್ಲ. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಒಳ ಬೇಗುದಿ, ಸಿಎಂ ಕುರ್ಚಿಗಾಗಿ ಇರುಸುಮುರಿಸು ನಡೆಯುತ್ತಲೇ ಇದೆ. ಜಪ್ಪಯ್ಯ ಅಂದ್ರೂ ಶಿವಸೇನೆಗೆ ಸಿಎಂ ಗಾದಿ ಬಿಟ್ಟು ಕೊಡುವುದಿಲ್ಲ ಎನ್ನುತ್ತಿದೆ ಬಿಜೆಪಿ. ಇತ್ತ ಶಿವಸೇನೆ ಕೂಡ ಚುನಾವಣಾ ಪೂರ್ವ ಮೈತ್ರಿಗೆ ಬಿಜೆಪಿ ಬದ್ಧವಾಗಿರಬೇಕು. 50:50 ಸೂತ್ರದ ಪ್ರಕಾರ, ಎರಡೂವರೆ ವರ್ಷ ಸಿಎಂ ಹುದ್ದೆಯನ್ನು ಶಿವಸೇನೆಗೆ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ.

ಈ ಮಧ್ಯೆ ಶಿವಸೇನೆಯನ್ನು ಬದಿಗಿರಿಸಿ, ಬಿಜೆಪಿ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಇತ್ತ ಸೂತ್ರವಿಲ್ಲದ ಪಟದಂತೆ ಶಿವಸೇನೆ, ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ರಣತಂತ್ರ ರೂಪಿಸುತ್ತಿದೆ.

ಯಾರು ಏನೇ ತಂತ್ರ ರೂಪಿಸಿದರೂ ಈಗ ಪಕ್ಷಗಳಿಗೆ ಇರುವ ಹಾದಿ ಒಂದೇ. ಅದು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು. ಇದರ ಹೊರತು ಬಿಜೆಪಿ ಮತ್ತು ಶಿವಸೇನೆಗೆ ಯಾವುದೇ ಹಾದಿಯಿಲ್ಲ. ಅದರಂತೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಲು ಮುಂದಾಗಿರುವ ಶಿವಸೇನೆ, ಎನ್ ಸಿ ಪಿ ಮನಸ್ಸು ಮಾಡಿದರೆ ಸರ್ಕಾರ ರಚನೆ ಮಾಡಬಹುದು ಎಂಬ ನಿರೀಕ್ಷಿತ ಹೇಳಿಕೆ ನೀಡಿದೆ. ಭಿನ್ನ ಸಿದ್ಧಾಂತ, ಭಿನ್ನ ನೈತಿಕ ನೆಲೆಗಟ್ಟು ಹೊಂದಿರುವ ಎರಡೂ ಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಮಣಿಸುತ್ತವಾ..? ಇದಕ್ಕೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಳ್ಳುತ್ತಾರಾ..? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಯಾಕಂದ್ರೆ ಈಗಾಗಲೇ ಶಿವಸೇನೆ ವಕ್ತಾರ ಸಂಜಯ್ ರಾವತ್, ಎನ್ ಸಿ ಪಿ ಜತೆಗಿನ ಮೈತ್ರಿ ಬಗ್ಗೆ ವಿಶ್ವಾಸದ ಮಾತನಾಡಿದ್ದಾರೆ. ಆದರೆ ಎನ್ ಸಿ ಪಿ ಕಡೆಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಸುತ್ತಿರುವ ಶೀತಲ ಸಮರವನ್ನು ಸುಮ್ಮನೇ ನೋಡುತ್ತಿದೆ. ಇನ್ನು ಈ ಮೈತ್ರಿಗೆ ಕಾಂಗ್ರೆಸ್ ಮನವೊಲಿಸಲು ಎನ್‌ಸಿಪಿ ಮುಂದಾಗಿದೆ. ಅದಕ್ಕಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿ, ಮೈತ್ರಿಯ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗೆ ಕರೆ ಬಂದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ನಾವು ಮನಸ್ಸು ಮಾಡಿದರೆ ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನು ಎನ್ ಸಿ ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆ ನೀಡುತ್ತಿರುವ ಆಹ್ವಾನವನ್ನು ತಳ್ಳಿ ಹಾಕದೇ, ಸರ್ಕಾರ ರಚಿಸುವ ಮನಸ್ಸು ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ಇದೊಂದು ಸೂತ್ರ ಅನುಸರಿಸುವುದು ಸೂಕ್ತ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರು ಶಿವಸೇನೆ ಜತೆಗೆ ಯಾವುದೇ ರೀತಿಯ ಸಂಬಂಧ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ಮಾಜಿ ಸಿಎಂ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಅವರು ಶಿವಸೇನೆ ತಾನಾಗೇ, ಮೈತ್ರಿಗೆ ಆಹ್ವಾನ ನೀಡಿದರೆ ಒಪ್ಪಿಕೊಳ್ಳುವುದು ಸೂಕ್ತ ಎಂದಿದ್ದಾರೆ. ಇತ್ತ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮಾ, ಶಿವಸೇನೆ ಜತೆಗಿನ ಮೈತ್ರಿ ಮಾತು ಮತ್ತು ಶಿವಸೇನೆಗೆ ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಾಟಕವಾಡುತ್ತಿವೆ. ಎರಡೂ ಪಕ್ಷಗಳ ನಾಟಕದಿಂದ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ಸೂಚಿಸುವುದು ಬೇಡ ಎಂದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಗುದ್ದಾಟ, ಇತರೆ ಪಕ್ಷಗಳಿಗೆ ಯಾವ ರೀತಿ ಅನುಕೂಲವಾಗಲಿದೆ. ಕಾಂಗ್ರೆಸ್ ಮತ್ತು ಎನ್ ಸಿ ಪಿ ಪಕ್ಷದೊಳಗಿನ ನಾಯಕರ ಪರ-ವಿರೋಧದ ಮಾತುಗಳ ನಡುವೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ..? ಎನ್ನುವುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...