Homeಮುಖಪುಟಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

ಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

- Advertisement -
- Advertisement -

ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರು ತಮ್ಮ ಮಾಜಿ ಮಿತ್ರಪಕ್ಷ ಬಿಜೆಪಿಯನ್ನು ಬುಧವಾರ ಟೀಕಿಸಿದ್ದು, “ಹಿಂದುತ್ವಕ್ಕಾಗಿ ಶಿವಸೇನೆಯ ಬದ್ಧತೆಯು ರಾಜಕೀಯ ಅಥವಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ, ಜನರ ಆಹಾರ, ಬಟ್ಟೆ ಮತ್ತು ವಸತಿಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದ್ದಾರೆ.

ಸಂಜಯ್‌ ರಾವತ್ ಬುಧವಾರದಂದು ತಮ್ಮ ಹಿಂದುತ್ವದ ಕಾರ್ಡ್‌ ಬಳಸಿ, ತಮ್ಮ ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆಯು, ‘‘ಹಿಂದೂಗಳು ತಮ್ಮ ಮತವನ್ನು ಧರ್ಮದ ಹೆಸರಿನಲ್ಲಿ ಚಲಾಯಿಸುತ್ತಾರೆ ಎಂದು ಖಚಿತಪಡಿಸಿದ್ದಾರೆ’’ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

“ಅಯೋಧ್ಯೆಯಲ್ಲಿ ಬಾಬರಿ ಧ್ವಂಸವಾಗುತ್ತಿದ್ದಾಗ ಇಂದು ಹಿಂದುತ್ವದ ಮತಬ್ಯಾಂಕ್ ಅನ್ನು ಪ್ರತಿಪಾದಿಸುವವರು ಓಡಿ ಹೋಗಿದ್ದರು. ಶಿವ ಸೇನೆಯ ಕಾರ್ಯಕರ್ತರು ಮತ್ತು ಬಾಳಾಸಾಹೇಬ್ ಠಾಕ್ರೆ ಅವರು ಹಿಂದೂಗಳ ಪರವಾಗಿ ದೃಢವಾಗಿ ನಿಂತಿದ್ದರು ಮತ್ತು ಬಾಬರಿಯನ್ನು ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರ ಬಗ್ಗೆ ಹೆಮ್ಮೆಪಟ್ಟಿದ್ದರು” ಎಂದು ಸಂಜಯ್‌ ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೂ ವೋಟ್ ಬ್ಯಾಂಕ್ ಸೃಷ್ಟಿಸಿದ ಮೊದಲ ವ್ಯಕ್ತಿ ಛತ್ರಪತಿ ಶಿವಾಜಿ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಛತ್ರಪತಿ ಶಿವಾಜಿ ಮೊದಲ ಹಿಂದೂ ವೋಟ್ ಬ್ಯಾಂಕ್ ಅನ್ನು ಹುಟ್ಟುಹಾಕಿದ್ದಾರೋ ಇಲ್ಲವೋ ಗೊತ್ತಿಲ್ಲ, ಆದರೆ ಅವರು ದೇಶದಲ್ಲಿ ಮೊದಲ ಹಿಂದವಿ ಸ್ವರಾಜ್ಯವನ್ನು ಸ್ಥಾಪಿಸಿದರು ಎಂದು ರಾವತ್‌ ಪ್ರತಿಪಾದಿಸಿದ್ದಾರೆ.

ಛತ್ರಪತಿ ಶಿವಾಜಿಯವರ ಬೋಧನೆಗಳನ್ನು ಬಾಳಾಸಾಹೇಬ್ ಠಾಕ್ರೆ ಹಾಗೂ ಅದಕ್ಕಿಂಲೂ ಮೊದಲು ಸಾವರ್ಕರ್ ಮಹಾರಾಷ್ಟ್ರದಲ್ಲಿ ಮತ್ತು ದೇಶಾದ್ಯಂತ ಪೋಷಿಸಿದರು ಎಂದು ರಾವತ್ ಹೇಳಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ಬಾಳಾಸಾಹೇಬ್ ಠಾಕ್ರೆ ಅವರು ದೇಶದ ಹಿಂದೂಗಳು ಹಿಂದೂಗಳಾಗಿ ಮತ ಚಲಾಯಿಸುವುದನ್ನು ಖಚಿತಪಡಿಸಿದ್ದಾರೆ ಎಂದು ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಹೇಳಿದ್ದರು ಎಂದು ರಾವತ್ ನೆನಪಿಸಿಕೊಂಡಿದ್ದಾರೆ.

ದೇಶದಲ್ಲಿ ಹಿಂದೂ ವೋಟ್ ಬ್ಯಾಂಕ್ ಅಸ್ತಿತ್ವದಲ್ಲಿದೆ ಮತ್ತು ಹಿಂದೂಗಳು ಧರ್ಮದ ಹೆಸರಿನಲ್ಲಿ ಮತ ಚಲಾಯಿಸುವುದನ್ನು ಖಾತ್ರಿಪಡಿಸಿಕೊಂಡರು ಎಂಬುದನ್ನು ಬಾಳಾಸಾಹೇಬ್ ಅವರು ಮೊದಲ ಬಾರಿಗೆ ತೋರಿಸಿಕೊಟ್ಟಿದ್ದಾರೆ ಎಂದು ಅಯೋಧ್ಯೆ ಧ್ವಂಸದ ನಂತರ ನಡೆದ ಮಹಾರಾಷ್ಟ್ರ ವಿಧಾನಸಭಾ ಉಪಚುನಾವಣೆಯನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಹಿಂದುತ್ವದ ವಿಚಾರವಾಗಿ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಪ್ರತಿಪಾದಿಸಿದ ಶಿವಸೇನೆ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಆದರೆ, ಅಮಾನತು ವಿರುದ್ಧ ಹೋರಾಟ ನಡೆಸಿ ಗೆದ್ದಿದ್ದೇವೆ. ಯಾವುದೇ ಬಿಜೆಪಿ ಶಾಸಕರು ಇದೇ ರೀತಿಯ ಕ್ರಮವನ್ನು ಎದುರಿಸುತ್ತಿದ್ದಾರೆಂದು ನನಗೆ ನೆನಪಿಲ್ಲ ಎಂದು ರಾವತ್ ಹೇಳಿದ್ದಾರೆ.

“ನಮ್ಮ ಹಿಂದುತ್ವ ನಮಗೆ ಭಯಪಡುವುದನ್ನು ಕಲಿಸುವುದಿಲ್ಲ. ನಾವು ದೃಢವಾಗಿ ನಿಲ್ಲುತ್ತೇವೆ, ಹೋರಾಡುತ್ತೇವೆ ಮತ್ತು ಗೆಲ್ಲುತ್ತೇವೆ. ನಮ್ಮ ಹಿಂದುತ್ವ ಕೇವಲ ರಾಜಕೀಯ ಮತ್ತು ಚುನಾವಣೆಗಾಗಿ ಅಲ್ಲ, ಕೇವಲ ದೇವಸ್ಥಾನಗಳಿಗೆ ಸೀಮಿತವಲ್ಲ. ನಮ್ಮ ಹಿಂದುತ್ವವು ಜನರಿಗೆ ಆಹಾರ, ಬಟ್ಟೆ ಮತ್ತು ವಸತಿ ಸಿಗುವಂತೆ ನೋಡಿಕೊಳ್ಳುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ವಿಧಾನಸಭಾ ಚುನಾವಣೆ: 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...