Homeಮುಖಪುಟಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಶಿವಸೇನೆ ದಲಾಲ್ ಅವರ ಕ್ರಮಗಳನ್ನು "ದೇಶಭಕ್ತಿ ತೋರಿಸುವ ವಿಧಾನ" ಎನ್ನುವ ಮೂಲಕ ಸಮರ್ಥಿಸಿಕೊಂಡಿದೆ. ದಲಾಲ್ ತನ್ನನ್ನು "ಗೌ ರಕ್ಷಕ್" ಮತ್ತು "ರಾಷ್ಟ್ರೀಯವಾದಿ" ಎಂದು ಕರೆದುಕೊಳ್ಳುತ್ತಾನೆ.

- Advertisement -
- Advertisement -

ದೆಹಲಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜೆಎನ್‌ಯು ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಗುಂಡು ಹಾರಿಸಲು ಯತ್ನಿಸಿದ ಆರೋಪ ಹೊತ್ತಿದ್ದ ನವೀನ್ ದಲಾಲ್‌ ಈಗ ಹರಿಯಾಣದ ಬಹದ್ದೂರ್‌ಗ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿದ್ದಾರೆ. ಅಕ್ಟೋಬರ್ 21 ರಂದು ಹರಿಯಾಣ ಚುನಾವಣೆ ನಡೆಯಲಿದೆ.

2018ರ ಆಗಸ್ಟ್‌ನಲ್ಲಿ, ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಜೆಎನ್‌ಯು ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ಮೇಲೆ ನವೀನ್ ದಲಾಲ್ ಮತ್ತು ದರ್ವೇಶ್ ಶಹಪುರ್ ಅವರು ಗುಂಡು ಹಾರಿಸಿದ್ದರು. ಸಾಕ್ಷಿಗಳ ಪ್ರಕಾರ ಆರೋಪಿಯ ಬಂದೂಕು ಜಾಮ್ ಆಗಿದ್ದರಿಂದ ಎರಡು ಗುಂಡುಗಳನ್ನು ಹಾರಿಸಿದ್ದರೂ ಕೂಡ ಖಾಲಿದ್ ಯಾವುದೇ ಗಾಯಗಳಾಗದೆ ಪಾರಾಗಿದ್ದರು.

ಆಗ ತಕ್ಷಣ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ದಾಳಿ ದೇಶಕ್ಕೆ “ಸ್ವಾತಂತ್ರ್ಯ ದಿನಾಚರಣೆ”ಯ ಉಡುಗೊರೆ ಎಂದು ವೀಡಿಯೊ ಅಪ್‌ಲೋಡ್ ಮಾಡಿದ ನಂತರ ಅವರಿಬ್ಬರನ್ನು ಬಂಧಿಸಲಾಗಿತ್ತು. ಶಿವಸೇನೆ ಅಭ್ಯರ್ಥಿ ದಲಾಲ್‌ ಸದ್ಯ ಜಾಮೀನಿನ ಮೇಲೆ ಹೊರಗಿದ್ದು, ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ.

ಆರೋಪಿಯೊಬ್ಬನಿಗೆ ಟಿಕೇಟ್ ನೀಡುವುದರ ಕುರಿತ ಪ್ರಶ್ನೆಗೆ ಶಿವಸೇನೆ, ದಲಾಲ್ ಅವರ ಆ ಕ್ರಮವನ್ನು “ಇದು ದೇಶಪ್ರೇಮವನ್ನು ತೋರಿಸುವ ವಿಧಾನ” ಎಂದು ಕರೆದಿದೆ. ದಲಾಲ್ ತನ್ನನ್ನು “ಗೌ ರಕ್ಷಕ್” ಮತ್ತು “ರಾಷ್ಟ್ರೀಯವಾದಿ” ಎಂದು ಕರೆದುಕೊಳ್ಳುತ್ತಾನೆ. ಆರು ತಿಂಗಳ ಹಿಂದೆಯಷ್ಟೆ ಆತ ಶಿವಸೇನೆ ಪಕ್ಷ ಸೇರಿದ್ದರು.

ಹರಿಯಾಣದ ಶಿವಸೇನೆ ನಾಯಕ ವಿಕ್ರಮ್ ಯಾದವ್ ಅವರ ಉಮೇದುವಾರಿಕೆಯನ್ನು ದೃಢಪಡಿಸಿದ್ದಾರೆ ಮತ್ತು ಗೋ ರಕ್ಷಣೆ ಮತ್ತು “ರಾಷ್ಟ್ರ ವಿರೋಧಿಗಳ” ವಿರುದ್ಧದ ಅವರ ನಿಲುವಿನಿಂದಾಗಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನವೀನ್ ದಲಾಲ್ ಅವರ ವಿರುದ್ಧ ಉಮರ್ ಖಾಲಿದ್ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವರು ಒಮ್ಮೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಸುವಿನ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದರು. ಹರಿಯಾಣದಲ್ಲಿ ನಡೆದ ಗಲಭೆ ಪ್ರಕರಣದ ಮೇಲೂ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಐಟಿ ಸೆಲ್ ನಡೆಸುತ್ತಿರುವ ತಪ್ಪು ಮಾಹಿತಿಯ ಅಭಿಯಾನದಿಂದಾಗಿ ಉಮರ್ ಖಾಲಿದ್ ಅವರನ್ನು ಕೊಲ್ಲಲು ಆರೋಪಿಗಳಿಬ್ಬರು ಯತ್ನಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪವಿದೆ. ಆದರೆ ತನಿಖೆಯ ಸಮಯದಲ್ಲಿ ಈ ವಿಡಿಯೋ ನಿಜಕ್ಕೂ ನಕಲಿ ಎಂದು ತಿಳಿದುಬಂದಿದೆ ಮತ್ತು ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಇಬ್ಬರ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸತ್ಯವು ಹೊರಬಂದಿದ್ದರೂ, ಹಲವು ಗೋಧಿ ಮಾಧ್ಯಮಗಳು ಜೆಎನ್‌ಯು ವಿದ್ಯಾರ್ಥಿಗಳನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಉಲ್ಲೇಖಿಸುತ್ತಲೇ ಇವೆ. ವಿದ್ಯಾರ್ಥಿಯ ಮೇಲೆ ಕೊಲೆ ಪ್ರಯತ್ನ ಮಾಡಿದ ವ್ಯಕ್ತಿಯು ಮುಕ್ತವಾಗಿ ತಿರುಗಾಡುತ್ತಿದ್ದಾನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದರೆ ನಾವು ಯಾವ ಕಾಲದಲ್ಲಿದ್ದೇವೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲಾತಾಣದಲ್ಲಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...