Homeಮುಖಪುಟಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಶಿವಸೇನೆ ದಲಾಲ್ ಅವರ ಕ್ರಮಗಳನ್ನು "ದೇಶಭಕ್ತಿ ತೋರಿಸುವ ವಿಧಾನ" ಎನ್ನುವ ಮೂಲಕ ಸಮರ್ಥಿಸಿಕೊಂಡಿದೆ. ದಲಾಲ್ ತನ್ನನ್ನು "ಗೌ ರಕ್ಷಕ್" ಮತ್ತು "ರಾಷ್ಟ್ರೀಯವಾದಿ" ಎಂದು ಕರೆದುಕೊಳ್ಳುತ್ತಾನೆ.

- Advertisement -
- Advertisement -

ದೆಹಲಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜೆಎನ್‌ಯು ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಗುಂಡು ಹಾರಿಸಲು ಯತ್ನಿಸಿದ ಆರೋಪ ಹೊತ್ತಿದ್ದ ನವೀನ್ ದಲಾಲ್‌ ಈಗ ಹರಿಯಾಣದ ಬಹದ್ದೂರ್‌ಗ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿದ್ದಾರೆ. ಅಕ್ಟೋಬರ್ 21 ರಂದು ಹರಿಯಾಣ ಚುನಾವಣೆ ನಡೆಯಲಿದೆ.

2018ರ ಆಗಸ್ಟ್‌ನಲ್ಲಿ, ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಜೆಎನ್‌ಯು ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ಮೇಲೆ ನವೀನ್ ದಲಾಲ್ ಮತ್ತು ದರ್ವೇಶ್ ಶಹಪುರ್ ಅವರು ಗುಂಡು ಹಾರಿಸಿದ್ದರು. ಸಾಕ್ಷಿಗಳ ಪ್ರಕಾರ ಆರೋಪಿಯ ಬಂದೂಕು ಜಾಮ್ ಆಗಿದ್ದರಿಂದ ಎರಡು ಗುಂಡುಗಳನ್ನು ಹಾರಿಸಿದ್ದರೂ ಕೂಡ ಖಾಲಿದ್ ಯಾವುದೇ ಗಾಯಗಳಾಗದೆ ಪಾರಾಗಿದ್ದರು.

ಆಗ ತಕ್ಷಣ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ದಾಳಿ ದೇಶಕ್ಕೆ “ಸ್ವಾತಂತ್ರ್ಯ ದಿನಾಚರಣೆ”ಯ ಉಡುಗೊರೆ ಎಂದು ವೀಡಿಯೊ ಅಪ್‌ಲೋಡ್ ಮಾಡಿದ ನಂತರ ಅವರಿಬ್ಬರನ್ನು ಬಂಧಿಸಲಾಗಿತ್ತು. ಶಿವಸೇನೆ ಅಭ್ಯರ್ಥಿ ದಲಾಲ್‌ ಸದ್ಯ ಜಾಮೀನಿನ ಮೇಲೆ ಹೊರಗಿದ್ದು, ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ.

ಆರೋಪಿಯೊಬ್ಬನಿಗೆ ಟಿಕೇಟ್ ನೀಡುವುದರ ಕುರಿತ ಪ್ರಶ್ನೆಗೆ ಶಿವಸೇನೆ, ದಲಾಲ್ ಅವರ ಆ ಕ್ರಮವನ್ನು “ಇದು ದೇಶಪ್ರೇಮವನ್ನು ತೋರಿಸುವ ವಿಧಾನ” ಎಂದು ಕರೆದಿದೆ. ದಲಾಲ್ ತನ್ನನ್ನು “ಗೌ ರಕ್ಷಕ್” ಮತ್ತು “ರಾಷ್ಟ್ರೀಯವಾದಿ” ಎಂದು ಕರೆದುಕೊಳ್ಳುತ್ತಾನೆ. ಆರು ತಿಂಗಳ ಹಿಂದೆಯಷ್ಟೆ ಆತ ಶಿವಸೇನೆ ಪಕ್ಷ ಸೇರಿದ್ದರು.

ಹರಿಯಾಣದ ಶಿವಸೇನೆ ನಾಯಕ ವಿಕ್ರಮ್ ಯಾದವ್ ಅವರ ಉಮೇದುವಾರಿಕೆಯನ್ನು ದೃಢಪಡಿಸಿದ್ದಾರೆ ಮತ್ತು ಗೋ ರಕ್ಷಣೆ ಮತ್ತು “ರಾಷ್ಟ್ರ ವಿರೋಧಿಗಳ” ವಿರುದ್ಧದ ಅವರ ನಿಲುವಿನಿಂದಾಗಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನವೀನ್ ದಲಾಲ್ ಅವರ ವಿರುದ್ಧ ಉಮರ್ ಖಾಲಿದ್ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವರು ಒಮ್ಮೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಸುವಿನ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದರು. ಹರಿಯಾಣದಲ್ಲಿ ನಡೆದ ಗಲಭೆ ಪ್ರಕರಣದ ಮೇಲೂ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಐಟಿ ಸೆಲ್ ನಡೆಸುತ್ತಿರುವ ತಪ್ಪು ಮಾಹಿತಿಯ ಅಭಿಯಾನದಿಂದಾಗಿ ಉಮರ್ ಖಾಲಿದ್ ಅವರನ್ನು ಕೊಲ್ಲಲು ಆರೋಪಿಗಳಿಬ್ಬರು ಯತ್ನಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪವಿದೆ. ಆದರೆ ತನಿಖೆಯ ಸಮಯದಲ್ಲಿ ಈ ವಿಡಿಯೋ ನಿಜಕ್ಕೂ ನಕಲಿ ಎಂದು ತಿಳಿದುಬಂದಿದೆ ಮತ್ತು ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಇಬ್ಬರ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸತ್ಯವು ಹೊರಬಂದಿದ್ದರೂ, ಹಲವು ಗೋಧಿ ಮಾಧ್ಯಮಗಳು ಜೆಎನ್‌ಯು ವಿದ್ಯಾರ್ಥಿಗಳನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಉಲ್ಲೇಖಿಸುತ್ತಲೇ ಇವೆ. ವಿದ್ಯಾರ್ಥಿಯ ಮೇಲೆ ಕೊಲೆ ಪ್ರಯತ್ನ ಮಾಡಿದ ವ್ಯಕ್ತಿಯು ಮುಕ್ತವಾಗಿ ತಿರುಗಾಡುತ್ತಿದ್ದಾನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದರೆ ನಾವು ಯಾವ ಕಾಲದಲ್ಲಿದ್ದೇವೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲಾತಾಣದಲ್ಲಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...