Homeಮುಖಪುಟಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಶಿವಸೇನೆ ದಲಾಲ್ ಅವರ ಕ್ರಮಗಳನ್ನು "ದೇಶಭಕ್ತಿ ತೋರಿಸುವ ವಿಧಾನ" ಎನ್ನುವ ಮೂಲಕ ಸಮರ್ಥಿಸಿಕೊಂಡಿದೆ. ದಲಾಲ್ ತನ್ನನ್ನು "ಗೌ ರಕ್ಷಕ್" ಮತ್ತು "ರಾಷ್ಟ್ರೀಯವಾದಿ" ಎಂದು ಕರೆದುಕೊಳ್ಳುತ್ತಾನೆ.

- Advertisement -
- Advertisement -

ದೆಹಲಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜೆಎನ್‌ಯು ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಗುಂಡು ಹಾರಿಸಲು ಯತ್ನಿಸಿದ ಆರೋಪ ಹೊತ್ತಿದ್ದ ನವೀನ್ ದಲಾಲ್‌ ಈಗ ಹರಿಯಾಣದ ಬಹದ್ದೂರ್‌ಗ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿದ್ದಾರೆ. ಅಕ್ಟೋಬರ್ 21 ರಂದು ಹರಿಯಾಣ ಚುನಾವಣೆ ನಡೆಯಲಿದೆ.

2018ರ ಆಗಸ್ಟ್‌ನಲ್ಲಿ, ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಜೆಎನ್‌ಯು ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ಮೇಲೆ ನವೀನ್ ದಲಾಲ್ ಮತ್ತು ದರ್ವೇಶ್ ಶಹಪುರ್ ಅವರು ಗುಂಡು ಹಾರಿಸಿದ್ದರು. ಸಾಕ್ಷಿಗಳ ಪ್ರಕಾರ ಆರೋಪಿಯ ಬಂದೂಕು ಜಾಮ್ ಆಗಿದ್ದರಿಂದ ಎರಡು ಗುಂಡುಗಳನ್ನು ಹಾರಿಸಿದ್ದರೂ ಕೂಡ ಖಾಲಿದ್ ಯಾವುದೇ ಗಾಯಗಳಾಗದೆ ಪಾರಾಗಿದ್ದರು.

ಆಗ ತಕ್ಷಣ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ದಾಳಿ ದೇಶಕ್ಕೆ “ಸ್ವಾತಂತ್ರ್ಯ ದಿನಾಚರಣೆ”ಯ ಉಡುಗೊರೆ ಎಂದು ವೀಡಿಯೊ ಅಪ್‌ಲೋಡ್ ಮಾಡಿದ ನಂತರ ಅವರಿಬ್ಬರನ್ನು ಬಂಧಿಸಲಾಗಿತ್ತು. ಶಿವಸೇನೆ ಅಭ್ಯರ್ಥಿ ದಲಾಲ್‌ ಸದ್ಯ ಜಾಮೀನಿನ ಮೇಲೆ ಹೊರಗಿದ್ದು, ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ.

ಆರೋಪಿಯೊಬ್ಬನಿಗೆ ಟಿಕೇಟ್ ನೀಡುವುದರ ಕುರಿತ ಪ್ರಶ್ನೆಗೆ ಶಿವಸೇನೆ, ದಲಾಲ್ ಅವರ ಆ ಕ್ರಮವನ್ನು “ಇದು ದೇಶಪ್ರೇಮವನ್ನು ತೋರಿಸುವ ವಿಧಾನ” ಎಂದು ಕರೆದಿದೆ. ದಲಾಲ್ ತನ್ನನ್ನು “ಗೌ ರಕ್ಷಕ್” ಮತ್ತು “ರಾಷ್ಟ್ರೀಯವಾದಿ” ಎಂದು ಕರೆದುಕೊಳ್ಳುತ್ತಾನೆ. ಆರು ತಿಂಗಳ ಹಿಂದೆಯಷ್ಟೆ ಆತ ಶಿವಸೇನೆ ಪಕ್ಷ ಸೇರಿದ್ದರು.

ಹರಿಯಾಣದ ಶಿವಸೇನೆ ನಾಯಕ ವಿಕ್ರಮ್ ಯಾದವ್ ಅವರ ಉಮೇದುವಾರಿಕೆಯನ್ನು ದೃಢಪಡಿಸಿದ್ದಾರೆ ಮತ್ತು ಗೋ ರಕ್ಷಣೆ ಮತ್ತು “ರಾಷ್ಟ್ರ ವಿರೋಧಿಗಳ” ವಿರುದ್ಧದ ಅವರ ನಿಲುವಿನಿಂದಾಗಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನವೀನ್ ದಲಾಲ್ ಅವರ ವಿರುದ್ಧ ಉಮರ್ ಖಾಲಿದ್ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವರು ಒಮ್ಮೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಸುವಿನ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದರು. ಹರಿಯಾಣದಲ್ಲಿ ನಡೆದ ಗಲಭೆ ಪ್ರಕರಣದ ಮೇಲೂ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಐಟಿ ಸೆಲ್ ನಡೆಸುತ್ತಿರುವ ತಪ್ಪು ಮಾಹಿತಿಯ ಅಭಿಯಾನದಿಂದಾಗಿ ಉಮರ್ ಖಾಲಿದ್ ಅವರನ್ನು ಕೊಲ್ಲಲು ಆರೋಪಿಗಳಿಬ್ಬರು ಯತ್ನಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪವಿದೆ. ಆದರೆ ತನಿಖೆಯ ಸಮಯದಲ್ಲಿ ಈ ವಿಡಿಯೋ ನಿಜಕ್ಕೂ ನಕಲಿ ಎಂದು ತಿಳಿದುಬಂದಿದೆ ಮತ್ತು ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಇಬ್ಬರ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸತ್ಯವು ಹೊರಬಂದಿದ್ದರೂ, ಹಲವು ಗೋಧಿ ಮಾಧ್ಯಮಗಳು ಜೆಎನ್‌ಯು ವಿದ್ಯಾರ್ಥಿಗಳನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಉಲ್ಲೇಖಿಸುತ್ತಲೇ ಇವೆ. ವಿದ್ಯಾರ್ಥಿಯ ಮೇಲೆ ಕೊಲೆ ಪ್ರಯತ್ನ ಮಾಡಿದ ವ್ಯಕ್ತಿಯು ಮುಕ್ತವಾಗಿ ತಿರುಗಾಡುತ್ತಿದ್ದಾನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದರೆ ನಾವು ಯಾವ ಕಾಲದಲ್ಲಿದ್ದೇವೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲಾತಾಣದಲ್ಲಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...