Homeಮುಖಪುಟ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

ಮಹತ್ವದ ತಿರುವಿನತ್ತ ಮಹಾರಾಷ್ಟ್ರ ರಾಜಕೀಯ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ‘‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯು ಶಿವಸೇನೆಯ ಮೇಲೆ ನಿರಂತರವಗಿ ದಾಳಿ ನಡೆಸುತ್ತಿತ್ತು. ಅದರಲ್ಲೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟೀಕಿಗಳ ಸುರಿಮಳೆಯನ್ನೆ ಸುರಿಸುತ್ತಿದ್ದರು. ಆದರೆ ಭಾನುವಾರದಂದು ಅವರು ‘‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ” ಎಂದು ಘೋಷಿಸಿದ್ದಾರೆ. ಇದು ಮಹಾರಾಷ್ಟ್ರ ರಾಜಕೀಯ ವಲಯವು ಮಹತ್ವದ ಬೆಳವಣಿಗೆಯತ್ತ ಸಾಗುತ್ತಿದೆ ಎಂದು ಸೂಚಿಸುತ್ತಿದೆ.

ಮಾಜಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರಲಿದ್ದಾರೆಯೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ದೇವೇಂದ್ರ ಫಡ್ನವಿಸ್, “ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

ಒಕ್ಕೂಟ ಸರ್ಕಾರದ ಗೃಹ ಸಚಿವರ ಭೇಟಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ ಶಿವಸೇನೆಯೊಂದಿಗೆ ಮತ್ತೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯ ಕುರಿತು ಫಡ್ನವಿಸ್‌ ಮಾತನಾಡಿದ್ದಾರೆ. “ನಾವು ಮತ್ತು ಶಿವಸೇನೆ ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು. ಅವರು ಯಾರ ವಿರುದ್ದ ಹೋರಾಟ ನಡೆಸಿದರೂ ಅವರೊಂದಿಗೆ ಸರ್ಕಾರ ರಚಿಸಿ ನಮ್ಮ ತೊರೆದರು” ಎಂದು ಅವರು ಹೇಳಿದ್ದಾರೆ.

“ರಾಜಕೀಯದಲ್ಲಿ ಚಾಲ್ತಿಯಲ್ಲಿರುವ ಸಂದರ್ಭಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ. ಮಹಾರಾಷ್ಟ್ರ ಆಡಳಿತ ಪಕ್ಷದಲ್ಲಿ ಒಂದಾದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕರ ವಿರುದ್ಧ ಒಕ್ಕೂಟ ಸರ್ಕಾರದ ತನಿಖಾ ಸಂಸ್ಥೆಗಳು ಕೈಗೊಂಡ ಕ್ರಮಗಳ ಮಧ್ಯೆ ಸ್ನೇಹದ ಕುರಿತು ಘೋಷಣೆಯಾಗಿದೆ.

ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಮೈತ್ರಿಯನ್ನು ಅಸ್ಥಿರಗೊಳಿಸಲು ಒಕ್ಕೂಟ ಸರ್ಕಾರವು ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಶಿವಸೇನೆ ಮತ್ತು ಎನ್‌ಸಿಪಿ ಹೇಳುತ್ತಲೆ ಬಂದಿದೆ.

ಈ ಮಧ್ಯೆ ಮಹಾರಾಷ್ಟ್ರ ಸರ್ಕಾರದ ಮತ್ತೊಂದು ಮಿತ್ರಪಕ್ಷವಾದ ಕಾಂಗ್ರೆಸ್‌ನ ನಾಯಕರು ಶಿವಸೇನೆಯೊಂದಿಗಿನ ಮೈತ್ರಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ, ಮುಂದಿನ ಐದು ವರ್ಷಗಳ ಕಾಲ ತಾವು ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿಯೊಂದಿಗೆ ಇದ್ದೇವೆ ಎಂದು ಕಾಂಗ್ರೆಸ್ ನಂತರ ಸ್ಪಷ್ಟಪಡಿಸಿತ್ತು. ಅದಾಗ್ಯೂ ಮೈತ್ರಿಯಲ್ಲಿ ಬಿರುಕು ಮೂಡುತ್ತಿದೆ ಎಂಬ ವದಂತಿಗಳು ಮಾಧ್ಯಮದಲ್ಲಿ ಹರಿದಾಡುತ್ತಲೆ ಇದೆ.

ಇದನ್ನೂ ಓದಿ: ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ಈ ವಾರದ ಆರಂಭದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ್ದರು. ಅದೇ ದಿನ ಕ್ಯಾಬಿನೆಟ್ ಸಚಿವ ಜೀತೇಂದ್ರ ಅವಾದ್, ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಮತ್ತು ಆದಿತ್ಯ ಠಾಕ್ರೆ ಅವರಂತಹ ಹಲವಾರು ನಾಯಕರು ಅವರನ್ನು ಭೇಟಿಯಾಗಿದ್ದಾರೆ.

ಕಳೆದ ತಿಂಗಳು, ಉದ್ದವ್‌‌ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಒಂದಾದ ಮೇಲೊಂದು ಸಭೆ ನಡೆಸಿದ್ದರು. ಶಿವಸೇನೆ ಇದನ್ನು ವೈಯಕ್ತಿಕ ಮತ್ತು ಶಿಷ್ಟಾಚಾರದ ಸಭೆ, ಪಕ್ಷವು ರಾಜಕೀಯ ಸಂಬಂಧಗಳನ್ನು ಲೆಕ್ಕಿಸದೆ, ವೈಯಕ್ತಿಕ ಸಂಬಂಧಗಳನ್ನು ಗೌರವಿಸುತ್ತದೆ ಎಂದು ಹೇಳಿತ್ತು.

ಶನಿವಾರ, ಮೈತ್ರಿಯಲ್ಲಿನ ಬಿರುಕುಗಳ ಊಹಾಪೋಹಗಳನ್ನು ಹೋಗಲಾಡಿಸುವ ಪ್ರಯತ್ನದ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್, “ಇಂತಹ ವದಂತಿಗಳು ಹೆಚ್ಚು ಹರಡಿದಂತೆ, ಮಹಾವಿಕಾಶ್ ಅಘಾಡಿ ಮೈತ್ರಿ ಬಲಗೊಳ್ಳುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಬಿಜೆಪಿಯು ಒಕ್ಕೂಟ ಸರ್ಕಾರದ ತನಿಖಾ ಸಂಸ್ಥೆಗಳನ್ನು ಬಳಸಿ ನಮ್ಮನ್ನು ಬೆದರಿಸುತ್ತಿದ್ದು. ನಮ್ಮ ಶಾಸಕರ ಉಳಿವಿಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು” ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆಗೆ ಪತ್ರ ಬರೆದಿದ್ದರು

ಇದನ್ನೂ ಓದಿ: ‘ನಮ್ಮ ಉಳಿವಿಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿ!’-ಉದ್ದವ್‌ ಠಾಕ್ರೆಗೆ ಶಿವಸೇನೆ ಶಾಸಕನ ಪತ್ರ


ವಿಡಿಯೊ ನೋಡಿ: ಕರಾಳ ಕೊರೊನಾ-ಕಂಗೆಟ್ಟ ಬದುಕು; ಕೈಹಿಡಿಯದ ಸರ್ಕಾರ
ಇತ್ತ ಲಾಕ್‌ಡೌನ್‌; ಅತ್ತ ಬೆಲೆ ಏರಿಕೆ; ತ್ರಿಶಂಕು ಸ್ಥಿತಿಯಲ್ಲಿ ಆಟೋ ಡ್ರೈವರ್‌ಗಳ ಪಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...