Homeಮುಖಪುಟಅಧಿಕಾರಕ್ಕೇರಲು ಶಿವಸೇನೆ ಕಸರತ್ತು: 170 ಶಾಸಕರನ್ನು ಭೇಟಿಯಾಗಲು ಸಿದ್ಧತೆ..!

ಅಧಿಕಾರಕ್ಕೇರಲು ಶಿವಸೇನೆ ಕಸರತ್ತು: 170 ಶಾಸಕರನ್ನು ಭೇಟಿಯಾಗಲು ಸಿದ್ಧತೆ..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಕಚ್ಚಾಟ ತಾರಕಕ್ಕೇರಿದೆ. ಈ ಮಧ್ಯೆ ಶಿವಸೇನೆ ಸಿಎಂ ಹುದ್ದೆ ಪಡೆದೇ ತೀರುವ ಸಾಹಸದಲ್ಲಿದ್ದು, 170 ಶಾಸಕರನ್ನು ಭೇಟಿಯಾಗುವುದಾಗಿ ಹೇಳಿದೆ. ಈಗಾಗಲೇ ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಮತ್ತು ಪ್ರತಿಷ್ಠೆ ತಾರಕಕ್ಕೇರಿದೆ.

ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಅಧಿಕಾರ ರಚನೆಗೆ ಅವಕಾಶ ನೀಡುತ್ತೇವೆ. ಒಂದು ವೇಳೆ ಸರ್ಕಾರ ರಚಿಸುವಲ್ಲಿ ಬಿಜೆಪಿ ವಿಫಲವಾದರೆ, ಶಿವಸೇನೆ ಸರ್ಕಾರ ರಚಿಸುವುದಾಗಿ ಹೇಳಿದೆ. ಇಂದು ಸಾಯಂಕಾಲ 170 ಶಾಸಕರನ್ನು ಭೇಟಿಯಾಗಿ, ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಲಾಗುವುದು. ನಂತರ ಗವರ್ನರ್ ಬಳಿ ಅಧಿಕಾರ ರಚಿಸಲು ಮನವಿ ಮಾಡುವುದಾಗಿ ಶಿವಸೇನೆ ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಅಕ್ಟೋಬರ್ 24 ರಂದು ಪ್ರಕಟವಾದ ಚುನಾವಣಾ ಫಲಿತಾಂಶದ ನಂತರ ಸತತ ಮೂರನೇ ಬಾರಿಗೆ ಶಿವಸೇನೆ ಪ್ರಮುಖರು, ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಶಿವಸೇನೆಯ ಮುಖ್ಯವಾಣಿ ಸಾಮ್ನಾದಲ್ಲಿ, 170 ಎಂಎಲ್‌ಎಗಳ ಭೇಟಿ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಅಲ್ಲದೇ ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಮೈತ್ರಿ ಬಗ್ಗೆ ಸಂಜೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದೆ. ಇತ್ತ ಶರದ್ ಪವಾರ್ ಅವರಿಗೆ ಕರೆ ಮಾಡಿ ಮೈತ್ರಿಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ  ಆಹ್ವಾನ ನೀಡಿದ್ದಾರೆ. ಆದರೆ ಸಂಜೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ ಆನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ.

ಎನ್.ಸಿ.ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆಯ ಸಂಜಯ್ ರಾವತ್ ಅವರು ಸಂದೇಶ ಕಳುಹಿಸಿದ್ದಾರೆ. ಯಾಕೆ ಎಂದು ಗೊತ್ತಿಲ್ಲ. ಇದೇ ಮೊದಲ ಬಾರಿಗೆ  ರಾವತ್ ಸಂಪರ್ಕಿಸಿದ್ದಾರೆ. ರಾವತ್ ಹೇಗೆ ಮತ್ತು ಯಾಕೆ 170 ಶಾಸಕರನ್ನು ಭೇಟಿಯಾಗುತ್ತಿದ್ದಾರೆ ಎಂದು ತಿಳಿದಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಮತ್ತು ಎನ್.ಸಿ.ಪಿ 110 ಸ್ಥಾನಗಳನ್ನು ಗೆದ್ದಿವೆ. ಶಿವಸೇನೆ 56 ಸ್ಥಾನ ಗೆದ್ದಿದ್ದು, ಅಧಿಕಾರಕ್ಕೇರಲು ಮೈತ್ರಿ ಮಾಡಿಕೊಳ್ಳುವ ತಂತ್ರವಿದೆ. ಬಿಜೆಪಿ ಮತ್ತು ಶಿವಸೇನೆಗೆ ಇನ್ನೂ ಕಾಲಾವಕಾಶವಿದ್ದು, ಆಲೋಚಿಸಿ ಬಿಜೆಪಿ ನಿರ್ಧರಿಸಬೇಕು ಎಂದು ಸಾಮ್ನಾದಲ್ಲಿ ಶಿವಸೇನೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...