Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಅಧಿಕಾರ ಹಗ್ಗ-ಜಗ್ಗಾಟ ಮಾತ್ರ ನಿಂತಿಲ್ಲ. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಒಳ ಬೇಗುದಿ, ಸಿಎಂ ಕುರ್ಚಿಗಾಗಿ ಇರುಸುಮುರಿಸು ನಡೆಯುತ್ತಲೇ ಇದೆ. ಜಪ್ಪಯ್ಯ ಅಂದ್ರೂ ಶಿವಸೇನೆಗೆ ಸಿಎಂ ಗಾದಿ ಬಿಟ್ಟು ಕೊಡುವುದಿಲ್ಲ ಎನ್ನುತ್ತಿದೆ ಬಿಜೆಪಿ. ಇತ್ತ ಶಿವಸೇನೆ ಕೂಡ ಚುನಾವಣಾ ಪೂರ್ವ ಮೈತ್ರಿಗೆ ಬಿಜೆಪಿ ಬದ್ಧವಾಗಿರಬೇಕು. 50:50 ಸೂತ್ರದ ಪ್ರಕಾರ, ಎರಡೂವರೆ ವರ್ಷ ಸಿಎಂ ಹುದ್ದೆಯನ್ನು ಶಿವಸೇನೆಗೆ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ.

ಈ ಮಧ್ಯೆ ಶಿವಸೇನೆಯನ್ನು ಬದಿಗಿರಿಸಿ, ಬಿಜೆಪಿ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಇತ್ತ ಸೂತ್ರವಿಲ್ಲದ ಪಟದಂತೆ ಶಿವಸೇನೆ, ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ರಣತಂತ್ರ ರೂಪಿಸುತ್ತಿದೆ.

ಯಾರು ಏನೇ ತಂತ್ರ ರೂಪಿಸಿದರೂ ಈಗ ಪಕ್ಷಗಳಿಗೆ ಇರುವ ಹಾದಿ ಒಂದೇ. ಅದು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು. ಇದರ ಹೊರತು ಬಿಜೆಪಿ ಮತ್ತು ಶಿವಸೇನೆಗೆ ಯಾವುದೇ ಹಾದಿಯಿಲ್ಲ. ಅದರಂತೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಲು ಮುಂದಾಗಿರುವ ಶಿವಸೇನೆ, ಎನ್ ಸಿ ಪಿ ಮನಸ್ಸು ಮಾಡಿದರೆ ಸರ್ಕಾರ ರಚನೆ ಮಾಡಬಹುದು ಎಂಬ ನಿರೀಕ್ಷಿತ ಹೇಳಿಕೆ ನೀಡಿದೆ. ಭಿನ್ನ ಸಿದ್ಧಾಂತ, ಭಿನ್ನ ನೈತಿಕ ನೆಲೆಗಟ್ಟು ಹೊಂದಿರುವ ಎರಡೂ ಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಮಣಿಸುತ್ತವಾ..? ಇದಕ್ಕೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಳ್ಳುತ್ತಾರಾ..? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಯಾಕಂದ್ರೆ ಈಗಾಗಲೇ ಶಿವಸೇನೆ ವಕ್ತಾರ ಸಂಜಯ್ ರಾವತ್, ಎನ್ ಸಿ ಪಿ ಜತೆಗಿನ ಮೈತ್ರಿ ಬಗ್ಗೆ ವಿಶ್ವಾಸದ ಮಾತನಾಡಿದ್ದಾರೆ. ಆದರೆ ಎನ್ ಸಿ ಪಿ ಕಡೆಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಸುತ್ತಿರುವ ಶೀತಲ ಸಮರವನ್ನು ಸುಮ್ಮನೇ ನೋಡುತ್ತಿದೆ. ಇನ್ನು ಈ ಮೈತ್ರಿಗೆ ಕಾಂಗ್ರೆಸ್ ಮನವೊಲಿಸಲು ಎನ್‌ಸಿಪಿ ಮುಂದಾಗಿದೆ. ಅದಕ್ಕಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿ, ಮೈತ್ರಿಯ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗೆ ಕರೆ ಬಂದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ನಾವು ಮನಸ್ಸು ಮಾಡಿದರೆ ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನು ಎನ್ ಸಿ ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆ ನೀಡುತ್ತಿರುವ ಆಹ್ವಾನವನ್ನು ತಳ್ಳಿ ಹಾಕದೇ, ಸರ್ಕಾರ ರಚಿಸುವ ಮನಸ್ಸು ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ಇದೊಂದು ಸೂತ್ರ ಅನುಸರಿಸುವುದು ಸೂಕ್ತ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರು ಶಿವಸೇನೆ ಜತೆಗೆ ಯಾವುದೇ ರೀತಿಯ ಸಂಬಂಧ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ಮಾಜಿ ಸಿಎಂ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಅವರು ಶಿವಸೇನೆ ತಾನಾಗೇ, ಮೈತ್ರಿಗೆ ಆಹ್ವಾನ ನೀಡಿದರೆ ಒಪ್ಪಿಕೊಳ್ಳುವುದು ಸೂಕ್ತ ಎಂದಿದ್ದಾರೆ. ಇತ್ತ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮಾ, ಶಿವಸೇನೆ ಜತೆಗಿನ ಮೈತ್ರಿ ಮಾತು ಮತ್ತು ಶಿವಸೇನೆಗೆ ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಾಟಕವಾಡುತ್ತಿವೆ. ಎರಡೂ ಪಕ್ಷಗಳ ನಾಟಕದಿಂದ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ಸೂಚಿಸುವುದು ಬೇಡ ಎಂದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಗುದ್ದಾಟ, ಇತರೆ ಪಕ್ಷಗಳಿಗೆ ಯಾವ ರೀತಿ ಅನುಕೂಲವಾಗಲಿದೆ. ಕಾಂಗ್ರೆಸ್ ಮತ್ತು ಎನ್ ಸಿ ಪಿ ಪಕ್ಷದೊಳಗಿನ ನಾಯಕರ ಪರ-ವಿರೋಧದ ಮಾತುಗಳ ನಡುವೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ..? ಎನ್ನುವುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...