Homeಮುಖಪುಟಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಶಿವಸೇನೆ ದಲಾಲ್ ಅವರ ಕ್ರಮಗಳನ್ನು "ದೇಶಭಕ್ತಿ ತೋರಿಸುವ ವಿಧಾನ" ಎನ್ನುವ ಮೂಲಕ ಸಮರ್ಥಿಸಿಕೊಂಡಿದೆ. ದಲಾಲ್ ತನ್ನನ್ನು "ಗೌ ರಕ್ಷಕ್" ಮತ್ತು "ರಾಷ್ಟ್ರೀಯವಾದಿ" ಎಂದು ಕರೆದುಕೊಳ್ಳುತ್ತಾನೆ.

- Advertisement -
- Advertisement -

ದೆಹಲಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜೆಎನ್‌ಯು ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಗುಂಡು ಹಾರಿಸಲು ಯತ್ನಿಸಿದ ಆರೋಪ ಹೊತ್ತಿದ್ದ ನವೀನ್ ದಲಾಲ್‌ ಈಗ ಹರಿಯಾಣದ ಬಹದ್ದೂರ್‌ಗ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿದ್ದಾರೆ. ಅಕ್ಟೋಬರ್ 21 ರಂದು ಹರಿಯಾಣ ಚುನಾವಣೆ ನಡೆಯಲಿದೆ.

2018ರ ಆಗಸ್ಟ್‌ನಲ್ಲಿ, ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಜೆಎನ್‌ಯು ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ಮೇಲೆ ನವೀನ್ ದಲಾಲ್ ಮತ್ತು ದರ್ವೇಶ್ ಶಹಪುರ್ ಅವರು ಗುಂಡು ಹಾರಿಸಿದ್ದರು. ಸಾಕ್ಷಿಗಳ ಪ್ರಕಾರ ಆರೋಪಿಯ ಬಂದೂಕು ಜಾಮ್ ಆಗಿದ್ದರಿಂದ ಎರಡು ಗುಂಡುಗಳನ್ನು ಹಾರಿಸಿದ್ದರೂ ಕೂಡ ಖಾಲಿದ್ ಯಾವುದೇ ಗಾಯಗಳಾಗದೆ ಪಾರಾಗಿದ್ದರು.

ಆಗ ತಕ್ಷಣ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ದಾಳಿ ದೇಶಕ್ಕೆ “ಸ್ವಾತಂತ್ರ್ಯ ದಿನಾಚರಣೆ”ಯ ಉಡುಗೊರೆ ಎಂದು ವೀಡಿಯೊ ಅಪ್‌ಲೋಡ್ ಮಾಡಿದ ನಂತರ ಅವರಿಬ್ಬರನ್ನು ಬಂಧಿಸಲಾಗಿತ್ತು. ಶಿವಸೇನೆ ಅಭ್ಯರ್ಥಿ ದಲಾಲ್‌ ಸದ್ಯ ಜಾಮೀನಿನ ಮೇಲೆ ಹೊರಗಿದ್ದು, ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ.

ಆರೋಪಿಯೊಬ್ಬನಿಗೆ ಟಿಕೇಟ್ ನೀಡುವುದರ ಕುರಿತ ಪ್ರಶ್ನೆಗೆ ಶಿವಸೇನೆ, ದಲಾಲ್ ಅವರ ಆ ಕ್ರಮವನ್ನು “ಇದು ದೇಶಪ್ರೇಮವನ್ನು ತೋರಿಸುವ ವಿಧಾನ” ಎಂದು ಕರೆದಿದೆ. ದಲಾಲ್ ತನ್ನನ್ನು “ಗೌ ರಕ್ಷಕ್” ಮತ್ತು “ರಾಷ್ಟ್ರೀಯವಾದಿ” ಎಂದು ಕರೆದುಕೊಳ್ಳುತ್ತಾನೆ. ಆರು ತಿಂಗಳ ಹಿಂದೆಯಷ್ಟೆ ಆತ ಶಿವಸೇನೆ ಪಕ್ಷ ಸೇರಿದ್ದರು.

ಹರಿಯಾಣದ ಶಿವಸೇನೆ ನಾಯಕ ವಿಕ್ರಮ್ ಯಾದವ್ ಅವರ ಉಮೇದುವಾರಿಕೆಯನ್ನು ದೃಢಪಡಿಸಿದ್ದಾರೆ ಮತ್ತು ಗೋ ರಕ್ಷಣೆ ಮತ್ತು “ರಾಷ್ಟ್ರ ವಿರೋಧಿಗಳ” ವಿರುದ್ಧದ ಅವರ ನಿಲುವಿನಿಂದಾಗಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನವೀನ್ ದಲಾಲ್ ಅವರ ವಿರುದ್ಧ ಉಮರ್ ಖಾಲಿದ್ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವರು ಒಮ್ಮೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಸುವಿನ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದರು. ಹರಿಯಾಣದಲ್ಲಿ ನಡೆದ ಗಲಭೆ ಪ್ರಕರಣದ ಮೇಲೂ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಐಟಿ ಸೆಲ್ ನಡೆಸುತ್ತಿರುವ ತಪ್ಪು ಮಾಹಿತಿಯ ಅಭಿಯಾನದಿಂದಾಗಿ ಉಮರ್ ಖಾಲಿದ್ ಅವರನ್ನು ಕೊಲ್ಲಲು ಆರೋಪಿಗಳಿಬ್ಬರು ಯತ್ನಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪವಿದೆ. ಆದರೆ ತನಿಖೆಯ ಸಮಯದಲ್ಲಿ ಈ ವಿಡಿಯೋ ನಿಜಕ್ಕೂ ನಕಲಿ ಎಂದು ತಿಳಿದುಬಂದಿದೆ ಮತ್ತು ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಇಬ್ಬರ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸತ್ಯವು ಹೊರಬಂದಿದ್ದರೂ, ಹಲವು ಗೋಧಿ ಮಾಧ್ಯಮಗಳು ಜೆಎನ್‌ಯು ವಿದ್ಯಾರ್ಥಿಗಳನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಉಲ್ಲೇಖಿಸುತ್ತಲೇ ಇವೆ. ವಿದ್ಯಾರ್ಥಿಯ ಮೇಲೆ ಕೊಲೆ ಪ್ರಯತ್ನ ಮಾಡಿದ ವ್ಯಕ್ತಿಯು ಮುಕ್ತವಾಗಿ ತಿರುಗಾಡುತ್ತಿದ್ದಾನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದರೆ ನಾವು ಯಾವ ಕಾಲದಲ್ಲಿದ್ದೇವೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲಾತಾಣದಲ್ಲಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...