Homeಮುಖಪುಟಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಶಿವಸೇನೆ ದಲಾಲ್ ಅವರ ಕ್ರಮಗಳನ್ನು "ದೇಶಭಕ್ತಿ ತೋರಿಸುವ ವಿಧಾನ" ಎನ್ನುವ ಮೂಲಕ ಸಮರ್ಥಿಸಿಕೊಂಡಿದೆ. ದಲಾಲ್ ತನ್ನನ್ನು "ಗೌ ರಕ್ಷಕ್" ಮತ್ತು "ರಾಷ್ಟ್ರೀಯವಾದಿ" ಎಂದು ಕರೆದುಕೊಳ್ಳುತ್ತಾನೆ.

- Advertisement -
- Advertisement -

ದೆಹಲಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜೆಎನ್‌ಯು ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಗುಂಡು ಹಾರಿಸಲು ಯತ್ನಿಸಿದ ಆರೋಪ ಹೊತ್ತಿದ್ದ ನವೀನ್ ದಲಾಲ್‌ ಈಗ ಹರಿಯಾಣದ ಬಹದ್ದೂರ್‌ಗ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿದ್ದಾರೆ. ಅಕ್ಟೋಬರ್ 21 ರಂದು ಹರಿಯಾಣ ಚುನಾವಣೆ ನಡೆಯಲಿದೆ.

2018ರ ಆಗಸ್ಟ್‌ನಲ್ಲಿ, ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಜೆಎನ್‌ಯು ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ಮೇಲೆ ನವೀನ್ ದಲಾಲ್ ಮತ್ತು ದರ್ವೇಶ್ ಶಹಪುರ್ ಅವರು ಗುಂಡು ಹಾರಿಸಿದ್ದರು. ಸಾಕ್ಷಿಗಳ ಪ್ರಕಾರ ಆರೋಪಿಯ ಬಂದೂಕು ಜಾಮ್ ಆಗಿದ್ದರಿಂದ ಎರಡು ಗುಂಡುಗಳನ್ನು ಹಾರಿಸಿದ್ದರೂ ಕೂಡ ಖಾಲಿದ್ ಯಾವುದೇ ಗಾಯಗಳಾಗದೆ ಪಾರಾಗಿದ್ದರು.

ಆಗ ತಕ್ಷಣ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ದಾಳಿ ದೇಶಕ್ಕೆ “ಸ್ವಾತಂತ್ರ್ಯ ದಿನಾಚರಣೆ”ಯ ಉಡುಗೊರೆ ಎಂದು ವೀಡಿಯೊ ಅಪ್‌ಲೋಡ್ ಮಾಡಿದ ನಂತರ ಅವರಿಬ್ಬರನ್ನು ಬಂಧಿಸಲಾಗಿತ್ತು. ಶಿವಸೇನೆ ಅಭ್ಯರ್ಥಿ ದಲಾಲ್‌ ಸದ್ಯ ಜಾಮೀನಿನ ಮೇಲೆ ಹೊರಗಿದ್ದು, ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ.

ಆರೋಪಿಯೊಬ್ಬನಿಗೆ ಟಿಕೇಟ್ ನೀಡುವುದರ ಕುರಿತ ಪ್ರಶ್ನೆಗೆ ಶಿವಸೇನೆ, ದಲಾಲ್ ಅವರ ಆ ಕ್ರಮವನ್ನು “ಇದು ದೇಶಪ್ರೇಮವನ್ನು ತೋರಿಸುವ ವಿಧಾನ” ಎಂದು ಕರೆದಿದೆ. ದಲಾಲ್ ತನ್ನನ್ನು “ಗೌ ರಕ್ಷಕ್” ಮತ್ತು “ರಾಷ್ಟ್ರೀಯವಾದಿ” ಎಂದು ಕರೆದುಕೊಳ್ಳುತ್ತಾನೆ. ಆರು ತಿಂಗಳ ಹಿಂದೆಯಷ್ಟೆ ಆತ ಶಿವಸೇನೆ ಪಕ್ಷ ಸೇರಿದ್ದರು.

ಹರಿಯಾಣದ ಶಿವಸೇನೆ ನಾಯಕ ವಿಕ್ರಮ್ ಯಾದವ್ ಅವರ ಉಮೇದುವಾರಿಕೆಯನ್ನು ದೃಢಪಡಿಸಿದ್ದಾರೆ ಮತ್ತು ಗೋ ರಕ್ಷಣೆ ಮತ್ತು “ರಾಷ್ಟ್ರ ವಿರೋಧಿಗಳ” ವಿರುದ್ಧದ ಅವರ ನಿಲುವಿನಿಂದಾಗಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನವೀನ್ ದಲಾಲ್ ಅವರ ವಿರುದ್ಧ ಉಮರ್ ಖಾಲಿದ್ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವರು ಒಮ್ಮೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಸುವಿನ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದರು. ಹರಿಯಾಣದಲ್ಲಿ ನಡೆದ ಗಲಭೆ ಪ್ರಕರಣದ ಮೇಲೂ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಐಟಿ ಸೆಲ್ ನಡೆಸುತ್ತಿರುವ ತಪ್ಪು ಮಾಹಿತಿಯ ಅಭಿಯಾನದಿಂದಾಗಿ ಉಮರ್ ಖಾಲಿದ್ ಅವರನ್ನು ಕೊಲ್ಲಲು ಆರೋಪಿಗಳಿಬ್ಬರು ಯತ್ನಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪವಿದೆ. ಆದರೆ ತನಿಖೆಯ ಸಮಯದಲ್ಲಿ ಈ ವಿಡಿಯೋ ನಿಜಕ್ಕೂ ನಕಲಿ ಎಂದು ತಿಳಿದುಬಂದಿದೆ ಮತ್ತು ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಇಬ್ಬರ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸತ್ಯವು ಹೊರಬಂದಿದ್ದರೂ, ಹಲವು ಗೋಧಿ ಮಾಧ್ಯಮಗಳು ಜೆಎನ್‌ಯು ವಿದ್ಯಾರ್ಥಿಗಳನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಉಲ್ಲೇಖಿಸುತ್ತಲೇ ಇವೆ. ವಿದ್ಯಾರ್ಥಿಯ ಮೇಲೆ ಕೊಲೆ ಪ್ರಯತ್ನ ಮಾಡಿದ ವ್ಯಕ್ತಿಯು ಮುಕ್ತವಾಗಿ ತಿರುಗಾಡುತ್ತಿದ್ದಾನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದರೆ ನಾವು ಯಾವ ಕಾಲದಲ್ಲಿದ್ದೇವೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲಾತಾಣದಲ್ಲಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...