Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಅಧಿಕಾರ ಹಗ್ಗ-ಜಗ್ಗಾಟ ಮಾತ್ರ ನಿಂತಿಲ್ಲ. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಒಳ ಬೇಗುದಿ, ಸಿಎಂ ಕುರ್ಚಿಗಾಗಿ ಇರುಸುಮುರಿಸು ನಡೆಯುತ್ತಲೇ ಇದೆ. ಜಪ್ಪಯ್ಯ ಅಂದ್ರೂ ಶಿವಸೇನೆಗೆ ಸಿಎಂ ಗಾದಿ ಬಿಟ್ಟು ಕೊಡುವುದಿಲ್ಲ ಎನ್ನುತ್ತಿದೆ ಬಿಜೆಪಿ. ಇತ್ತ ಶಿವಸೇನೆ ಕೂಡ ಚುನಾವಣಾ ಪೂರ್ವ ಮೈತ್ರಿಗೆ ಬಿಜೆಪಿ ಬದ್ಧವಾಗಿರಬೇಕು. 50:50 ಸೂತ್ರದ ಪ್ರಕಾರ, ಎರಡೂವರೆ ವರ್ಷ ಸಿಎಂ ಹುದ್ದೆಯನ್ನು ಶಿವಸೇನೆಗೆ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ.

ಈ ಮಧ್ಯೆ ಶಿವಸೇನೆಯನ್ನು ಬದಿಗಿರಿಸಿ, ಬಿಜೆಪಿ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಇತ್ತ ಸೂತ್ರವಿಲ್ಲದ ಪಟದಂತೆ ಶಿವಸೇನೆ, ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ರಣತಂತ್ರ ರೂಪಿಸುತ್ತಿದೆ.

ಯಾರು ಏನೇ ತಂತ್ರ ರೂಪಿಸಿದರೂ ಈಗ ಪಕ್ಷಗಳಿಗೆ ಇರುವ ಹಾದಿ ಒಂದೇ. ಅದು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು. ಇದರ ಹೊರತು ಬಿಜೆಪಿ ಮತ್ತು ಶಿವಸೇನೆಗೆ ಯಾವುದೇ ಹಾದಿಯಿಲ್ಲ. ಅದರಂತೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಲು ಮುಂದಾಗಿರುವ ಶಿವಸೇನೆ, ಎನ್ ಸಿ ಪಿ ಮನಸ್ಸು ಮಾಡಿದರೆ ಸರ್ಕಾರ ರಚನೆ ಮಾಡಬಹುದು ಎಂಬ ನಿರೀಕ್ಷಿತ ಹೇಳಿಕೆ ನೀಡಿದೆ. ಭಿನ್ನ ಸಿದ್ಧಾಂತ, ಭಿನ್ನ ನೈತಿಕ ನೆಲೆಗಟ್ಟು ಹೊಂದಿರುವ ಎರಡೂ ಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಮಣಿಸುತ್ತವಾ..? ಇದಕ್ಕೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಳ್ಳುತ್ತಾರಾ..? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಯಾಕಂದ್ರೆ ಈಗಾಗಲೇ ಶಿವಸೇನೆ ವಕ್ತಾರ ಸಂಜಯ್ ರಾವತ್, ಎನ್ ಸಿ ಪಿ ಜತೆಗಿನ ಮೈತ್ರಿ ಬಗ್ಗೆ ವಿಶ್ವಾಸದ ಮಾತನಾಡಿದ್ದಾರೆ. ಆದರೆ ಎನ್ ಸಿ ಪಿ ಕಡೆಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಸುತ್ತಿರುವ ಶೀತಲ ಸಮರವನ್ನು ಸುಮ್ಮನೇ ನೋಡುತ್ತಿದೆ. ಇನ್ನು ಈ ಮೈತ್ರಿಗೆ ಕಾಂಗ್ರೆಸ್ ಮನವೊಲಿಸಲು ಎನ್‌ಸಿಪಿ ಮುಂದಾಗಿದೆ. ಅದಕ್ಕಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿ, ಮೈತ್ರಿಯ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗೆ ಕರೆ ಬಂದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ನಾವು ಮನಸ್ಸು ಮಾಡಿದರೆ ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನು ಎನ್ ಸಿ ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆ ನೀಡುತ್ತಿರುವ ಆಹ್ವಾನವನ್ನು ತಳ್ಳಿ ಹಾಕದೇ, ಸರ್ಕಾರ ರಚಿಸುವ ಮನಸ್ಸು ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ಇದೊಂದು ಸೂತ್ರ ಅನುಸರಿಸುವುದು ಸೂಕ್ತ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರು ಶಿವಸೇನೆ ಜತೆಗೆ ಯಾವುದೇ ರೀತಿಯ ಸಂಬಂಧ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ಮಾಜಿ ಸಿಎಂ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಅವರು ಶಿವಸೇನೆ ತಾನಾಗೇ, ಮೈತ್ರಿಗೆ ಆಹ್ವಾನ ನೀಡಿದರೆ ಒಪ್ಪಿಕೊಳ್ಳುವುದು ಸೂಕ್ತ ಎಂದಿದ್ದಾರೆ. ಇತ್ತ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮಾ, ಶಿವಸೇನೆ ಜತೆಗಿನ ಮೈತ್ರಿ ಮಾತು ಮತ್ತು ಶಿವಸೇನೆಗೆ ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಾಟಕವಾಡುತ್ತಿವೆ. ಎರಡೂ ಪಕ್ಷಗಳ ನಾಟಕದಿಂದ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ಸೂಚಿಸುವುದು ಬೇಡ ಎಂದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಗುದ್ದಾಟ, ಇತರೆ ಪಕ್ಷಗಳಿಗೆ ಯಾವ ರೀತಿ ಅನುಕೂಲವಾಗಲಿದೆ. ಕಾಂಗ್ರೆಸ್ ಮತ್ತು ಎನ್ ಸಿ ಪಿ ಪಕ್ಷದೊಳಗಿನ ನಾಯಕರ ಪರ-ವಿರೋಧದ ಮಾತುಗಳ ನಡುವೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ..? ಎನ್ನುವುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...