Homeಮುಖಪುಟಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

ಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

- Advertisement -
- Advertisement -

ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರು ತಮ್ಮ ಮಾಜಿ ಮಿತ್ರಪಕ್ಷ ಬಿಜೆಪಿಯನ್ನು ಬುಧವಾರ ಟೀಕಿಸಿದ್ದು, “ಹಿಂದುತ್ವಕ್ಕಾಗಿ ಶಿವಸೇನೆಯ ಬದ್ಧತೆಯು ರಾಜಕೀಯ ಅಥವಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ, ಜನರ ಆಹಾರ, ಬಟ್ಟೆ ಮತ್ತು ವಸತಿಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದ್ದಾರೆ.

ಸಂಜಯ್‌ ರಾವತ್ ಬುಧವಾರದಂದು ತಮ್ಮ ಹಿಂದುತ್ವದ ಕಾರ್ಡ್‌ ಬಳಸಿ, ತಮ್ಮ ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆಯು, ‘‘ಹಿಂದೂಗಳು ತಮ್ಮ ಮತವನ್ನು ಧರ್ಮದ ಹೆಸರಿನಲ್ಲಿ ಚಲಾಯಿಸುತ್ತಾರೆ ಎಂದು ಖಚಿತಪಡಿಸಿದ್ದಾರೆ’’ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

“ಅಯೋಧ್ಯೆಯಲ್ಲಿ ಬಾಬರಿ ಧ್ವಂಸವಾಗುತ್ತಿದ್ದಾಗ ಇಂದು ಹಿಂದುತ್ವದ ಮತಬ್ಯಾಂಕ್ ಅನ್ನು ಪ್ರತಿಪಾದಿಸುವವರು ಓಡಿ ಹೋಗಿದ್ದರು. ಶಿವ ಸೇನೆಯ ಕಾರ್ಯಕರ್ತರು ಮತ್ತು ಬಾಳಾಸಾಹೇಬ್ ಠಾಕ್ರೆ ಅವರು ಹಿಂದೂಗಳ ಪರವಾಗಿ ದೃಢವಾಗಿ ನಿಂತಿದ್ದರು ಮತ್ತು ಬಾಬರಿಯನ್ನು ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರ ಬಗ್ಗೆ ಹೆಮ್ಮೆಪಟ್ಟಿದ್ದರು” ಎಂದು ಸಂಜಯ್‌ ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೂ ವೋಟ್ ಬ್ಯಾಂಕ್ ಸೃಷ್ಟಿಸಿದ ಮೊದಲ ವ್ಯಕ್ತಿ ಛತ್ರಪತಿ ಶಿವಾಜಿ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಛತ್ರಪತಿ ಶಿವಾಜಿ ಮೊದಲ ಹಿಂದೂ ವೋಟ್ ಬ್ಯಾಂಕ್ ಅನ್ನು ಹುಟ್ಟುಹಾಕಿದ್ದಾರೋ ಇಲ್ಲವೋ ಗೊತ್ತಿಲ್ಲ, ಆದರೆ ಅವರು ದೇಶದಲ್ಲಿ ಮೊದಲ ಹಿಂದವಿ ಸ್ವರಾಜ್ಯವನ್ನು ಸ್ಥಾಪಿಸಿದರು ಎಂದು ರಾವತ್‌ ಪ್ರತಿಪಾದಿಸಿದ್ದಾರೆ.

ಛತ್ರಪತಿ ಶಿವಾಜಿಯವರ ಬೋಧನೆಗಳನ್ನು ಬಾಳಾಸಾಹೇಬ್ ಠಾಕ್ರೆ ಹಾಗೂ ಅದಕ್ಕಿಂಲೂ ಮೊದಲು ಸಾವರ್ಕರ್ ಮಹಾರಾಷ್ಟ್ರದಲ್ಲಿ ಮತ್ತು ದೇಶಾದ್ಯಂತ ಪೋಷಿಸಿದರು ಎಂದು ರಾವತ್ ಹೇಳಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ಬಾಳಾಸಾಹೇಬ್ ಠಾಕ್ರೆ ಅವರು ದೇಶದ ಹಿಂದೂಗಳು ಹಿಂದೂಗಳಾಗಿ ಮತ ಚಲಾಯಿಸುವುದನ್ನು ಖಚಿತಪಡಿಸಿದ್ದಾರೆ ಎಂದು ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಹೇಳಿದ್ದರು ಎಂದು ರಾವತ್ ನೆನಪಿಸಿಕೊಂಡಿದ್ದಾರೆ.

ದೇಶದಲ್ಲಿ ಹಿಂದೂ ವೋಟ್ ಬ್ಯಾಂಕ್ ಅಸ್ತಿತ್ವದಲ್ಲಿದೆ ಮತ್ತು ಹಿಂದೂಗಳು ಧರ್ಮದ ಹೆಸರಿನಲ್ಲಿ ಮತ ಚಲಾಯಿಸುವುದನ್ನು ಖಾತ್ರಿಪಡಿಸಿಕೊಂಡರು ಎಂಬುದನ್ನು ಬಾಳಾಸಾಹೇಬ್ ಅವರು ಮೊದಲ ಬಾರಿಗೆ ತೋರಿಸಿಕೊಟ್ಟಿದ್ದಾರೆ ಎಂದು ಅಯೋಧ್ಯೆ ಧ್ವಂಸದ ನಂತರ ನಡೆದ ಮಹಾರಾಷ್ಟ್ರ ವಿಧಾನಸಭಾ ಉಪಚುನಾವಣೆಯನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಹಿಂದುತ್ವದ ವಿಚಾರವಾಗಿ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಪ್ರತಿಪಾದಿಸಿದ ಶಿವಸೇನೆ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಆದರೆ, ಅಮಾನತು ವಿರುದ್ಧ ಹೋರಾಟ ನಡೆಸಿ ಗೆದ್ದಿದ್ದೇವೆ. ಯಾವುದೇ ಬಿಜೆಪಿ ಶಾಸಕರು ಇದೇ ರೀತಿಯ ಕ್ರಮವನ್ನು ಎದುರಿಸುತ್ತಿದ್ದಾರೆಂದು ನನಗೆ ನೆನಪಿಲ್ಲ ಎಂದು ರಾವತ್ ಹೇಳಿದ್ದಾರೆ.

“ನಮ್ಮ ಹಿಂದುತ್ವ ನಮಗೆ ಭಯಪಡುವುದನ್ನು ಕಲಿಸುವುದಿಲ್ಲ. ನಾವು ದೃಢವಾಗಿ ನಿಲ್ಲುತ್ತೇವೆ, ಹೋರಾಡುತ್ತೇವೆ ಮತ್ತು ಗೆಲ್ಲುತ್ತೇವೆ. ನಮ್ಮ ಹಿಂದುತ್ವ ಕೇವಲ ರಾಜಕೀಯ ಮತ್ತು ಚುನಾವಣೆಗಾಗಿ ಅಲ್ಲ, ಕೇವಲ ದೇವಸ್ಥಾನಗಳಿಗೆ ಸೀಮಿತವಲ್ಲ. ನಮ್ಮ ಹಿಂದುತ್ವವು ಜನರಿಗೆ ಆಹಾರ, ಬಟ್ಟೆ ಮತ್ತು ವಸತಿ ಸಿಗುವಂತೆ ನೋಡಿಕೊಳ್ಳುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ವಿಧಾನಸಭಾ ಚುನಾವಣೆ: 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...